ಗೃಹ ಸಚಿವ ಪರಮೇಶ್ವರ್ 
ರಾಜ್ಯ

ಮಾದಾವರ–ತುಮಕೂರು ಮೆಟ್ರೋ ವಿಸ್ತರಣೆ: ಒಂದು ವಾರದಲ್ಲಿ DPR ಸಲ್ಲಿಕೆ- ಸಚಿವ ಪರಮೇಶ್ವರ್

ಮಾದಾವರದಿಂದ ತುಮಕೂರಿಗೆ ಮೆಟ್ರೋ ಸಂಪರ್ಕ ವಿಸ್ತರಣೆಗೊಂಡರೆ, ಎರಡು ನಗರಗಳ ನಡುವೆ ಸಂಚಾರ ಸುಗಮವಾಗಲಿದೆ. DPR ಸಿದ್ಧವಾಗುತ್ತಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.

ತುಮಕೂರು: ಬೆಂಗಳೂರಿನ ಮಾದಾವರದಿಂದ ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆ ಯೋಜನೆಗೆ ಸಂಬಂಧಿಸಿದ ವಿವರವಾದ ಯೋಜನಾ ವರದಿ (DPR) ಒಂದು ವಾರದೊಳಗೆ ಸಲ್ಲಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಹೇಳಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಮಾದಾವರದಿಂದ ತುಮಕೂರಿಗೆ ಮೆಟ್ರೋ ಸಂಪರ್ಕ ವಿಸ್ತರಣೆಗೊಂಡರೆ, ಎರಡು ನಗರಗಳ ನಡುವೆ ಸಂಚಾರ ಸುಗಮವಾಗಲಿದೆ. DPR ಸಿದ್ಧವಾಗುತ್ತಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ತುಮಕೂರನ್ನು ಕ್ರೀಡಾ ಕೇಂದ್ರವಾಗಿ ರೂಪಿಸುವ ಉದ್ದೇಶವನ್ನೂ ವಿವರಿಸಿದ ಅವರು. ಇತ್ತೀಚೆಗೆ ತುಮಕೂರಿನಲ್ಲಿ ರಾಷ್ಟ್ರೀಯ ಮಟ್ಟದ ಜೂನಿಯರ್ ಅಥ್ಲೆಟಿಕ್ಸ್ ಸ್ಪರ್ಧೆಗಳು ನಡೆದಿದ್ದು, ಪ್ರಸ್ತುತ ಮಹಿಳಾ ITF ಟೆನಿಸ್ ಟೂರ್ ಪಂದ್ಯಾವಳಿ ನಡೆಯುತ್ತಿದೆ ಎಂದು ತಿಳಿಸಿದರು.

ತುಮಕೂರಿನ ಪಿ. ಗೊಲ್ಲಹಳ್ಳಿ ಸಮೀಪ 42 ಎಕರೆ ಪ್ರದೇಶವನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಮೀಸಲಿರಿಸಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ. ಈ ಮೈದಾನ ಪೂರ್ಣಗೊಂಡ ಬಳಿಕ ಅಂತರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯ ವಹಿಸುವ ಸಾಮರ್ಥ್ಯ ಹೊಂದಲಿದೆ. ಮುಂದಿನ ದಿನಗಳಲ್ಲಿ ತುಮಕೂರು ‘ಸ್ಪೋರ್ಟ್ಸ್ ಸಿಟಿ’ ಆಗಿ ಬೆಳೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್