ಬೈರತಿ ಬಸವರಾಜು 
ರಾಜ್ಯ

ನನ್ನ ಹತ್ಯೆಯಾದರೆ ಶಾಸಕ ಬೈರತಿ ಬಸವರಾಜು ಹೊಣೆ: AAP ನಾಯಕಿ ಗಂಭೀರ ಆರೋಪ

ಬೈರತಿ ಬಸವರಾಜ್ ಬೆಂಬಲಿಗರು ತನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಧ್ವಂಸಗೊಳಿಸಿದ್ದಲ್ಲದೆ, ತನಗೆ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ವಿಜ್ಞಾನ ನಗರ ವಾರ್ಡ್ ಅಧ್ಯಕ್ಷೆ ಸತ್ಯವಾಣಿ ದೂರಿದ್ದಾರೆ.

ಬೆಂಗಳೂರು: ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆ ಎದುರಿಸುತ್ತಿರುವ ಕೆ.ಆರ್. ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರಿಗೆ ಈಗ ಮತ್ತೊಂದು ಹೊಸ ಸಂಕಷ್ಟ ಎದುರಾಗಿದೆ.

ನಗರದ ಕೆ.ಆರ್. ಪುರಂ ವಿಧಾನಸಭಾ ಕ್ಷೇತ್ರದ ವಿಜ್ಞಾನ ನಗರ ವಾರ್ಡಿನ ಆಮ್ ಆದ್ಮಿ ಪಕ್ಷದ ಅಧ್ಯಕ್ಷೆ ಸತ್ಯವಾಣಿ ರವರ ಮನೆ ಮುಂದೆ ಅವರ ಕಾರನ್ನು ಜಖಂಗೊಳಿಸಲಾಗಿದೆ. ಈ ಸಂಬಂಧ ಬಿಜೆಪಿ ಸ್ಥಳೀಯ ಮುಖಂಡರುಗಳ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಬೈರತಿ ಬಸವರಾಜ್ ಬೆಂಬಲಿಗರು ತನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಧ್ವಂಸಗೊಳಿಸಿದ್ದಲ್ಲದೆ, ತನಗೆ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ವಿಜ್ಞಾನ ನಗರ ವಾರ್ಡ್ ಅಧ್ಯಕ್ಷೆ ಸತ್ಯವಾಣಿ ದೂರಿದ್ದಾರೆ.

ಕಳೆದ ತಿಂಗಳು ಕೂಡ ಶಾಸಕರು ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವಂತಹ ಸುಮಾರು 50 ಬೃಹತ್ ಫ್ಲೆಕ್ಸ್ ಬ್ಯಾನರ್‌ಗಳನ್ನು ವಾರ್ಡ್‌ನಾದ್ಯಂತ ಹಾಕಿಸಿದ್ದರು ಎಂದು ಕಿಡಿಕಾರಿದ ಆಪ್ ನಾಯಕಿ, ಆರಂಭದಲ್ಲಿ ಈ ಬಗ್ಗೆ ದೂರು ನೀಡಲು ಹೋದಾಗ ಎಚ್‌ಎಎಲ್ ಪೊಲೀಸರು ಶಾಸಕರ ಒತ್ತಡಕ್ಕೆ ಮಣಿದು ದೂರು ಸ್ವೀಕರಿಸಲು ನಿರಾಕರಿಸಿದ್ದರು, ನಂತರ ಲೋಕಾಯುಕ್ತರ ಮೊರೆ ಹೋದ ಮೇಲೆ ಪ್ರಕರಣ ದಾಖಲಾಗಿತ್ತು ಎಂದು ದೂರಿದ್ದಾರೆ.

ಮುಂಬರುವ ಜಿಬಿಎ (GBA) ಚುನಾವಣೆಗಳಿಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿರುವ ಕಾರಣಕ್ಕಾಗಿಯೇ ತನ್ನ ಮೇಲೆ ಇಂತಹ ಹಲ್ಲೆ ನಡೆಯುತ್ತಿದೆ, ಹಾಗೂ ನನಗೆ ಬೆದರಿಕೆಗಳು ಬರುತ್ತಿವೆ ಎಂದು ಸತ್ಯವಾಣಿ ಆರೋಪಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಕೆರೆ ಒತ್ತುವರಿ ವಿರುದ್ಧ ಹೋರಾಟ ನಡೆಸುತ್ತಿರುವ ತನಗೆ ಏನಾದರೂ ತೊಂದರೆಯಾದರೆ ಅದಕ್ಕೆ ನೇರವಾಗಿ ಶಾಸಕ ಬೈರತಿ ಬಸವರಾಜ್ ಅವರೇ ಹೊಣೆ ಎಂದು ಅವರು ಎಚ್ಚರಿಸಿದ್ದಾರೆ.

ಪೊಲೀಸರು ಶಾಸಕರ ಪ್ರಭಾವಕ್ಕೆ ಒಳಗಾಗಿ ಕೆಲಸ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಮತ್ತು ಈ ಘಟನೆಯು ಕೆ.ಆರ್. ಪುರಂನಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ದಾವಣಗೆರೆ-ಹರಿಹರ ಅವಳಿ ನಗರ ಅಭಿವೃದ್ಧಿಗೆ 'ಮಾಸ್ಟರ್ ಪ್ಲಾನ್ 2041' ಕ್ಕೆ ಸರ್ಕಾರದ ಅನುಮೋದನೆ!