ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್‌  
ರಾಜ್ಯ

“ನೀವು ಇತಿಹಾಸ ನಿರ್ಮಿಸಿದ್ದೀರಿ”: ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್‌'ಗೆ ಕರೆ ಮಾಡಿ ಅಭಿನಂದಿಸಿದ ಸಿದ್ದರಾಮಯ್ಯ- Video

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯ್ ಅವರಿಗೆ ದೂರವಾಣಿ ಕರೆ ಮಾಡಿದ ಸಿದ್ದರಾಮಯ್ಯ, “ಬೆಂಗಳೂರಿಗೆ ಯಾವಾಗ ಬರುತ್ತೀರಿ?” ಎಂದು ಆತ್ಮೀಯವಾಗಿ ಪ್ರಶ್ನಿಸಿ, ಆಹ್ವಾನವನ್ನೂ ನೀಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್‌ ಅವರಿಗೆ ದೂರವಾಣಿ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯ್ ಅವರಿಗೆ ದೂರವಾಣಿ ಕರೆ ಮಾಡಿದ ಸಿದ್ದರಾಮಯ್ಯ ಅವರು, “ನೀವು ಇತಿಹಾಸ ನಿರ್ಮಿಸಿದ್ದೀರಿ” ಎಂದು ಶ್ಲಾಘಿಸಿದರು. ಜೊತೆಗೆ “ಬೆಂಗಳೂರಿಗೆ ಯಾವಾಗ ಬರುತ್ತೀರಿ?” ಎಂದು ಆತ್ಮೀಯವಾಗಿ ಪ್ರಶ್ನಿಸಿ, ಆಹ್ವಾನವನ್ನೂ ನೀಡಿದ್ದಾರೆ.

ಚಿತ್ರರಂಗದಿಂದ ರಾಜಕೀಯಕ್ಕೆ ಬಂದ ವಿಜಯ್, ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜಕೀಯ ನಾಯಕರು ಹಾಗೂ ಅಭಿಮಾನಿಗಳಿಂದ ವಿಜಯ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಇದಲ್ಲದೆ, ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲೂ ಶುