ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮ  
ರಾಜ್ಯ

ಮೇ.10ಕ್ಕೆ Art of Livingನ 45ನೇ ವಾರ್ಷಿಕೋತ್ಸವ: ಪ್ರಧಾನಿ ಮೋದಿ ಭಾಗಿ

ಈ ಸಂಭ್ರಮಾಚರಣೆಯಲ್ಲಿ ಮಾನಸಿಕ ಆರೋಗ್ಯ, ಗ್ರಾಮೀಣಾಭಿವೃದ್ಧಿ, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಪರಿವರ್ತನೆ ಕುರಿತ ರಾಷ್ಟ್ರವ್ಯಾಪಿ ಸೇವಾ ಕಾರ್ಯಕ್ರಮಗಳೂ ನಡೆಯಲಿವೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ದಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಸಂಸ್ಥೆಯ 45ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಸಂಸ್ಥಾಪಕರಾದ ಶ್ರೀ ರವಿಶಂಕರ ಗುರೂಜಿಯವರ 70ನೇ ಜನ್ಮದಿನದ ಅಂಗವಾಗಿ ನಡೆಯುತ್ತಿದೆ.

ಆಯೋಜಕರ ಪ್ರಕಾರ, 182ಕ್ಕೂ ಹೆಚ್ಚು ದೇಶಗಳಿಂದ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಭಾಗವಹಿಸುವವರು ಈ ಮಹತ್ವದ ಜಾಗತಿಕ ಸಮಾರಂಭದಲ್ಲಿ ಒಂದಾಗಲಿದ್ದಾರೆ. ಪ್ರಧಾನಿ ಮೋದಿ ಮುಖ್ಯ ಭಾಷಣ ಮಾಡಲಿದ್ದು, ಹೊಸದಾಗಿ ನಿರ್ಮಿಸಲಾದ ‘ಧ್ಯಾನ ಮಂದಿರ’ ಎಂಬ ವಿಶೇಷ ಧ್ಯಾನ ಸಭಾಂಗಣವನ್ನು ಉದ್ಘಾಟಿಸಲಿದ್ದಾರೆ.

ಈ ಸಂಭ್ರಮಾಚರಣೆಯಲ್ಲಿ ಮಾನಸಿಕ ಆರೋಗ್ಯ, ಗ್ರಾಮೀಣಾಭಿವೃದ್ಧಿ, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಪರಿವರ್ತನೆ ಕುರಿತ ರಾಷ್ಟ್ರವ್ಯಾಪಿ ಸೇವಾ ಕಾರ್ಯಕ್ರಮಗಳೂ ನಡೆಯಲಿವೆ.

ಕಾರ್ಯಕ್ರಮದಲ್ಲಿ ಆಡಳಿತ, ವ್ಯವಹಾರ, ಶಿಕ್ಷಣ ಮತ್ತು ನಾಗರಿಕ ಸಮಾಜ ಕುರಿತ ಜಾಗತಿಕ ನಾಯಕತ್ವ ಸಂವಾದಗಳು ಹಾಗೂ ನೀತಿ ಚರ್ಚಾ ವೇದಿಕೆಗಳು ನಡೆಯಲಿವೆ. ಜೊತೆಗೆ ವಿವಿಧ ದೇಶಗಳ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ಸಾಂಸ್ಕೃತಿಕ ಉತ್ಸವಗಳೂ ಇರಲಿವೆ.

ಮೇ 13ರಂದು ರವಿಶಂಕರ ಗುರೂಜಿ ಅವರ ನೇತೃತ್ವದಲ್ಲಿ “ವಿಶ್ವ ಶಾಂತಿಗಾಗಿ ಜಾಗತಿಕ ಧ್ಯಾನ” ಕಾರ್ಯಕ್ರಮ ನಡೆಯಲಿದ್ದು, ವಿಶ್ವಾದ್ಯಂತ ಜನರಿಗೆ ಇದರಲ್ಲಿ ಭಾಗವಹಿಸುವ ಅವಕಾಶ ಇರಲಿದೆ.

ಭಾರತದಲ್ಲಿನ 450ಕ್ಕೂ ಹೆಚ್ಚು ಜಿಲ್ಲೆಗಳ ಮೌನ ಸಾಧಕರಿಗೆ ಗೌರವ ಸಮರ್ಪಣೆ, ಕೈದಿಗಳ ಕಲ್ಯಾಣ ಮತ್ತು ಕಾರಾಗೃಹ ಸುಧಾರಣೆ ಕುರಿತ ನೀತಿ ಚರ್ಚೆಗಳು ಕೂಡ ನಡೆಯಲಿವೆ. ವಿದೇಶಾಂಗ ಸಚಿವಾಲಯದ ಸಹಯೋಗದಲ್ಲಿ ಆಯೋಜಿಸಲಾದ BIMSTEC ಯುವ ನಾಯಕತ್ವ ವಿನಿಮಯ ಕಾರ್ಯಕ್ರಮದಲ್ಲಿ ಸದಸ್ಯ ರಾಷ್ಟ್ರಗಳ ಯುವ ನಾಯಕರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟಿವಿಕೆ ಮ್ಯಾಜಿಕ್ ನಂಬರ್ ಪಡೆಯದಿದ್ದರೆ, ಎಡಿಎಂಕೆಗೆ ಡಿಎಂಕೆ ಬೆಂಬಲ; ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸ್ಟಾಲಿನ್ ಗೆ !

‘ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಶೀಘ್ರ ಒಪ್ಪಂದಕ್ಕೆ ಬನ್ನಿ, ಇಲ್ಲವಾದರೆ ಹೊಡೆತ ಇನ್ನಷ್ಟು ಭೀಕರವಾಗಲಿದೆ’: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ..!

ಕ್ಷಿಪಣಿ ದಾಳಿ ಬಳಿಕ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ‘ಸಣ್ಣ ಮಟ್ಟದ ದಾಳಿಯಷ್ಟೇ, ಕದನ ವಿರಾಮ ಮುರಿದಿಲ್ಲ’; ಟ್ರಂಪ್..!

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಮಿಂಚು ಸಹಿತ ಭಾರೀ ಮಳೆ

ಮನ್ರೇಗಾ ಪುನರ್ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ..!

SCROLL FOR NEXT