ಆತ್ಮಹತ್ಯೆಗೆ ಶರಣಾದ ನರ್ಸ್ 
ರಾಜ್ಯ

ಬೆಂಗಳೂರು: ವೈದ್ಯ ಸಾವು ಬೆನ್ನಲ್ಲೇ ನರ್ಸ್ ಆತ್ಮಹತ್ಯೆ, ಕಾರಣ..?

ಎರಡು ದಿನಗಳ ಹಿಂದೆಯಷ್ಟೇ ಇವರು ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ವೈದ್ಯ ಡಾ. ಚೇತನ್ ಟೆಂಕರ್ ಅವರು ಕೂಡ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ನರ್ಸ್ ಆತ್ಮಹತ್ಯೆಗೆ ಶರಣಾಗಿರುವ ಅನುಮಾನಗಳು ಹೆಚ್ಚಾಗುವಂತೆ ಮಾಡಿದೆ.

ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಆತಂಕ ಹುಟ್ಟಿಸುವ ಘಟನೆ ನಡೆದಿದೆ. ವೈದ್ಯ ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳಲ್ಲೇ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೂಡ ನೇಣಿಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ನವೋದಯ ಆಸ್ಪತ್ರೆಯಲ್ಲಿ ನರ್ಸ್ (Nurse) ಆಗಿ ಕೆಲಸ ಮಾಡುತ್ತಿದ್ದ ಸರಸ್ವತಿ (45) ಎಂಬುವವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಇವರು ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ವೈದ್ಯ ಡಾ. ಚೇತನ್ ಟೆಂಕರ್ ಅವರು ಕೂಡ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ನರ್ಸ್ ಆತ್ಮಹತ್ಯೆಗೆ ಶರಣಾಗಿರುವ ಅನುಮಾನಗಳು ಹೆಚ್ಚಾಗುವಂತೆ ಮಾಡಿದೆ.

ಘಟನೆ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಎರಡೂ ಘಟನೆಗಳ ನಡುವೆ ಯಾವುದೇ ಸಂಬಂಧ ಇದೆಯೇ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಎರಡು ಘಟನೆಗಳ ಕುರಿತು ಕನಕಪುರ ಟೌನ್ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಎರಡೂ ಆತ್ಮಹತ್ಯೆ ಪ್ರಕರಣಗಳ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಘಟನೆಗಳು ಪರಸ್ಪರ ಸಂಬಂಧ ಹೊಂದಿದವೆಯೇ ಎಂಬುದೂ ಸ್ಪಷ್ಟವಾಗಿಲ್ಲ. ಮೃತರ ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸಲಾಗುವುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೀವು ಅಥವಾ ನಿಮ್ಮ ಪರಿಚಯದ ಯಾರಾದರೂ ಮಾನಸಿಕ ಒತ್ತಡ, ಖಿನ್ನತೆ ಅಥವಾ ಆತ್ಮಹತ್ಯೆ ಚಿಂತನೆಗಳಿಂದ ಬಳಲುತ್ತಿದ್ದರೆ, ದಯವಿಟ್ಟು ಅದನ್ನು ನಿರ್ಲಕ್ಷಿಸಬೇಡಿ. ತಕ್ಷಣ ಕುಟುಂಬದವರು, ಸ್ನೇಹಿತರು ಅಥವಾ ಮಾನಸಿಕ ಆರೋಗ್ಯ ತಜ್ಞರ ನೆರವು ಪಡೆಯಿರಿ. ತುರ್ತು ಸಹಾಯಕ್ಕಾಗಿ 24x7 ಟೆಲಿ-ಮನಸ್ ಸಹಾಯವಾಣಿ 14416 ಅಥವಾ 1-800-891-4416 ಗೆ ಕರೆ ಮಾಡಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಡಪಕ್ಷಗಳ ಬೆಂಬಲ ಸಿಕ್ಕರೂ ಟಿವಿಕೆಗೆ ಸಿಕ್ಕಿಲ್ಲ ಸರ್ಕಾರ ರಚನೆ ಭಾಗ್ಯ, ಮ್ಯಾಜಿಕ್ ಸಂಖ್ಯೆಗೆ 2 ಸ್ಥಾನ ಕೊರತೆ; ಇಂದು ಇಲ್ಲ ವಿಜಯ್ ಪ್ರಮಾಣ ವಚನ-Video

ನೂತನ CDS ಆಗಿ ಲೆ. ಜನರಲ್ ಎನ್ ಎಸ್ ರಾಜಾ ಸುಬ್ರಮಣಿ ನೇಮಕ

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ: ಇಂದು ಪ್ರಮಾಣ ವಚನ

ಗುದದ್ವಾರದ ಕುರು ಅಥವಾ ಏನಲ್ ಅಬ್ಸೆಸ್ ಸೋಂಕಿನ ಲಕ್ಷಣಗಳು; ಚಿಕಿತ್ಸೆ (ಕುಶಲವೇ ಕ್ಷೇಮವೇ)

ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..!

SCROLL FOR NEXT