ಸಚಿವ ಎನ್ಎಸ್ ಬೋಸರಾಜು 
ರಾಜ್ಯ

El Nino ಆತಂಕ; ಪರಿಸ್ಥಿತಿ ಎದುರಿಸಲು ಈಗಲೇ ಸಿದ್ಧತೆ ಆರಂಭಿಸಿ; ಅಧಿಕಾರಿಗಳಿಗೆ ಸರ್ಕಾರ ಸೂಚನೆ

ರಾಜ್ಯದ 18 ವಿಭಾಗಗಳ ಅಧಿಕಾರಿಗಳಿಗೆ ಕೆರೆ, ಕಟ್ಟೆ, ಜಲಾಶಯಗಳು ಹಾಗೂ ಇತರೆ ನೀರು ಸಂಗ್ರಹಣೆ ಪ್ರದೇಶಗಳಲ್ಲಿ ಯಾವುದೇ ರೀತಿಯ ಸೋರಿಕೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಬಹುದಾದ ಎಲ್ ನಿನೋ ಹವಾಮಾನ ಪರಿಣಾಮಗಳನ್ನು ಎದುರಿಸಲು ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಎನ್.ಎಸ್. ಬೋಸರಾಜು ಅವರು ಅಧಿಕಾರಿಗಳಿಗೆ ಬುಧವಾರ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಸಚಿವರು, ಜಲಭದ್ರತೆ ಮತ್ತು ಬರ ನಿರ್ವಹಣೆ ಕುರಿತಾಗಿ ಅಧಿಕಾರಿಗಳಿಗೆ ಮಹತ್ವದ ನಿರ್ದೇಶನಗಳನ್ನು ನೀಡಿದರು.

ರಾಜ್ಯದ 18 ವಿಭಾಗಗಳ ಅಧಿಕಾರಿಗಳಿಗೆ ಕೆರೆ, ಕಟ್ಟೆ, ಜಲಾಶಯಗಳು ಹಾಗೂ ಇತರೆ ನೀರು ಸಂಗ್ರಹಣೆ ಪ್ರದೇಶಗಳಲ್ಲಿ ಯಾವುದೇ ರೀತಿಯ ಸೋರಿಕೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮುಂದಿನ ಕೆಲವು ತಿಂಗಳಲ್ಲಿ ಎಲ್ ನಿನೋ ಪರಿಣಾಮ ಎದುರಾಗುವ ಸಾಧ್ಯತೆ ಇದೆ. ಅದನ್ನು ಎದುರಿಸಲು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಕೆರೆ, ಅಣೆಕಟ್ಟು ಮತ್ತು ಜಲಾಶಯಗಳಿಂದ ನೀರು ಸೋರಿಕೆಯಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ (IISc) ವಿಜ್ಞಾನಿಗಳು, ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕೆ ಕೇಂದ್ರ (KSRSAC), ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರ (KSNDMC), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ತಜ್ಞರು ಹಾಗೂ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್‌ಗಳು ಭಾಗವಹಿಸಿದ್ದರು.

ಸಭೆಯಲ್ಲಿ ತಜ್ಞರು ಭೂಗರ್ಭ ಜಲ ಮರುಪೂರಣ ಯೋಜನೆಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಜೊತೆಗೆ ದೀರ್ಘಕಾಲಿಕ ಜಲ ಸಂರಕ್ಷಣಾ ಕ್ರಮಗಳು ಮತ್ತು ಮಳೆನೀರು ಸಂಗ್ರಹಣೆ ಕುರಿತು ರಾಜ್ಯವ್ಯಾಪಿ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.

ರಾಜ್ಯದಲ್ಲಿ ನೀರಿನ ಒತ್ತಡ ಉಂಟಾಗದಂತೆ ಮಳೆನೀರು ಸಂಗ್ರಹಣೆ ಕಡ್ಡಾಯಗೊಳಿಸುವುದು, ಭೂಗರ್ಭ ಜಲಮಟ್ಟ ಹೆಚ್ಚಿಸುವುದು ಮತ್ತು ಲಭ್ಯವಿರುವ ನೀರಿನ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸುವುದು ಮುಖ್ಯ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Operation Sindoorಗೆ 1 ವರ್ಷ: 'ಭಾರತ ಯಾವುದನ್ನೂ ಮರೆಯಲ್ಲ-ಯಾರನ್ನೂ ಕ್ಷಮಿಸಲ್ಲ'; ಶತ್ರುರಾಷ್ಟ್ರಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತೀಯ ಸೇನೆ

ಹಾರ್ಮುಜ್ ನೌಕಾ ದಿಗ್ಬಂಧನ ಉಲ್ಲಂಘನೆ ಆರೋಪ; ಇರಾನ್ ಹಡಗಿನ ಮೇಲೆ ದಾಳಿ, ಅಮೆರಿಕಾ-ಇರಾನ್ ಸಂಘರ್ಷ ತೀವ್ರ..!

'ಜಪ್ಪಯ್ಯ ಅಂದರೂ ಸಿಎಂ ಸ್ಥಾನದಿಂದ ಕೆಳಗಿಳಿಯುವುದಿಲ್ಲ, ಬೇಕಾದರೆ ಕೇಂದ್ರ ಸರ್ಕಾರವೇ ನನ್ನನ್ನು ವಜಾ ಮಾಡಲಿ': ಮಮತಾ ಬ್ಯಾನರ್ಜಿ

ತಮಿಳುನಾಡು ಚುನಾವಣೆಯಲ್ಲಿ ಗೆದ್ದು ಮಿಂಚಿದ ಕನ್ನಡಿಗ: ನಾನು ಹೆಮ್ಮೆಯ ಕನ್ನಡಿಗ-ನಮ್ಮೂರ ದೇವರ ಆಶೀರ್ವಾದದಿಂದ ಗೆದ್ದೆ; ಸುನಿಲ್ ಆನಂದ್ ಭಾವುಕ ಮಾತು

ಸ್ಟೇಡಿಯಂ ಅಭಿಮಾನಿಗಳದ್ದೇ ಹೊರತು VIPಗಳದ್ದಲ್ಲ, IPL ಫೈನಲ್ ಸ್ಥಳಾಂತರಕ್ಕೆ ಫ್ರೀ ಪಾಸ್ ರಾಜಕಾರಣ ಕಾರಣ: ನಿಖಿಲ್ ಕುಮಾರಸ್ವಾಮಿ ಆರೋಪ

SCROLL FOR NEXT