ಕೆ ರಾಮಚಂದ್ರರಾವ್  
ರಾಜ್ಯ

DGP ಕೆ ರಾಮಚಂದ್ರರಾವ್ ಅಮಾನತು ಆದೇಶ ವಾಪಸ್ ಪಡೆದ ಸರ್ಕಾರ!

ಅಧಿಕೃತ ಆದೇಶದ ಪ್ರಕಾರ, 1993 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಡೈರಕ್ಟರ್ ಜನರಲ್ ಆಫ್ ಪೋಲಿಸ್ (ಪೊಲೀಸ್ ಮ್ಯಾನುಯಲ್) ಆಗಿ ನೇಮಿಸಲಾಗಿದೆ.

ಬೆಂಗಳೂರು: ಡಿಜಿಪಿ ಕೆ. ರಾಮಚಂದ್ರ ರಾವ್ ಅವರ ಅಮಾನತು ಆದೇಶವನ್ನು ರಾಜ್ಯಸರ್ಕಾರ ಬುಧವಾರ ವಾಪಸ್ ಪಡೆದಿದಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಸೇವೆಗೆ ಮರುಸೇರ್ಪಡೆಗೊಳಿಸಿದೆ.

ಅಧಿಕೃತ ಆದೇಶದ ಪ್ರಕಾರ, 1993 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಡೈರಕ್ಟರ್ ಜನರಲ್ ಆಫ್ ಪೋಲಿಸ್ (ಪೊಲೀಸ್ ಮ್ಯಾನುಯಲ್) ಆಗಿ ನೇಮಿಸಲಾಗಿದೆ.

ಈ ಹುದ್ದೆಯನ್ನು ಸಿಐಡಿ ಡಿಜಿಪಿ ಹುದ್ದೆಗೆ ಸಮಾನವೆಂದು ಪರಗಣಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಬಿ.ಎಸ್. ಸಂಜಯ್ ಆದೇಶಿಸಿದ್ದಾರೆ. ರಾಮಚಂದ್ರರಾವ್ ಇದೇ 31 ರಂದು ಸೇವೆಯಿಂದ ನಿವೃತ್ತಿ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿದ್ದ ರಾಮಚಂದ್ರರಾವ್ , ತಮ್ಮ ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು ಎಂಬ ಆರೋಪದ ಮೇಲೆ ಜ.19 ರಂದು ಅಮಾನತು ಮಾಡಿ ಪ್ರಕರಣದ ತನಿಖೆಗೆ ಆದೇಶಿಸಲಾಗಿತ್ತು. ಅಮಾನತು ಆದೇಶವನ್ನು ಇದೀಗ ವಾಪಸ್ ಪಡೆದಿರುವ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಸೇವೆಗೆ ಮರು ಸೇರ್ಪಡೆಗೊಳಿಸಿದೆ.

ರಾವ್ ಮಹಿಳೆಯೊಂದಿಗೆ ಆಕ್ಷೇಪಾರ್ಹ ರೀತಿಯಲ್ಲಿ ಇರುವ ವಿಡಿಯೋಗಳು ನ್ಯೂಸ್ ಚಾನೆಲ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿಯೂ ವೈರಲ್ ಆಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಜಯ್ ಗೆ ಬೆಂಬಲ ನೀಡಲ್ಲ- ಎಡಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್; ನಾವು ಇನ್ನೂ ನಿರ್ಧರಿಸಿಲ್ಲ- ವಿಸಿಕೆ

ವಿಜಯ್ ಸಿಎಂ ಕನಸಿಗೆ ತಣ್ಣೀರು?: ತಮಿಳುನಾಡಿನಲ್ಲಿ ರಾಜಕೀಯ ಸಂಚಲನ, DMK-AIADMK ಮೈತ್ರಿ ಸರ್ಕಾರ ರಚನೆ?

ತಮಿಳುನಾಡು: TVK ಗೆ ಬಹುಮತದ ಕೊರತೆ; ಇಕ್ಕಟ್ಟಿನಲ್ಲಿ ವಿಜಯ್; ರಾಜ್ಯಪಾಲರ ನಡೆ ಏನು?

ಸಚಿನ್, ಕೊಹ್ಲಿಯಂತಹ ದಿಗ್ಗಜರ ಸಾಲಿಗೆ ಸೇರಿದ ವೈಭವ್ ಸೂರ್ಯವಂಶಿ: ಹೊಸ ಬ್ಯಾಟ್; ಪ್ರಾಯೋಜಕರು ಯಾರು ಗೊತ್ತಾ?

Video: ಮಧ್ಯರಾತ್ರಿ ಸಾಮಾನ್ಯ ಮಹಿಳೆಯಂತೆ ರಸ್ತೆಯಲ್ಲಿ ನಿಂತ ಪೊಲೀಸ್ ಕಮಿಷನರ್; 3 ತಾಸಿನಲ್ಲಿ 40 ಕಾಮುಕರಿಂದ ಕಿರುಕುಳ!

SCROLL FOR NEXT