ಹಾವೇರಿ: ರಾಜ್ಯ ಸಾರಿಗೆ ಸಂಸ್ಥೆಯ 'ಪಲ್ಲಕ್ಕಿ' ಬಸ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ರಾಣೆಬೆನ್ನೂರು ತಾಲ್ಲೂಕಿನ ದೇವರೂಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಬಸ್ ಬೆಂಗಳೂರಿನಿಂದ ಗದಗಕ್ಕೆ ತೆರಳುತಿತ್ತು ಎನ್ನಲಾಗಿದೆ.
ಬೆಂಗಳೂರಿನಿಂದ ಗದಗ ಹೊರಟಿದ್ದ (KA-57-F6680) ಸಂಖ್ಯೆಯ ಪಲ್ಲಕ್ಕಿ ಬಸ್ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಗದಗ ಕಡೆಗೆ ಪ್ರಯಾಣಿಸುತ್ತಿದ್ದರು. ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದ್ದು ಎನ್ನಲಾಗಿದೆ.
ಕೂಡಲೇ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ ಬಸ್ ನ್ನು ನಿಲ್ಲಿಸಿದ್ದಾರೆ. ಅವರ ಸಮಯ ಪ್ರಜ್ಞೆಯಿಂದ ಎಲ್ಲಾ 17 ಪ್ರಯಾಣಿಕರ ಜೀವ ಉಳಿದಿದೆ.
ರಾಣೆಬೆನ್ನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.