ಸಂಗ್ರಹ ಚಿತ್ರ 
ರಾಜ್ಯ

ಹೇಳದೆ ಬೈಕ್ ತೆಗೆದುಕೊಂಡು ಹೋಗಿದ್ದಕ್ಕೆ ಕೋಪ: ಮಗನ ಮೇಲೆ ಪೆಟ್ರೋಲ್ ಎರಚಿದ ತಂದೆ; ಬೆಂಕಿ ತಗುಲಿ ಇಬ್ಬರಿಗೂ ಗಾಯ..!

ಮಲ್ಲಿಕಾರ್ಜುನ್ ದೊಡ್ಡಮನಿ ಟೈಲ್ಸ್ ವರ್ಕ್ಸ್ ಕೆಲಸ ಮಾಡುತ್ತಿದ್ದರು. ಗಾರೆ ಕೆಲಸ ಮಾಡುತ್ತಿದ್ದ ಆನಂದ್ ದೊಡ್ಡಮನಿ ಮೇ 1ರಂದು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ರಜೆ ಇದ್ದುದರಿಂದ ಮನೆಯಲ್ಲಿದ್ದರು.

ಬೆಂಗಳೂರು‌: ತನ್ನ ಅನುಮತಿ ಪಡೆಯದೆ ಬೈಕ್ ತೆಗೆದುಕೊಂಡು ಹೋದ ಎಂಬ ಸಿಟ್ಟಿಗೆ ತಂದೆಯೊಬ್ಬ ತನ್ನ ಮಗನ ಮೇಲೆಯೇ ಪೆಟ್ರೋಲ್ ಎರಚಿದ್ದು, ಈ ವೇಳೆ ಬೆಂಕಿ ತಗುಲಿ ಇಬ್ಬರಿಗೂ ಗಾಯವಾಗಿರುವ ಘಟನೆಯೊಂದು ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿಪುರದಲ್ಲಿ ನಡೆದಿದೆ.

ಮಗ ಮಲ್ಲಿಕಾರ್ಜುನ್ (19) ಗಂಭೀರವಾಗಿ ಗಾಯಗೊಂಡರೆ, ತಂದೆ ಆನಂದ್ ದೊಡ್ಡಮನಿ (45) ಕೂಡಾ ಗಾಯಗೊಂಡಿದ್ದಾರೆ. ಇದೀಬ ಇಬ್ಬರಿಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಮಲ್ಲಿಕಾರ್ಜುನ್ ದೊಡ್ಡಮನಿ ಟೈಲ್ಸ್ ವರ್ಕ್ಸ್ ಕೆಲಸ ಮಾಡುತ್ತಿದ್ದರು. ಗಾರೆ ಕೆಲಸ ಮಾಡುತ್ತಿದ್ದ ಆನಂದ್ ದೊಡ್ಡಮನಿ ಮೇ 1ರಂದು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ರಜೆ ಇದ್ದುದರಿಂದ ಮನೆಯಲ್ಲಿದ್ದರು.

ಅಪ್ಪನಿಗೆ ತಿಳಿಸದೆ ಬೈಕ್ ತೆಗೆದುಕೊಂಡು ಹೋಗಿದ್ದ ಮಲ್ಲಿಕಾರ್ಜುನ್, ರಾತ್ರಿ ಮನೆಗೆ ಮರಳಿದ್ದ. ಮದ್ಯದ ಅಮಲಿನಲ್ಲಿದ್ದ ಆನಂದ್ ದೊಡ್ಡಮನಿ, ತನ್ನನ್ನು ಹೇಳದೆ ಬೈಕ್ ತೆಗೆದುಕೊಂಡು ಹೋಗಿದ್ದಕ್ಕೆ ಮಗನ ಮೇಲೆ ಗರಂ ಆಗಿದ್ದರು. ಅದೇ ವಿಚಾರಕ್ಕೆ ಅಪ್ಪ, ಮಗನ ಮಧ್ಯೆ ಗಲಾಟೆಯಾಗಿತ್ತು.

ಈ ವೇಳೆ ಬಾಟಲ್‌ನಲ್ಲಿದ್ದ ಪೆಟ್ರೋಲ್ ತೆಗೆದು ಆನಂದ್ ದೊಡ್ಡಮನಿ ತನ್ನ ಮಗನ ಮೇಲೆ ಎರಚಿದ್ದರು. ಅದೇ ಸಂದರ್ಭದಲ್ಲಿ ಪಕ್ಕದ ಮನೆಯವರು ಹೊರಗಡೆ ಸೌದೆ ಒಲೆಯಲ್ಲಿ ಅಡುಗೆ ಮಾಡುತ್ತಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಇಬ್ಬರನ್ನೂ ಸ್ಥಳೀಯರು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಲ್ಲಿಕಾರ್ಜುನ್ ದೇಹ ಶೇ.40ರಷ್ಟು ಸುಟ್ಟಿದ್ದು, ಆನಂದ್ ಸುಮಾರು ಶೇ.18 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ.

ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿರುವುದಾಗಿ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!