ಮೃತದೇಹಗಳನ್ನು ಹೊರಗೆ ತೆಗೆದ ಪೊಲೀಸರು 
ರಾಜ್ಯ

ಮಂಡ್ಯ: ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ದುರ್ಮರಣ!

ಇಂದು ಅವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ಮಂಡ್ಯ: ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಯರಗನಹಳ್ಳಿ ಬಳಿ ನಡೆದಿದೆ. ಮೃತರನ್ನು ಪ್ರಕಾಶ್ ಗೌಡ (24) ಮತ್ತು ಯಶಸ್ (23) ಎಂದು ಗುರುತಿಸಲಾಗಿದೆ.

ಸೋಮವಾರ ಇವರಿಬ್ಬರೂ ತಮ್ಮ ಸ್ನೇಹಿತರೊಂದಿಗೆ ಯರಗನಹಳ್ಳಿ ಕೆರೆಯಲ್ಲಿ ಈಜಲು ಹೋದಾಗ ಈ ದುರ್ಘಟನೆ ನಡೆದಿದೆ. ಇಬ್ಬರೂ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಅವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯ ಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ದುಃಖಿತ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಬಿಂಡಿಗನವಿಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನೀರಿನಲ್ಲಿ ಮುಳುಗಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಯುವಕರು ಆಳ ನೀರಿಗೆ ಇಳಿದಿರಬಹುದು ಎಂದು ತಿಳಿದುಬಂದಿದೆ.

ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಕೆರೆಯ ಸುತ್ತಲೂ ಎಚ್ಚರಿಕೆ ಫಲಕಗಳು ಮತ್ತು ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕೆಂದು ಸ್ಥಳೀಯರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

ಎರಡು ವರ್ಷದವೆರೆಗಿನ 'ಸಮ್ಮತಿಯ ಲೈಂಗಿಕ ಸಂಬಂಧ' ಅತ್ಯಾಚಾರವೇ? ಕೋರ್ಟ್ ಹೇಳಿದ್ದೇನು!

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

ಚಿನ್ನಾಭರಣ ಖರೀದಿಸದಂತೆ ಮೋದಿ ಮನವಿ, ಪ್ರಧಾನಿ ಮಾತಿನ ಹಿಂದಿನ ಅರ್ಥವೇನು? ಇಲ್ಲಿದೆ ಉತ್ತರ

Madhya Pradesh: ಕುನೋ ಅಭಯಾರಣ್ಯಕ್ಕೆ ಮತ್ತೆರಡು ಚೀತಾಗಳ ಬಿಡುಗಡೆ, ಆಫ್ರಿಕನ್ ದೊಡ್ಡ ಬೆಕ್ಕುಗಳ ಸಂಖ್ಯೆ 53!

SCROLL FOR NEXT