ಸಂಗ್ರಹ ಚಿತ್ರ 
ರಾಜ್ಯ

ISRO ಐಸ್ಯಾಟ್‌ ಕೇಂದ್ರದ ಮೇಲೆ ಡ್ರೋನ್‌ ಹಾರಾಟ: ಭದ್ರತೆ ಕುರಿತು ಹೆಚ್ಚಿದ ಆತಂಕ, FIR ದಾಖಲು

ಮೇ 2ರಂದು ಬೆಳಗ್ಗೆ ಸುಮಾರು 8:16 ಗಂಟೆಯ ವೇಳೆಗೆ, ‘ನೋ ಡ್ರೋನ್ ಝೋನ್’ ಎಂದು ಘೋಷಿಸಲ್ಪಟ್ಟ ಈ ಪ್ರದೇಶದ ಮೇಲೆ ಸುಮಾರು 80 ರಿಂದ 100 ಅಡಿ ಎತ್ತರದಲ್ಲಿ ಡ್ರೋನ್ ಹಾರಾಟ ಕಂಡುಬಂದಿದೆ.

ಬೆಂಗಳೂರು: ದೇಶದ ಅತ್ಯಂತ ಸೂಕ್ಷ್ಮ ಸಂಶೋಧನಾ ಪ್ರದೇಶಗಳಲ್ಲಿ ಒಂದಾದ ಇಸ್ರೋ ಐಸೈಟ್ ಕ್ಯಾಂಪಸ್ ಮೇಲೆ ಅಪರಿಚಿತರಿಂದ ಡ್ರೋನ್ ಹಾರಾಟ ನಡೆದಿರುವುದು ಭದ್ರತಾ ವಲಯದಲ್ಲಿ ಗಂಭೀರ ಆತಂಕಕ್ಕೆ ಕಾರಣವಾಗಿದೆ.

ಮೇ 2ರಂದು ಬೆಳಗ್ಗೆ ಸುಮಾರು 8:16 ಗಂಟೆಯ ವೇಳೆಗೆ, ‘ನೋ ಡ್ರೋನ್ ಝೋನ್’ ಎಂದು ಘೋಷಿಸಲ್ಪಟ್ಟ ಈ ಪ್ರದೇಶದ ಮೇಲೆ ಸುಮಾರು 80 ರಿಂದ 100 ಅಡಿ ಎತ್ತರದಲ್ಲಿ ಡ್ರೋನ್ ಹಾರಾಟ ಕಂಡುಬಂದಿದೆ.

ಸುಮಾರು 10 ರಿಂದ 12 ಸೆಕೆಂಡ್‌ಗಳ ಕಾಲ ಡ್ರೋನ್ ಕ್ಯಾಂಪಸ್ ಮೇಲ್ಭಾಗದಲ್ಲಿ ಹಾರಾಡಿ ನಂತರ ಅಚಾನಕ್ ಆಗಿ ಕಣ್ಮರೆಯಾಗಿದೆ ಎಂದು ಸಿಐಎಸ್‌ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಕ್ಯಾಂಪಸ್ ಭದ್ರತೆಯಲ್ಲಿ ನಿಯೋಜಿತವಾಗಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ಡ್ರೋನ್ ಹಾರಾಟವನ್ನು ಗಮನಿಸಿ ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಲಾಗಿದೆ.

ಇಸ್ರೋ ಐಸೈಟ್ ಕ್ಯಾಂಪಸ್ ಅತ್ಯಂತ ಸೂಕ್ಷ್ಮ ಮತ್ತು ನಿರ್ಬಂಧಿತ ವಲಯವಾಗಿದ್ದು, ಇಲ್ಲಿ ಯಾವುದೇ ರೀತಿಯ ವೈಮಾನಿಕ ಚಟುವಟಿಕೆಗಳಿಗೆ ಅನುಮತಿಯನ್ನು ನಿರಾಕರಿಸಲಾಗಿದೆ.

ಇಂತಹ ಪ್ರದೇಶದಲ್ಲಿ ಡ್ರೋನ್ ಹಾರಾಟ ನಡೆದಿರುವುದು ಭದ್ರತೆ ಹಾಗೂ ರಾಷ್ಟ್ರದ ಪ್ರಮುಖ ವೈಜ್ಞಾನಿಕ ಆಸ್ತಿಗಳ ಸುರಕ್ಷತೆಗೆ ಗಂಭೀರ ಅಪಾಯವೆಂದು ಪರಿಗಣಿಸಲಾಗಿದೆ.

ಅಪರಿಚಿತರು ಕಾನೂನು ಉಲ್ಲಂಘಿಸಿ ಅಥವಾ ಉದ್ದೇಶಪೂರ್ವಕವಾಗಿ ಡ್ರೋನ್ ಹಾರಿಸಿದ್ದು, ಎಚ್‌ಎಎಲ್ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಡ್ರೋನ್ ಹಾರಿಸಿದವರ ಪತ್ತೆಗೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್​ ಟ್ವಿಸ್ಟ್: TVK ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ; DMK ಮೈತ್ರಿಗೆ ಭಾರಿ ಶಾಕ್, ಹೊಸ ಮೈತ್ರಿ ಸರ್ಕಾರ ಅಧಿಕಾರಕ್ಕೆ..!

TVK–ಕಾಂಗ್ರೆಸ್ ಮೈತ್ರಿ: ಸಂಪುಟದಲ್ಲಿ 2 ಸ್ಥಾನಕ್ಕೆ 'ಕೈ' ಬೇಡಿಕೆ, ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆ ಬಹುತೇಕ ಖಚಿತ..!

ಸಿಎಂ ಹುದ್ದೆ ತ್ಯಾಗಕ್ಕೆ ಸಿದ್ದರಾಮಯ್ಯ ಸಿದ್ದ: ಹೈಕಮಾಂಡ್ ಆದೇಶಕ್ಕೆ ಪರಮೇಶ್ವರ್ ಬದ್ಧ; ಮುಖ್ಯಮಂತ್ರಿ ಸ್ಥಾನ ಒಲ್ಲೆ ಎಂದಿದ್ದೇಕೆ ಖರ್ಗೆ?

ಸೋಲು ಬಳಿಕವೂ ಹಠಕ್ಕೆ ಬಿದ್ದ ಮಮತಾ ಬ್ಯಾನರ್ಜಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ಎಂದು ಜೇಠ್ಮಲಾನಿ ಕಿಡಿ

ಹೈಕಮಾಂಡ್ ಕರೆದ ತಕ್ಷಣ ದೆಹಲಿಗೆ ಪ್ರಯಾಣ: 2028 ರಲ್ಲೂ ನಮ್ಮದೇ ಸರ್ಕಾರ ಫಿಕ್ಸ್; ಸಿಎಂ ಸಿದ್ದರಾಮಯ್ಯ

SCROLL FOR NEXT