ನಟ ದರ್ಶನ್ 
ರಾಜ್ಯ

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ಬೈಗುಳ, ಕಿರುಕುಳ: ಸುಪ್ರೀಂ ಕೋರ್ಟ್ ಬಳಿ ಕಷ್ಟ ಹೇಳಿಕೊಂಡ Actor Darshan

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಜಾಮೀನು (Bail) ಪಡೆಯಲು ಹರಸಾಹಸ ಪಡುತ್ತಿದ್ದು, ಜಾಮೀನಿಗಾಗಿ ಅವರು ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ನಟ ದರ್ಶನ್, ಜೈಲಿನಲ್ಲಿ ತಮಗೆ ಎದುರಾಗುತ್ತಿರುವ ಸಂಕಷ್ಟಗಳ ಕುರಿತು ಸುಪ್ರೀಂ ಕೋರ್ಟ್ ಬಳಿ ಅಳಲು ತೋಡಿಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಜಾಮೀನು (Bail) ಪಡೆಯಲು ಹರಸಾಹಸ ಪಡುತ್ತಿದ್ದು, ಜಾಮೀನಿಗಾಗಿ ಅವರು ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ನಟ ದರ್ಶನ್ ಜೈಲಿನಲ್ಲಿ ತಮಗಾಗುತ್ತಿರುವ ಹತ್ತು ಹಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾಧ್ಯಮವೊಂದು ವರದಿ ಮಾಡಿದ್ದು, ನಟ ದರ್ಶನ್ ಅವರು ಪರಪ್ಪನ ಅಗ್ರಹಾರದಲ್ಲಿ ಜೈಲಿನಲ್ಲಿ ತಮಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ.

ದೀರ್ಘಕಾಲದ ಜೈಲುವಾಸದಿಂದ ವೃತ್ತಿ ಜೀವನಕ್ಕೆ ತೊಂದರೆ ಆಗಿದೆ. ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ ಎಂದು ಕೂಡ ಅವರು ಹೇಳಿದ್ದಾರೆ.

ಸಹಕೈದಿಗಳಿಂದ ಕಿರುಕುಳ, ಬೈಗುಳ

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ ಹಾಕಲಾಗುತ್ತಿದೆ. ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ತಮ್ಮನ್ನು ಕ್ವಾರಂಟೈನ್ ಸೆಲ್​ನಲ್ಲಿಡಲಾಗಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಹಾನಿಕಾರಕ ಪರಿಣಾಮವಾಗುತ್ತಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ ಅವರು ಕಷ್ಟ ಹೇಳಿಕೊಂಡಿದ್ದಾರೆ.

ಆಹಾರ, ಬಟ್ಟೆ, ಹಾಸಿಗೆ ಪಡೆಯಲೂ ಬಿಡುತ್ತಿಲ್ಲ

ಇದಲ್ಲದೆ ಜೈಲಿನಲ್ಲಿ ಸಹ-ಕೈದಿಗಳು ನಿಂದನೆ, ಮೂದಲಿಸುವುದು ಸೇರಿ ಹಲವು ರೀತಿ ಪ್ರಚೋದನೆ ನೀಡುತ್ತಿದ್ದಾರೆ. ಮಾಧ್ಯಮದಲ್ಲಿ ನೆಗೆಟಿವ್ ಪ್ರಚಾರದಿಂದ ಸಮಸ್ಯೆ ಬಿಗಡಾಯಿಸಿದೆ. ಜೈಲಿನಲ್ಲಿ ಇತರೆ ಕೈದಿಗಳಿಗಿಂತ ತಾರತಮ್ಯ ಮಾಡಲಾಗುತ್ತಿದೆ. ಕುಟುಂಬದವರ ಭೇಟಿಗೆ ಸಮಾನ ಸಮಯ ನೀಡುತ್ತಿಲ್ಲ. ಆಹಾರ, ಬಟ್ಟೆ, ಹಾಸಿಗೆ ಪಡೆಯಲೂ ಬಿಡುತ್ತಿಲ್ಲ. ಜೈಲು ಸೆಲ್​ನ ಕಾರಿಡಾರ್​​ನಲ್ಲಿ ಮಾತ್ರ ವಾಕ್ ಮಾಡಲು ಬಿಡುತ್ತಿದ್ದಾರೆ. ಬೆನ್ನು ನೋವಿದ್ದರೂ ಕೇವಲ 2-3 ಮಾತ್ರ ಫಿಸಿಯೋಥೆರಪಿ ಮಾಡಲಾಗಿದೆ ಎಂದು ಜಾಮೀನು ಅರ್ಜಿಯಲ್ಲಿ ತಿಳಿಸಲಾಗಿದೆ.

