ಸಾಂದರ್ಭಿಕ ಚಿತ್ರ 
ರಾಜ್ಯ

ಪತಿಯೊಂದಿಗೆ ಜಗಳ: ವಿಷ ಹಾಕಿ ಮಕ್ಕಳ ಕೊಂದ ತಾಯಿ; ತಾನೂ ಆತ್ಮಹತ್ಯೆಗೆ ಯತ್ನ..!

ತುಮಕೂರು ಜಿಲ್ಲೆಯ ಪಾವಗಡ ಮೂಲದ ಪ್ರಶಾಂತ್ ಮೊಬೈಲ್ ಫೋನ್ ಅಂಗಡಿಯಲ್ಲಿ ಮಾರಾಟ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರು: ನಗರದ ಯಶವಂತಪುರ ವ್ಯಾಪ್ತಿಯ ಮತ್ತಿಕೆರೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಸಣ್ಣಪುಟ್ಟ ಕಾರಣಕ್ಕೆ ದಂಪತಿಗಳ ನಡುವೆ ನಡೆದ ಜಗಳ ಅಂತಿಮವಾಗಿ ಇಬ್ಬರು ಪ್ರಾಣಪಕ್ಷಿ ಹಾರಿಹೋಗುವಂತಾಗಿದೆ.

ನಿವಾಸಿಗಳಾದ ಪ್ರಶಾಂತ್ ಮತ್ತು ಪವಿತ್ರಾ ದಂಪತಿಗಳು ಮತ್ತಿಕೆರೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ತುಮಕೂರು ಜಿಲ್ಲೆಯ ಪಾವಗಡ ಮೂಲದ ಪ್ರಶಾಂತ್ ಮೊಬೈಲ್ ಫೋನ್ ಅಂಗಡಿಯಲ್ಲಿ ಮಾರಾಟ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ದಂಪತಿಗಳು ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು, ದಂಪತಿಗಳ ನಡುವೆ ಕಳೆದ ಕೆಲ ದಿನಗಳಿಂದ ಕೌಟುಂಬಿಕ ವಿಚಾರವಾಗಿ ಅಸಮಾಧಾನವಿತ್ತು ಎನ್ನಲಾಗಿದೆ.

ಎಂದಿನಂತೆ ಪತಿ-ಪತ್ನಿ ನಡುವೆ ತೀವ್ರ ಗಲಾಟೆ ನಡೆದಿದ್ದು, ಪ್ರಶಾಂತ್ ಮನೆಯಿಂದ ಹೊರ ಹೋಗಿದ್ದಾರೆ. ಈ ವೇಳೆ ಮನನೊಂದಿದ್ದ ಪವಿತ್ರಾ ತೀವ್ರ ನಿರ್ಧಾರ ಕೈಗೊಂಡಿದ್ದಾರೆ. ತನ್ನಿಬ್ಬರು ಮಕ್ಕಳಾದ ನಿವೇದಾ (4 ವರ್ಷ) ಹಾಗೂ ನಿರ್ಮಲ್ (2 ವರ್ಷ) ಗೆ ವಿಷವುಣಿಸಿ, ಬಳಿಕ ತಾನು ಕೂಡ ವಿಷ ಸೇವಿಸಿದ್ದಾರೆ.

ತಡರಾತ್ರಿ ಮನೆಗೆ ಹಿಂತಿರುಗಿದ್ದ ಪ್ರಶಾಂತ್ ಡ್ರಾಯಿಂಗ್ ರೂಮಿನಲ್ಲಿ ಮಲಗಿದ್ದಾರೆ. ಭಾನುವಾರ ಬೆಳಿಗ್ಗೆ ಎದ್ದು ನೋಡಿದಾಗ ಪತ್ನಿ ಮತ್ತು ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಳಿಕ ನೆರೆಹೊರೆಯವರ ಸಹಾಯದಿಂದ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಈ ವೇಳೆ ಮಕ್ಕಳು ಸತ್ತಿದ್ದಾರೆ ಎಂದು ವೈದ್ಯರು ಘೋಷಿಸಿದ್ದು, ಪವಿತ್ರಾ ಪ್ರಸ್ತುತ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪವಿತ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!

ಸೆಪ್ಟೆಂಬರ್ 11 ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ಸಾಧ್ಯತೆ

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!