ಬೈರತಿ ಬಸವರಾಜು 
ರಾಜ್ಯ

ನನ್ನ ಹತ್ಯೆಯಾದರೆ ಶಾಸಕ ಬೈರತಿ ಬಸವರಾಜು ಹೊಣೆ: AAP ನಾಯಕಿ ಗಂಭೀರ ಆರೋಪ

ಬೈರತಿ ಬಸವರಾಜ್ ಬೆಂಬಲಿಗರು ತನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಧ್ವಂಸಗೊಳಿಸಿದ್ದಲ್ಲದೆ, ತನಗೆ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ವಿಜ್ಞಾನ ನಗರ ವಾರ್ಡ್ ಅಧ್ಯಕ್ಷೆ ಸತ್ಯವಾಣಿ ದೂರಿದ್ದಾರೆ.

ಬೆಂಗಳೂರು: ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆ ಎದುರಿಸುತ್ತಿರುವ ಕೆ.ಆರ್. ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರಿಗೆ ಈಗ ಮತ್ತೊಂದು ಹೊಸ ಸಂಕಷ್ಟ ಎದುರಾಗಿದೆ.

ನಗರದ ಕೆ.ಆರ್. ಪುರಂ ವಿಧಾನಸಭಾ ಕ್ಷೇತ್ರದ ವಿಜ್ಞಾನ ನಗರ ವಾರ್ಡಿನ ಆಮ್ ಆದ್ಮಿ ಪಕ್ಷದ ಅಧ್ಯಕ್ಷೆ ಸತ್ಯವಾಣಿ ರವರ ಮನೆ ಮುಂದೆ ಅವರ ಕಾರನ್ನು ಜಖಂಗೊಳಿಸಲಾಗಿದೆ. ಈ ಸಂಬಂಧ ಬಿಜೆಪಿ ಸ್ಥಳೀಯ ಮುಖಂಡರುಗಳ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಬೈರತಿ ಬಸವರಾಜ್ ಬೆಂಬಲಿಗರು ತನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಧ್ವಂಸಗೊಳಿಸಿದ್ದಲ್ಲದೆ, ತನಗೆ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ವಿಜ್ಞಾನ ನಗರ ವಾರ್ಡ್ ಅಧ್ಯಕ್ಷೆ ಸತ್ಯವಾಣಿ ದೂರಿದ್ದಾರೆ.

ಕಳೆದ ತಿಂಗಳು ಕೂಡ ಶಾಸಕರು ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವಂತಹ ಸುಮಾರು 50 ಬೃಹತ್ ಫ್ಲೆಕ್ಸ್ ಬ್ಯಾನರ್‌ಗಳನ್ನು ವಾರ್ಡ್‌ನಾದ್ಯಂತ ಹಾಕಿಸಿದ್ದರು ಎಂದು ಕಿಡಿಕಾರಿದ ಆಪ್ ನಾಯಕಿ, ಆರಂಭದಲ್ಲಿ ಈ ಬಗ್ಗೆ ದೂರು ನೀಡಲು ಹೋದಾಗ ಎಚ್‌ಎಎಲ್ ಪೊಲೀಸರು ಶಾಸಕರ ಒತ್ತಡಕ್ಕೆ ಮಣಿದು ದೂರು ಸ್ವೀಕರಿಸಲು ನಿರಾಕರಿಸಿದ್ದರು, ನಂತರ ಲೋಕಾಯುಕ್ತರ ಮೊರೆ ಹೋದ ಮೇಲೆ ಪ್ರಕರಣ ದಾಖಲಾಗಿತ್ತು ಎಂದು ದೂರಿದ್ದಾರೆ.

ಮುಂಬರುವ ಜಿಬಿಎ (GBA) ಚುನಾವಣೆಗಳಿಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿರುವ ಕಾರಣಕ್ಕಾಗಿಯೇ ತನ್ನ ಮೇಲೆ ಇಂತಹ ಹಲ್ಲೆ ನಡೆಯುತ್ತಿದೆ, ಹಾಗೂ ನನಗೆ ಬೆದರಿಕೆಗಳು ಬರುತ್ತಿವೆ ಎಂದು ಸತ್ಯವಾಣಿ ಆರೋಪಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಕೆರೆ ಒತ್ತುವರಿ ವಿರುದ್ಧ ಹೋರಾಟ ನಡೆಸುತ್ತಿರುವ ತನಗೆ ಏನಾದರೂ ತೊಂದರೆಯಾದರೆ ಅದಕ್ಕೆ ನೇರವಾಗಿ ಶಾಸಕ ಬೈರತಿ ಬಸವರಾಜ್ ಅವರೇ ಹೊಣೆ ಎಂದು ಅವರು ಎಚ್ಚರಿಸಿದ್ದಾರೆ.

ಪೊಲೀಸರು ಶಾಸಕರ ಪ್ರಭಾವಕ್ಕೆ ಒಳಗಾಗಿ ಕೆಲಸ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಮತ್ತು ಈ ಘಟನೆಯು ಕೆ.ಆರ್. ಪುರಂನಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka By-poll & Assembly elections 2026 LIVE updates (KL, TN, AS, WB): ತಮಿಳುನಾಡಿನಲ್ಲಿ ನಟ ವಿಜಯ್ ಮ್ಯಾಜಿಕ್; ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಗೆಲುವು; ಕೇರಳದಲ್ಲಿ ಯುಡಿಎಫ್ ಅಲೆ

Tamil Nadu: ಸೋಲಿನತ್ತ DMK, ಷೇರುಮಾರುಕಟ್ಟೆಯಲ್ಲಿ Sun TV ಷೇರುಗಳ ಗಣನೀಯ ಕುಸಿತ

5 States Election results 2026: ತ.ನಾಡಿನಲ್ಲಿ TVK Vijay ಐತಿಹಾಸಿಕ ಸಾಧನೆ, ದೀದಿ 'ಕೈ' ತಪ್ಪಿದ ಬಂಗಾಳ, ಅಸ್ಸಾಂನಲ್ಲಿ BJP ಕ್ಲೀನ್ ಸ್ವೀಪ್, ಕೇರಳದಲ್ಲಿ UDF ಅಲೆ

Bagalkot By Election Result 2026​​: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಗೆಲುವು; ಮೊದಲ ಚುನಾವಣೆಯಲ್ಲೇ ದಾಖಲೆ; ಬಿಜೆಪಿಗೆ ಅಘಾತ!

ಪಂಚರಾಜ್ಯ ಚುನಾವಣೆ ಫಲಿತಾಂಶ 2026: ಬಂಗಾಳದಲ್ಲಿ BJP ಮುನ್ನಡೆ, ಕೇಸರಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಆಲೂ ಪೂರಿ, ರಸಗುಲ್ಲ ಸಿದ್ಧತೆ

SCROLL FOR NEXT