ಸಾಂದರ್ಭಿಕ ಚಿತ್ರ 
ರಾಜ್ಯ

ಆತ್ಮಹತ್ಯೆ ಯತ್ನದ ಬಳಿಕ ಮಿದುಳು ನಿಷ್ಕ್ರಿಯ: ಮಹಿಳೆಯ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ..!

ಮಹಿಳೆ ಜೀವ ರಕ್ಷಕ ವ್ಯವಸ್ಥೆಯಲ್ಲಿ ಇದ್ದರೂ ಯಾವುದೇ ಚೇತರಿಕೆಯ ಲಕ್ಷಣಗಳು ಕಾಣಿಸಲಿಲ್ಲ. ತಜ್ಞರ ಸಮಿತಿ ಎರಡು ಬಾರಿ ಪರೀಕ್ಷೆ ನಡೆಸಿ ಮೇ 6ರಂದು ಅವರನ್ನು ಬ್ರೇನ್ ಡೆಡ್ ಎಂದು ಘೋಷಿಸಿತು.

ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮಿದುಳು ನಿಷ್ಕ್ರಿಯಗೊಂಡಿದ್ದ 43 ವರ್ಷದ ಮಹಿಳೆಯೊಬ್ಬರ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಶ್ರೀನಗರ ನಿವಾಸಿಯಾಗಿದ್ದ ಮಹಿಳೆ ಮೇ 1ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಶೇಖರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಮತ್ತು ತುರ್ತು ಚಿಕಿತ್ಸಾ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.

ಮಹಿಳೆ ಜೀವ ರಕ್ಷಕ ವ್ಯವಸ್ಥೆಯಲ್ಲಿ ಇದ್ದರೂ ಯಾವುದೇ ಚೇತರಿಕೆಯ ಲಕ್ಷಣಗಳು ಕಾಣಿಸಲಿಲ್ಲ. ತಜ್ಞರ ಸಮಿತಿ ಎರಡು ಬಾರಿ ಮೆದುಳು ನಿಷ್ಕ್ರಿಯ ಪರೀಕ್ಷೆ ನಡೆಸಿ ಮೇ 6ರಂದು ಅವರನ್ನು ಬ್ರೇನ್ ಡೆಡ್ ಎಂದು ಘೋಷಿಸಿತು.

ಆಸ್ಪತ್ರೆಯ ಸಮಾಲೋಚನಾ ತಂಡದ ಮನವೊಲಿಕೆಯ ಬಳಿಕ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದರು.

ಪತಿಯ ಅನುಮತಿಯೊಂದಿಗೆ ಹೃದಯ, ಹೃದಯ ಕವಾಟಗಳು, ಶ್ವಾಸಕೋಶ, ಯಕೃತ್ತು, ಮೂತ್ರಪಿಂಡಗಳು, ಕಣ್ಣಿನ ಕಾರ್ನಿಯಾ ಹಾಗೂ ಚರ್ಮವನ್ನು ದಾನ ಮಾಡಲಾಯಿತು.

ಈ ಅಂಗಾಂಗಗಳು ಹಲವು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣವಾಗಲಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಇದು ವೈದ್ಯಕೀಯ-ಕಾನೂನು ಸಂಬಂಧಿತ ಪ್ರಕರಣವಾಗಿದ್ದರಿಂದ, ಅಂಗಾಂಗ ಸಂಗ್ರಹ ಪ್ರಕ್ರಿಯೆಗೂ ಮುನ್ನ ಪೊಲೀಸ್ ಹಾಗೂ ಫರೆನ್ಸಿಕ್ ಕ್ರಮಗಳನ್ನು ಪೂರ್ಣಗೊಳಿಸಲಾಯಿತು ಎಂದು ವೈದ್ಯರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟಿವಿಕೆ ಮ್ಯಾಜಿಕ್ ನಂಬರ್ ಪಡೆಯದಿದ್ದರೆ, ಎಡಿಎಂಕೆಗೆ ಡಿಎಂಕೆ ಬೆಂಬಲ; ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸ್ಟಾಲಿನ್ ಗೆ !

‘ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಶೀಘ್ರ ಒಪ್ಪಂದಕ್ಕೆ ಬನ್ನಿ, ಇಲ್ಲವಾದರೆ ಹೊಡೆತ ಇನ್ನಷ್ಟು ಭೀಕರವಾಗಲಿದೆ’: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ..!

ಕ್ಷಿಪಣಿ ದಾಳಿ ಬಳಿಕ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ‘ಸಣ್ಣ ಮಟ್ಟದ ದಾಳಿಯಷ್ಟೇ, ಕದನ ವಿರಾಮ ಮುರಿದಿಲ್ಲ’; ಟ್ರಂಪ್..!

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಮಿಂಚು ಸಹಿತ ಭಾರೀ ಮಳೆ

ಮನ್ರೇಗಾ ಪುನರ್ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ..!

SCROLL FOR NEXT