ಗೃಹ ಸಚಿವ ಪರಮೇಶ್ವರ್ 
ರಾಜ್ಯ

ಮಾದಾವರ–ತುಮಕೂರು ಮೆಟ್ರೋ ವಿಸ್ತರಣೆ: ಒಂದು ವಾರದಲ್ಲಿ DPR ಸಲ್ಲಿಕೆ- ಸಚಿವ ಪರಮೇಶ್ವರ್

ಮಾದಾವರದಿಂದ ತುಮಕೂರಿಗೆ ಮೆಟ್ರೋ ಸಂಪರ್ಕ ವಿಸ್ತರಣೆಗೊಂಡರೆ, ಎರಡು ನಗರಗಳ ನಡುವೆ ಸಂಚಾರ ಸುಗಮವಾಗಲಿದೆ. DPR ಸಿದ್ಧವಾಗುತ್ತಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.

ತುಮಕೂರು: ಬೆಂಗಳೂರಿನ ಮಾದಾವರದಿಂದ ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆ ಯೋಜನೆಗೆ ಸಂಬಂಧಿಸಿದ ವಿವರವಾದ ಯೋಜನಾ ವರದಿ (DPR) ಒಂದು ವಾರದೊಳಗೆ ಸಲ್ಲಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಹೇಳಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಮಾದಾವರದಿಂದ ತುಮಕೂರಿಗೆ ಮೆಟ್ರೋ ಸಂಪರ್ಕ ವಿಸ್ತರಣೆಗೊಂಡರೆ, ಎರಡು ನಗರಗಳ ನಡುವೆ ಸಂಚಾರ ಸುಗಮವಾಗಲಿದೆ. DPR ಸಿದ್ಧವಾಗುತ್ತಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ತುಮಕೂರನ್ನು ಕ್ರೀಡಾ ಕೇಂದ್ರವಾಗಿ ರೂಪಿಸುವ ಉದ್ದೇಶವನ್ನೂ ವಿವರಿಸಿದ ಅವರು. ಇತ್ತೀಚೆಗೆ ತುಮಕೂರಿನಲ್ಲಿ ರಾಷ್ಟ್ರೀಯ ಮಟ್ಟದ ಜೂನಿಯರ್ ಅಥ್ಲೆಟಿಕ್ಸ್ ಸ್ಪರ್ಧೆಗಳು ನಡೆದಿದ್ದು, ಪ್ರಸ್ತುತ ಮಹಿಳಾ ITF ಟೆನಿಸ್ ಟೂರ್ ಪಂದ್ಯಾವಳಿ ನಡೆಯುತ್ತಿದೆ ಎಂದು ತಿಳಿಸಿದರು.

ತುಮಕೂರಿನ ಪಿ. ಗೊಲ್ಲಹಳ್ಳಿ ಸಮೀಪ 42 ಎಕರೆ ಪ್ರದೇಶವನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಮೀಸಲಿರಿಸಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ. ಈ ಮೈದಾನ ಪೂರ್ಣಗೊಂಡ ಬಳಿಕ ಅಂತರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯ ವಹಿಸುವ ಸಾಮರ್ಥ್ಯ ಹೊಂದಲಿದೆ. ಮುಂದಿನ ದಿನಗಳಲ್ಲಿ ತುಮಕೂರು ‘ಸ್ಪೋರ್ಟ್ಸ್ ಸಿಟಿ’ ಆಗಿ ಬೆಳೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!

ದೇಶದ ಮೊದಲ ಖಾಸಗಿ ಚಿನ್ನದ ಗಣಿ ಉದ್ಘಾಟಿಸಿದ ಆಂಧ್ರ CM; ಪ್ರತಿ ವರ್ಷ 900 ಕೆಜಿ ಚಿನ್ನ ಉತ್ಪಾದನೆ!

ಖರ್ಗೆ ಕುಟುಂಬದಿಂದ 100 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಲೂಟಿ: BJP ಗಂಭೀರ ಆರೋಪ

ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ- ಸಿಲ್ಕ್ ಬೋರ್ಡ್ ವರೆಗೆ 1,300 ಕೋಟಿ ರೂ ವೆಚ್ಚದಲ್ಲಿ ಎಲಿವೇಟೆಡ್ ಕಾರಿಡಾರ್: ಟೋಲ್ ಬದಲು Value Capture Financing ಗೆ ಪ್ರಸ್ತಾವನೆ!