ನರೇಂದ್ರ ಮೋದಿ- ಡಿಕೆ ಶಿವಕುಮಾರ್  online desk
ರಾಜ್ಯ

ಕರ್ನಾಟಕದಲ್ಲಿ ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ, ಅವರಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ: ಪ್ರಧಾನಿಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

ರಾಯಚೂರಿನ ಲಿಂಗಸಗೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ಲಿಂಗಸಗೂರು: "ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿಯವರ ಕಣ್ಣಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು‌.

ರಾಯಚೂರಿನ ಲಿಂಗಸಗೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಕರ್ನಾಟಕದಲ್ಲಿ ಸಿಎಂ ಕುರ್ಚಿ ಅಲುಗಾಡುತ್ತಿದೆ. ಕೇರಳ, ಪಂಜಾಬ್ ನಲ್ಲೂ ಇದೇ ರೀತಿ ಆಗಿದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಈ ರೀತಿ ಉತ್ತರಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಸಚಿವ ಸುಧಾಕರ್ ಅವರು ಇರಬೇಕಿತ್ತು

ಡಿ ಸುಧಾಕರ್ ಅವರ ನಿಧನದ ಬಗ್ಗೆ ಕೇಳಿದಾಗ, "ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಅವರು ನಮ್ಮೊಡನೆ ಇರಬೇಕಿತ್ತು. ಅವರ ಅನಾರೋಗ್ಯದ ಕಾರಣಕ್ಕೆ ಇದು ಸಾಧ್ಯವಾಗಲಿಲ್ಲ. ನನ್ನನ್ನ,‌ ಮುಖ್ಯಮಂತ್ರಿ ಅವರನ್ನ ಭೇಟಿ ಮಾಡಿದಾಗಲೆಲ್ಲ ಸದಾ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತಾಗಿ ಮನವಿ ಮಾಡುತ್ತಲೇ ಇದ್ದರು. ಜೈನ ಸಮುದಾಯಕ್ಕೆ ಸೇರಿದವರು. ಕಡಿಮೆ ಜನಸಂಖ್ಯೆ ಇದ್ದರು ಸಹ ಎಲ್ಲಾ ಸಮುದಾಯದ ಜನರನ್ನ ಪ್ರೀತಿಯಿಂದ ಕಾಣುತ್ತಿದ್ದರು. ಹೃದಯ ಶ್ರೀಮಂತಿಕೆ ಇದ್ದಂತಹ ಮನುಷ್ಯ. ಇವರ ಸಾವಿನಿಂದ ನಮ್ಮ ಸರ್ಕಾರಕ್ಕೆ, ಕ್ಷೇತ್ರಕ್ಕೆ ನಷ್ಟ ಉಂಟಾಗಿದೆ. ನನಗೆ ವೈಯಕ್ತಿಕವಾಗಿ ಬಹಳ ಆಘಾತ ಉಂಟಾಗಿದೆ" ಎಂದರು.

ಸಮಸ್ಯೆ ಪರಿಹಾರಕ್ಕೆ ಕ್ರಮ

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸದನದಲ್ಲಿ ಚರ್ಚೆಯಾಗಿರುವ ಕುರಿತು ಕೇಳಿದಾಗ, "ನನಗೆ ಇದರ ಬಗ್ಗೆ ಗೊತ್ತಿಲ್ಲ. ನನ್ನ ಇಲಾಖೆಯಿಂದ ಕುಡಿಯುವ ನೀರು ನೀಡಲು ಆದ್ಯತೆಯಿದೆ. ಈ ಬಗ್ಗೆ ನಮ್ಮ ಅಧಿಕಾರಿಗಳ ಬಳಿ ಮಾತನಾಡಿ ಏನು ಪರಿಹಾರ ಮಾಡಬೇಕೋ ಮಾಡುತ್ತೇನೆ" ಎಂದು ಹೇಳಿದರು‌.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳ ಸಿಎಂ ಆಯ್ಕೆ: ಕೆಸಿ ವೇಣುಗೋಪಾಲ್ ರಾಹುಲ್ ಗಾಂಧಿಯ ಆದ್ಯತೆ; ಕುತೂಹಲ ಮೂಡಿಸಿದ ಖಾಸಗಿ ಭೇಟಿ!

ಸಿಎಂ ಪದಗ್ರಹಣ ಕಾರ್ಯಕ್ರಮ: ಸೂಟ್ ಧರಿಸಿ 74 ವರ್ಷಗಳ ತಮಿಳು ಪರಂಪರೆ, ಸಂಪ್ರದಾಯ ಮುರಿದ ವಿಜಯ್!

ವಿಜಯ್ ಪ್ರಮಾಣ ವಚನ ಸ್ವೀಕಾರ: ಮೊದಲ ದಿನವೇ ತಗಾದೆ ತೆಗೆದ CPI, ಜನಗಣಮನ, ವಂದೇ ಮಾತರಂ ಕುರಿತು ಅಸಮಾಧಾನ!

ತಮಿಳುನಾಡು ಸಿಎಂ ಆಗಿ ನಟ ವಿಜಯ್ ಪ್ರಮಾಣ ವಚನ ಸ್ವೀಕಾರ; 74 ವರ್ಷಗಳ ದಾಖಲೆ ಪತನ!

IFS ಪರೀಕ್ಷೆಯಲ್ಲಿ ರೈತನ ಪುತ್ರ ದೇಶಕ್ಕೆ ಪ್ರಥಮ Rank: ಬೆಳಗಾವಿಗೆ ಸಂತಸದ ಕ್ಷಣ!

SCROLL FOR NEXT