ಸಾಂದರ್ಭಿಕ ಚಿತ್ರ 
ರಾಜ್ಯ

ಪತಿಯೊಂದಿಗೆ ಜಗಳ: ವಿಷ ಹಾಕಿ ಮಕ್ಕಳ ಕೊಂದ ತಾಯಿ, ತಾನೂ ಆತ್ಮಹತ್ಯೆಗೆ ಯತ್ನ..!

ತುಮಕೂರು ಜಿಲ್ಲೆಯ ಪಾವಗಡ ಮೂಲದ ಪ್ರಶಾಂತ್ ಮೊಬೈಲ್ ಫೋನ್ ಅಂಗಡಿಯಲ್ಲಿ ಮಾರಾಟ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ದಂಪತಿಗಳು ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು, ದಂಪತಿಗಳ ನಡುವೆ ಕಳೆದ ಕೆಲ ದಿನಗಳಿಂದ ಕೌಟುಂಬಿಕ ವಿಚಾರವಾಗಿ ಅಸಮಾಧಾನವಿತ್ತು ಎನ್ನಲಾಗಿದೆ.

ಬೆಂಗಳೂರು: ನಗರದ ಯಶವಂತಪುರ ವ್ಯಾಪ್ತಿಯ ಮತ್ತಿಕೆರೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಸಣ್ಣಪುಟ್ಟ ಕಾರಣಕ್ಕೆ ದಂಪತಿಗಳ ನಡುವೆ ನಡೆದ ಜಗಳ ಅಂತಿಮವಾಗಿ ಇಬ್ಬರು ಪ್ರಾಣಪಕ್ಷಿ ಹಾರಿಹೋಗುವಂತಾಗಿದೆ.

ನಿವಾಸಿಗಳಾದ ಪ್ರಶಾಂತ್ ಮತ್ತು ಪವಿತ್ರಾ ದಂಪತಿಗಳು ಮತ್ತಿಕೆರೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ತುಮಕೂರು ಜಿಲ್ಲೆಯ ಪಾವಗಡ ಮೂಲದ ಪ್ರಶಾಂತ್ ಮೊಬೈಲ್ ಫೋನ್ ಅಂಗಡಿಯಲ್ಲಿ ಮಾರಾಟ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ದಂಪತಿಗಳು ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು, ದಂಪತಿಗಳ ನಡುವೆ ಕಳೆದ ಕೆಲ ದಿನಗಳಿಂದ ಕೌಟುಂಬಿಕ ವಿಚಾರವಾಗಿ ಅಸಮಾಧಾನವಿತ್ತು ಎನ್ನಲಾಗಿದೆ.

ಎಂದಿನಂತೆ ಪತಿ-ಪತ್ನಿ ನಡುವೆ ತೀವ್ರ ಗಲಾಟೆ ನಡೆದಿದ್ದು, ಪ್ರಶಾಂತ್ ಮನೆಯಿಂದ ಹೊರ ಹೋಗಿದ್ದಾರೆ. ಈ ವೇಳೆ ಮನನೊಂದಿದ್ದ ಪವಿತ್ರಾ ತೀವ್ರ ನಿರ್ಧಾರ ಕೈಗೊಂಡಿದ್ದಾರೆ. ತನ್ನಿಬ್ಬರು ಮಕ್ಕಳಾದ ನಿವೇದಾ (4 ವರ್ಷ) ಹಾಗೂ ನಿರ್ಮಲ್ (2 ವರ್ಷ) ಗೆ ವಿಷವುಣಿಸಿ, ಬಳಿಕ ತಾನು ಕೂಡ ವಿಷ ಸೇವಿಸಿದ್ದಾರೆ.

ತಡರಾತ್ರಿ ಮನೆಗೆ ಹಿಂತಿರುಗಿದ್ದ ಪ್ರಶಾಂತ್ ಡ್ರಾಯಿಂಗ್ ರೂಮಿನಲ್ಲಿ ಮಲಗಿದ್ದಾರೆ. ಭಾನುವಾರ ಬೆಳಿಗ್ಗೆ ಎದ್ದು ನೋಡಿದಾಗ ಪತ್ನಿ ಮತ್ತು ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಳಿಕ ನೆರೆಹೊರೆಯವರ ಸಹಾಯದಿಂದ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಈ ವೇಳೆ ಮಕ್ಕಳು ಸತ್ತಿದ್ದಾರೆ ಎಂದು ವೈದ್ಯರು ಘೋಷಿಸಿದ್ದು, ಪವಿತ್ರಾ ಪ್ರಸ್ತುತ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪವಿತ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka By-poll & Assembly elections 2026 LIVE updates (KL, TN, AS, WB): ಮತ ಎಣಿಕೆ: ಮಮತಾ ಬ್ಯಾನರ್ಜಿ ತವರಿನಲ್ಲಿ BJPಯ ಸುವೇಂದು ಅಧಿಕಾರಿ, ಟಿವಿಕೆ ಅಭ್ಯರ್ಥಿ ನಟ ವಿಜಯ್ 2 ಕ್ಷೇತ್ರಗಳಲ್ಲಿ ಮುನ್ನಡೆ

ಪಂಚರಾಜ್ಯ ಚುನಾವಣೆ ಫಲಿತಾಂಶ 2026: ಬಂಗಾಳದಲ್ಲಿ BJP ಮುನ್ನಡೆ, ಕೇಸರಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಆಲೂ ಪೂರಿ, ರಸಗುಲ್ಲ ಸಿದ್ಧತೆ

'ಪವರ್ ಕಟ್, ಸಿಸಿಟಿವಿಗಳು ಸ್ಥಗಿತ.. ಬಿಜೆಪಿಯವ್ರು ಏನೋ ಮಾಡ್ತಾ ಇದಾರೆ': ಪಶ್ಚಿಮ ಬಂಗಾಳ ಸಿಎಂ Mamata Banerjee ಆತಂಕ

ಕರ್ನಾಟಕ ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್ ಕಂಗೆಡಿಸಿರುವ 'ಬಾಂಧವರು'; ಬಿಜೆಪಿಗೆ ವರವಾಗಲಿದ್ಯಾ ಹಿಂದೂ ಮತಗಳ ಧ್ರುವೀಕರಣ!

ಆಸ್ಪತ್ರೆಗೆ ದಾಖಲಾಗಿದ್ದಾರೆಯೇ ಅಮೆರಿಕಾ ಅಧ್ಯಕ್ಷ..?: "ಟ್ರಂಪ್‌ಗಾಗಿ ಪ್ರಾರ್ಥಿಸಿ" ಎಂದ ಸಂಸದೆ ನ್ಯಾನ್ಸಿ ಮೇಸ್, ಹೆಚ್ಚಿದ ಗೊಂದಲ..!

SCROLL FOR NEXT