ರಾಜ್ಯ

ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಡಿಸಿಎಂ ಡಿಕೆ ಶಿವಕುಮಾರ್ ಪಾರು

ಸಿಂಧನೂರು ಪಟ್ಟಣದಲ್ಲಿ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಸಚಿವರನ್ನು ಕೂಡಲೇ ಅಲ್ಲಿಂದ ಹೊರಕರತರಲಾಯಿತು.

ರಾಯಚೂರು: ಸಿಂಧನೂರು ಪಟ್ಟಣದಲ್ಲಿ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಸಚಿವರನ್ನು ಕೂಡಲೇ ಅಲ್ಲಿಂದ ಹೊರಕರತರಲಾಯಿತು.

ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕಾಗಿ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಈಶ್ವರ ಖಂಡ್ರೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ನವ ಜೋಡಿಗಳಿಗೆ ಶುಭಕೋರಿದ ಬಳಿಕ ವೇದಿಕೆ ಬಳಿ ಶಿವಕುಮಾರ್ ತೆರಳುತ್ತಿದ್ದ ವೇಳೆ ವೇದಿಕೆಯ ಮೆಟ್ಟಿಲುಗಳ ಬಳಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣ ಅಲರ್ಟ್ ಆದ ಪೊಲೀಸ್ ಸಿಬ್ಬಂದಿ ಶಿವಕುಮಾರ್ ಹಾಗೂ ಈಶ್ವರ ಖಂಡ್ರೆ ಅವರನ್ನು ಬೇರೆಡೆ ಕರೆದೊಯ್ದರು. ತಾಂತ್ರಿಕ ದೋಷದಿಂದಾಗಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Monsoon 2026: ಸಿಹಿಸುದ್ದಿ.. ಅವಧಿಗಿಂತ ಮೊದಲೇ ಅಪ್ಪಳಿಸಲಿದೆ ಮುಂಗಾರು ಮಳೆ; ಅಂಡಮಾನ್ ಮತ್ತು ಕೇರಳಕ್ಕೆ ಶೀಘ್ರ ಆಗಮನ: IMD

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ಬೈಗುಳ, ಕಿರುಕುಳ: ಸುಪ್ರೀಂ ಬಳಿ ಕಷ್ಟ ಹೇಳಿಕೊಂಡ Actor Darshan

IPL 2026: ವೈಭವ್ ಸೂರ್ಯವಂಶಿ Unprofessional, ವಿವಾದಾತ್ಮಕ ಹೇಳಿಕೆ ಕುರಿತು ಸ್ಪಷ್ಟನೆ ಕೊಟ್ಟ RCB ಸ್ಟಾರ್ ಆಟಗಾರ Jitesh Sharma

ಅಕ್ಕನ ಮಗನೊಂದಿಗೆ ಪತ್ನಿ ಅಕ್ರಮ ಸಂಬಂಧ; ಬೇಸತ್ತ ಪತಿ ಮಕ್ಕಳ ಕೊಂದು ತಾನೂ ಆತ್ಮಹತ್ಯೆಗೆ ಶರಣು!

ವೋಟ್‌ ಚೋರಿ ಎನ್ನುವ ರಾಹುಲ್‌ ಗಾಂಧಿ ಈಗ ಎಲ್ಲಿದ್ದಾರೆ? ಆರ್. ಅಶೋಕ್ ಕಿಡಿ!

SCROLL FOR NEXT