ಚಿಕ್ಕಮಗಳೂರು: ಮನೆಯ ಪಕ್ಕದಲ್ಲಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು 12 ವರ್ಷದ ನಯಾಜ್, 9 ವರ್ಷದ ಅಬ್ದುಲ್ ರೆಹಮಾನ್, ಮದಿನಾ ಬಾನು ಮತ್ತು 8 ವರ್ಷದ ಆರುನ್ ಎಂದು ಗುರುತಿಸಲಾಗಿದೆ. ಅರ್ಮನ್ ಎಂಬಾತನನ್ನು ರಕ್ಷಿಸಲಾಗಿದ್ದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.