ಸುದೀರ್ಘ ಜೈಲುವಾಸದಿಂದ ಜೀವನೋಪಾಯಕ್ಕೂ ಸಮಸ್ಯೆ ಆಗಿದೆ. ಪ್ರತಿ ವರ್ಷ 2 ಅಥವಾ 3 ಚಿತ್ರಗಳಿಗೆ ಸಹಿ ಮಾಡುತ್ತಿದ್ದೆ. ಜಾಮೀನು ರದ್ದುಪಡಿಸುವ ವೇಳೆಯೂ 3 ಸಿನಿಮಾಗಳಿಗೆ ಸಹಿ ಮಾಡಿದ್ದೆ. ಕೆವಿಎನ್ ಪ್ರೊಡಕ್ಷನ್ಸ್, ಮೀಡಿಯಾ ಹೌಸ್ ಸ್ಟೂಡಿಯೋಸ್​ನ ಸಿನಿಮಾಗಳಿಗೆ ಸಹಿ ಮಾಡಲಾಗಿತ್ತು. ನಿರ್ಮಾಪಕರು 6 ಕೋಟಿ ರೂಪಾಯಿ ಬಂಡವಾಳ ಹೂಡಿದ್ದಾರೆ. ಜೈಲು ಸೇರಿದ್ದರಿಂದ ಸಿನಿಮಾ ನಿಂತುಹೋಗಿದೆ ಎಂದು ದರ್ಶನ್ ಸಮಸ್ಯೆ ಹೇಳಿಕೊಂಡಿದ್ದಾರೆ.

ವೃತ್ತಿ ಜೀವನ ಹಾಳಾಗಿದೆ, ವಿಚಾರಣೆ ಮುಗಿಯುವ ಲಕ್ಷಣಗಳೇ ಇಲ್ಲ

ಹೊಸ ಚಿತ್ರಗಳನ್ನೂ ಕಳೆದುಕೊಂಡಿರುವುದರಿಂದ ನಷ್ಟ ಆಗಿದೆ. ಸುದೀರ್ಘ ಜೈಲುವಾಸವು ವೃತ್ತಿಜೀವನಕ್ಕೆ ಮರಣಗಂಟೆಯಾಗಲಿದೆ. ವೃತ್ತಿ ನಡೆಸುವ ಮೂಲಭೂತ ಹಕ್ಕಿನ ಹರಣವಾಗಲಿದೆ. 262 ಸಾಕ್ಷಿಗಳ ವಿಚಾರಣೆ ಆಗಬೇಕೆಂದು ಆರೋಪಪಟ್ಟಿ ಸಲ್ಲಿಸಲಾಗಿದೆ.

8 ತಿಂಗಳಿನಿಂದ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ಆಗಿದೆ ಶೀಘ್ರದಲ್ಲಿ ಸಾಕ್ಷ್ಯ ವಿಚಾರಣೆ ಮುಗಿಯುವ ಲಕ್ಷಣಗಳಿಲ್ಲ. ಹೀಗಾಗಿ ಜಾಮೀನು ನೀಡುವಂತೆ ದರ್ಶನ್ ಮನವಿ ಸಲ್ಲಿಸಿದ್ದಾರೆ.

ಅಂದಹಾಗೆ ಸೋಮವಾರ (ಮೇ 4) ಸುಪ್ರೀಂಕೋರ್ಟ್​​ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈ ಮೊದಲು ಅವರಿಗೆ ನೀಡಿದ್ದ ಜಾಮೀನನ್ನು ರದ್ದು ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದ್ರೂ 6ನೇ ಸುತ್ತಿನ ಮಾತುಕತೆ ವಿಫಲ, ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಹೃದಯ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!

ರಸಪ್ರಶ್ನೆ ಸ್ಪರ್ಧೆಯಲ್ಲಿ ವಿ.ಡಿ ಸಾವರ್ಕರ್ ಹೊಗಳಿಕೆಯ ಪ್ರಶ್ನೆ! ಕೇರಳದ ಶಿಕ್ಷಕ ಅಮಾನತು!