ಸಾಂದರ್ಭಿಕ ಚಿತ್ರ 
ರಾಜ್ಯ

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿ: ಬೆಂಗಳೂರಿನ 10 ವರ್ಷದ ಬಾಲಕ ಬಲಿ!

ಇತ್ತೀಚಿನ ದಿನಗಳಲ್ಲಿ ಚಾಮರಾಜನಗರದಲ್ಲಿ ನಡೆದ ಎರಡನೇ ಘಟನೆ ಇದಾಗಿದ್ದು, ಭಕ್ತರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಮೈಸೂರು: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಬಳಿಯ ನಾಗಮಲೆಯಲ್ಲಿ ಭಾನುವಾರ ಮುಂಜಾನೆ ಬೆಂಗಳೂರಿನ 10 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ಮಾಡಿ ಬಲಿಪಡೆದಿದೆ.

ಇತ್ತೀಚಿನ ದಿನಗಳಲ್ಲಿ ಚಾಮರಾಜನಗರದಲ್ಲಿ ನಡೆದ ಎರಡನೇ ಘಟನೆ ಇದಾಗಿದ್ದು, ಭಕ್ತರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಬಾಲಕ ಹರ್ಷಿತ್ ಮತ್ತು ಅವನ ಕುಟುಂಬ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದಾಗ ಈ ಘಟನೆ ನಡೆದಿದೆ. ನಾಗಮಲೆ ಕ್ಷೇತ್ರಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಚಿರತೆ ಬಾಲಕನ ಮೇಲೆ ಎರಗಿದ್ದು, ಪೋಷಕರ ಮುಂದೆಯೇ ಬಾಲಕನ್ನು ಹೊತ್ತೊಯ್ದು ಕೊಂದು ಹಾಕಿದೆ.

ಸುಮಾರು ಅರ್ಧ ಗಂಟೆಯ ನಂತರ ಕುತ್ತಿಗೆ ಮತ್ತು ಇತರ ಭಾಗಗಳು ರಕ್ತಸಿಕ್ತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಮಾಹಿತಿ ಪಡೆದ ಕೂಡಲೇ ಅರಣ್ಯ ವೀಕ್ಷಕರು ಸ್ಥಳಕ್ಕೆ ತಲುಪಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಇರುವಿಕೆ ಬಗ್ಗೆ ಮುಂಚಿತವಾಗಿ ಯಾವುದೇ ಮಾಹಿತಿ ನೀಡಿರಲಿಲ್ಲ. ಹೆಚ್ಚಿನ ಸಂಖ್ಯೆಯ ಜನರಿದ್ದರೂ ಚಿರತೆ ದಾಳಿ ಮಾಡಿದೆ ಎಂದು ಹರ್ಷಿತ್ ಅವರ ಕುಟುಂಬ ಸದಸ್ಯರೊಬ್ಬರು ಗೋಳಾಡಿದರು.

ಚಿರತೆ ದಾಳಿ ಹೊಸದೇನಲ್ಲ: ಜ. 21 ರಂದು ಮಂಡ್ಯ ಜಿಲ್ಲೆಯ ಚೀರನಹಳ್ಳಿಯಿಂದ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ಬರುತ್ತಿದ್ದ ಪ್ರವೀಣ್ ಚಿರತೆ ದಾಳಿಯಿಂದ ಮೃತಪಟ್ಟಿದ್ದರು. ಫೆ. 10 ರಂದು ಚನ್ನಪಟ್ಟಣ ತಾಲೂಕಿನ ಬಾಲಕಿ ಶ್ರೇಯಸ್ ಚಿರತೆ ದಾಳಿಯಿಂದ ಗಾಯಗೊಂಡಿದ್ದರು. ಇಷ್ಟಾದರೂ ಸಂಬಂಧಪಟ್ಟ ಇಲಾಖೆ ಹಾಗೂ ಪ್ರಾಧಿಕಾರ ಭಕ್ತರ ಸುರಕ್ಷತೆಗೆ ಒತ್ತು ನೀಡಿಲ್ಲ ಎಂದು ಸಾರ್ವಜನಿಕರು ಆಕ್ರಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಬಳಿಕ ರಾಷ್ಟ್ರಪತಿಗಳ ಭೇಟಿಯಾದ ಅಮಿತ್ ಶಾ; ಹೆಚ್ಚಿದ ಕುತೂಹಲ, ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ?

ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಯುದ್ಧದಲ್ಲೂ ಮಕ್ಕಳ ರಕ್ಷಣೆ ಅಗತ್ಯ, ಶಾಲೆಗಳ ಗುರಿಯಾಗಿಸುವವರ ವಿರುದ್ಧ ಇಡೀ ವಿಶ್ವ ಒಗ್ಗೂಡಲಿ: ವಿಶ್ವಸಂಸ್ಥೆಯಲ್ಲಿ ಭಾರತದ ಆಗ್ರಹ..!

RSS ಗಲಿಬಿಲಿಗೊಂಡರೆ BJP ಏಕೆ ಬುಸುಗುಡುತ್ತೆ: ಬಾಲ ಯಾರ ಕೈಯ್ಯಲ್ಲಿದೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕುಮಾರಣ್ಣನ ಪಂಚೆ ಒಂದೇ ಸಿಂಪಲ್-ಉಳಿದದ್ದೆಲ್ಲಾ ದುಬಾರಿ: ಜಮೀನನ್ನು ಅನಿತಾ ಕುಮಾರಸ್ವಾಮಿ ರಾಮ್‌ರಾಜ್‌ ಪಂಚೆ ಮಾರಿ ಖರೀದಿಸಿದ್ದಾರೆಯೇ?