ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ 
ರಾಜ್ಯ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ: ಪರಿಹಾರ ಹೆಚ್ಚಿಸಿ-ನ್ಯಾಯಾಂಗ ತನಿಖೆ ನಡೆಸಿ; ಸರ್ಕಾರಕ್ಕೆ ವ್ಯಾಪಾರಿಗಳ ಒತ್ತಾಯ

ಗಾಯಗೊಂಡವರು ಸಂಪೂರ್ಣ ಚೇತರಿಸಿಕೊಳ್ಳಲು ಹಲವು ತಿಂಗಳುಗಳು ಬೇಕಾಗುವ ಕಾರಣ, ಅವರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಸಂಘಟನೆ ಹೇಳಿದೆ.

ಬೆಂಗಳೂರು: ಏಪ್ರಿಲ್ 29ರಂದು ಸಂಭವಿಸಿದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತ ಹಿನ್ನೆಲೆಯಲ್ಲಿ ನಗರದಲ್ಲಿನ ಬೀದಿ ವ್ಯಾಪಾರಿಗಳ ಸಂಘಟನೆ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪರಿಹಾರ ಮೊತ್ತವನ್ನು ಹೆಚ್ಚಿಸಿ, ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ, ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಲಾಗುತ್ತಿರುವ ರೂ.5 ಲಕ್ಷ ಪರಿಹಾರವನ್ನು ರೂ.25 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದೆ. ಜೊತೆಗೆ ಗಾಯಗೊಂಡ ಪ್ರತಿಯೊಬ್ಬ ವ್ಯಾಪಾರಿಗೂ ರೂ.10 ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿದೆ.

ಗಾಯಗೊಂಡವರು ಸಂಪೂರ್ಣ ಚೇತರಿಸಿಕೊಳ್ಳಲು ಹಲವು ತಿಂಗಳುಗಳು ಬೇಕಾಗುವ ಕಾರಣ, ಅವರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಸಂಘಟನೆ ಹೇಳಿದೆ.

ಇದಲ್ಲದೆ, ಈ ದುರಂತದಲ್ಲಿ ಹಲವಾರು ವ್ಯಾಪಾರಿಗಳು ತಮ್ಮ ಸರಕುಗಳನ್ನು ಕಳೆದುಕೊಂಡಿರುವುದರಿಂದ, ಆ ನಷ್ಟಕ್ಕೂ ಪರಿಹಾರ ನೀಡಬೇಕು. ಅಪಾಯಕಾರಿ ಕಟ್ಟಡಗಳ ಸಮೀಪ ವ್ಯಾಪಾರ ನಡೆಸಬಾರದು ಎಂಬ ಸೂಚನೆ ಹಿನ್ನೆಲೆ ಸುರಕ್ಷಿತ ಮತ್ತು ಸೂಕ್ತ ಪರ್ಯಾಯ ವ್ಯಾಪಾರ ಸ್ಥಳಗಳನ್ನು ಗುರುತಿಸಿ ಸ್ಥಳ ಒದಗಿಸಲು ಸರ್ಕಾರ ತಕ್ಷಣವೇ ವ್ಯಾಪಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಸಂಘ ಒತ್ತಾಯಿಸಿದೆ.

ಇದೇ ವೇಳೆ ಗೋಡೆ ಕುಸಿತಕ್ಕೆ ಕಾರಣರಾದವರನ್ನು ಗುರುತಿಸಲು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಸಂಘಟನೆ ಒತ್ತಾಯಿಸಿದ್ದು, ಹವಾಮಾನ ಬದಲಾವಣೆಯಿಂದ ಕಾರ್ಮಿಕರು—ಬೀದಿ ವ್ಯಾಪಾರಿಗಳು, ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕರು, ಪೌರಕಾರ್ಮಿಕರು—ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಬೇಕು ಎಂದೂ ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಏರ್ ಇಂಡಿಯಾ ಟರ್ಬುಲೆನ್ಸ್: ಪೈಲಟ್ ಗಾಂಜಾ ಸೇವಿಸಿದ್ದು ದೃಢ- ವರದಿಗಳು

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 6 ಕಾರ್ಮಿಕರು ಸೇರಿ 9 ಮಂದಿ ದುರ್ಮರಣ

ಪಾಕ್‌ನಲ್ಲಿ ವಿಧ್ವಂಸ: ಕರಾಚಿಯಲ್ಲಿ ಪ್ರಧಾನ ಸೇನಾ ಕಚೇರಿ ಮೇಲೆ ಭೀಕರ ಗುಂಡಿನ ದಾಳಿ, ಓರ್ವ ಸೈನಿಕ ಸಾವು!

ಜಾರ್ಖಂಡ್‌ಗೆ ಏಕೆ ಹೋಗಲಿಲ್ಲ? ಸಂಸತ್ತಿನ ಆವರಣದಲ್ಲಿ ಬಿಜೆಪಿ ಸಂಸದನ ಮಾತಿಗೆ ತಬ್ಬಿಬ್ಬಾದ ಪ್ರಿಯಾಂಕಾ ವಾದ್ರಾ, Video

ವಿಧಾನಸಭೆಗೆ ಆಗಸ್ಟ್ 14 ರಂದು ಹೊಸ ಸ್ಪೀಕರ್ ಆಯ್ಕೆ