ಶಾಸಕ ಜೀವರಾಜ್ 
ರಾಜ್ಯ

ಮತ ಪತ್ರ ತಿದ್ದಿದ ಆರೋಪ: ಶಾಸಕ ಜೀವರಾಜ್ ವಿರುದ್ಧದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ!

ಜೀವರಾಜ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ರಜಾಕಾಲದ ಏಕ ಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಚಿಕ್ಕಮಗಳೂರು : ಮರು ಮತ ಎಣಿಕೆ ವೇಳೆ ಮತಪತ್ರಗಳನ್ನು ತಿದ್ದಿದ ಆರೋಪಕ್ಕೆ ಸಂಬಂಧಿಸಿದಂತೆ ಶೃಂಗೇರಿ ಕ್ಷೇತ್ರದ ಶಾಸಕ ಡಿ.ಎನ್ ಜೀವರಾಜ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಉಚ್ಚ ನ್ಯಾಯಾಲಯ ಮಧ್ಯಂತರ ತಡೆ ನೀಡಿದೆ. ಅಲ್ಲದೇ, ವಿಚಾರಣೆಯನ್ನು ಈ ತಿಂಗಳ 7 ಕ್ಕೆ ಮುಂದೂಡಿದೆ.

ಈ ಕುರಿತಂತೆ ಜೀವರಾಜ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ರಜಾಕಾಲದ ಏಕ ಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಜೀವರಾಜ್ ಪರ ಹಾಜರಾಗಿದ್ದ ಪದಾಂಕಿತ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಅವರ ವಾದ ಆಲಿಸಿದ ನ್ಯಾಯಪೀಠ, ಗೊಂದಲಗಳಿದ್ದರೆ ಚುನಾವಣಾ ತಕರಾರು ಅರ್ಜಿಯಲ್ಲೇ ಉಲ್ಲೇಖಿಸಬೇಕಿತ್ತು. ರಾಜಕೀಯ ಒತ್ತಡದಿಂದ ದೂರು ದಾಖಲಿಸುವುದು ಸರಿಯಲ್ಲ. ಹೀಗಾದರೆ ಯಾವ ಅಧಿಕಾರಿಯೂ ಸ್ವತಂತ್ರವಾಗಿ ಕೆಲಸ ಮಾಡಲಾಗುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

ಏನಿದು ಪ್ರಕರಣ: 2023 ರಲ್ಲಿ ವಿಧಾನ ಸಭೆ ಚುನಾವಣೆ ಮುಗಿದ ಬಳಿಕ ಜೀವರಾಜ್ ಹಾಗು ಅಧಿಕಾರಿಗಳು ಬ್ಯಾಲೆಟ್ ಮತ ಪತ್ರಗಳನ್ನು ತಿದ್ದಿದ್ದಾರೆ. ಇದರಿಂದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ ರಾಜೇಗೌಡರೀಗೆ ಸೋಲಾಗಿದೆ ಈ ಬಗ್ಗೆ ತನಿಖೆ ನಡೆಸಬೇಕು ಎಂದು ರಾಜೇಗೌಡರ ಪರ ಕೌಟಿಂಗ್ ಏಜೆಂಟ್ ಸುಧೀರ್ ಕುಮಾರ್ ಮುರೋಳಿ ಎಂಬುವವರು 2026ರ ಮೇ 3 ರಂದು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಜೀವರಾಜ್ ಹಾಗು ಈ ಹಿಂದಿನ ಇನ್ನಿಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮನ ಹೆಸರಿನಲ್ಲಿ ಲೂಟಿ: ಸುಮಾರು 5,000 ಕೋಟಿ ರೂ. ಹಣ ದುರ್ಬಳಕೆ, ಬಿಜೆಪಿ ವಿರುದ್ಧ ಖರ್ಗೆ ಕಿಡಿ!

ಅತ್ತ ಸ್ವಿಟ್ಜರ್ ಲ್ಯಾಂಡ್ ನಲ್ಲಿ ಇರಾನ್- ಅಮೆರಿಕ ಮಾತುಕತೆ; ಇತ್ತ ಮತ್ತೊಮ್ಮೆ ಕಠಿಣ ದಾಳಿಯ ಎಚ್ಚರಿಕೆ ನೀಡಿದ ಡೊನಾಲ್ಡ್ ಟ್ರಂಪ್

ಅವರಿಗೆ ಧೈರ್ಯವೇ ಇಲ್ಲ, ಪುಕ್ಕಲರು: RSS ವಿರುದ್ಧ ಬಿಕೆ ಹರಿಪ್ರಸಾದ್ ಕಿಡಿ

ಶಿವಸೇನೆ (ಯುಬಿಟಿ) ಗೆ ಭಾರಿ ಹೊಡೆತ! ಏಕನಾಥ್ ಶಿಂಧೆ ಬಣಕ್ಕೆ ಸಂಸದ ಓಂಪ್ರಕಾಶ್ ನಿಂಬಾಳ್ಕರ್ ಸೇರ್ಪಡೆ ನಿಶ್ಚಿತ!

Tri Series Final: ವೈಭವ್ ಸೂರ್ಯವಂಶಿ ಸ್ಫೋಟಕ ಅರ್ಧಶತಕ; ಶ್ರೀಲಂಕಾ ಹುಟ್ಟಡಗಿಸಿ ಟ್ರೋಫಿಗೆ ಮುತ್ತಿಟ್ಟ ಭಾರತ!