ಯುವತಿ ಮೇಲೆ ಚಾಕು ದಾಳಿ ನಡೆಸಿದ ದುಷ್ಕರ್ಮಿ 
ರಾಜ್ಯ

Video: ಹಾಡಹಗಲೇ ಯುವತಿ ಮೇಲೆ ಚಾಕು ದಾಳಿ; ರಸ್ತೆಯಲ್ಲೇ ದುಷ್ಕರ್ಮಿಗೆ ಸಾರ್ವಜನಿಕರ 'ಧರ್ಮದೇಟು'!

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಮೇಲೆ ಮಾಸ್ಕ್ ಧರಿಸಿ ಬಂದ ದುಷ್ಕರ್ಮಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಹಾಡಹಗಲೇ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಯೋರ್ವ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ಮಾದನಾಯಕನಹಳ್ಳಿ ಮುಖ್ಯರಸ್ತೆಯಲ್ಲಿ ಮೇ 6 ರಂದು ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಮೇಲೆ ಮಾಸ್ಕ್ ಧರಿಸಿ ಬಂದ ದುಷ್ಕರ್ಮಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

ಕೂಡಲೇ ಮಧ್ಯ ಪ್ರವೇಶಿಸಿದ ಸ್ಥಳೀಯರು ದುಷ್ಕರ್ಮಿಯನ್ನು ಹಿಡಿದು ಥಳಿಸಿದ್ದಾರೆ.

ಯುವತಿ ಚೀರಾಟ, ದುಷ್ಕರ್ಮಿಗೆ ಸಾರ್ವಜನಿಕರ ಧರ್ಮದೇಟು

ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಯುವತಿ ಮೇಲೆ ಸ್ಕೂಟಿಯಲ್ಲಿ ಬಂದ ದುಷ್ಕರ್ಮಿ ಏಕಾಏಕಿ ಚಾಕು ತೆಗೆದು ಹಲ್ಲೆ ಮಾಡಿದ್ದಾನೆ. ಯುವತಿ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸುತ್ತಲೇ ಯುವತಿ ಕೂಗಿಕೊಂಡಿದ್ದಾಳೆ.

ಈ ವೇಳೆ ಯುವತಿ ಚೀರಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಆಕೆಯನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ದುಷ್ಕರ್ಮಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪ್ರಸ್ತುತ ಇವಿಷ್ಟೂ ಘಟನಾವಳಿಗಳು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಮದ್ಯ ವ್ಯಸನ: ಕೌಟುಂಬಿಕ ಕಲಹ

ಇನ್ನು ವರದಿಗಳ ಪ್ರಕಾರ ಹಲ್ಲೆಗೊಳಗಾದ ಮಹಿಳೆ ಮತ್ತು ಹಲ್ಲೆ ಮಾಡಿದ ವ್ಯಕ್ತಿ ದಂಪತಿಗಳಾಗಿದ್ದು, ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಹಲ್ಲೆಗೊಳಗಾದ ಮಹಿಳೆಯನ್ನು ಸೋನಾಲಿ ಎನ್ನಲಾಗಿದ್ದು, ಹಲ್ಲೆ ಮಾಡಿದವನನ್ನು ಆಕೆಯ ಪತಿ ಸಂಜಯ್ ಎಂದು ಮೂಲಗಳು ತಿಳಿಸಿವೆ. ಈ ದಂಪತಿಗಳು ಬಿಹಾರ ಮೂಲದವರಾಗಿದ್ದು, ಇಬ್ಬರೂ ವಿಚೇದಿತರು ಎನ್ನಲಾಗಿದೆ. ಹಿಂದಿನ ವಿವಾಹಗಳ ನಂತರ ಪರಸ್ಪರ ಪ್ರೀತಿಸಿ ವಿವಾಹವಾದ ನಂತರ ಬೆಂಗಳೂರಿಗೆ ತೆರಳಿದ್ದರು. ಇಬ್ಬರೂ ನಗರದ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಉದ್ಯೋಗಿಯಾಗಿದ್ದರು ಎನ್ನಲಾಗಿದೆ.

ಮದ್ಯವ್ಯಸನ

ಸಂಜಯ್ ಆಗಾಗ್ಗೆ ಮದ್ಯ ಸೇವಿಸುತ್ತಿದ್ದ ಮತ್ತು ಸೋನಾಲಿಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈತನ ಕಾಟಕ್ಕೆ ಬೇಸತ್ತು ಸೋನಾಲಿ ಬೇರೆಡೆಗೆ ಹೋಗಿ ಪ್ರತ್ಯೇಕವಾಗಿ ವಾಸಿಸಲು ನಿರ್ಧರಿಸಿದಾಗ ಆತನ ಕಾಟ ಮತ್ತಷ್ಟು ಹೆಚ್ಚಾಗಿತ್ತು. ಇದೇ ಸಂದರ್ಭದಲ್ಲೇ ಸಂಜಯ್ ಬೈಕ್ ನಲ್ಲಿ ಬಂದು ಆಕೆಯ ಮೇಲೆ ದಾಳಿ ಮಾಡಿದ್ದಾನೆ ಎಂದು ಹೇಳಲಾಗಿದೆ.

ಅವನು ಚಾಕುವನ್ನು ಅವಳ ಕುತ್ತಿಗೆಯ ಬಳಿ ಹಿಡಿದಿದ್ದಾಗ, ಆಕೆ ಆತನ ಕೈ ಹಿಡಿದು ತನ್ನನ್ನು ತಾನು ರಕ್ಷಿಸಿಕೊಂಡಿದ್ದಾಳೆ. ಇದೇ ಸಂದರ್ಭದಲ್ಲೇ ಹತ್ತಿರದ ನಿವಾಸಿಗಳು ಮಧ್ಯಪ್ರವೇಶಿಸಿ, ಅವನನ್ನು ತಡೆದು, ಪೊಲೀಸರಿಗೆ ಒಪ್ಪಿಸುವ ಮೊದಲು ಮಹಿಳೆಯನ್ನು ರಕ್ಷಿಸಿದರು.

ಈ ಪ್ರಕರಣ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರಲಿದ್ದು, ಪೊಲೀಸರು ನಾನ್-ಕಾಗ್ನಿಜೇಬಲ್ ರಿಪೋರ್ಟ್ (NCR) ದಾಖಲಿಸಿಕೊಂಡು ನಂತರ ದಂಪತಿಗಳಿಗೆ ಕೌನ್ಸೆಲಿಂಗ್ ಮಾಡಿ ಅವರನ್ನು ಬೇರೆಡೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್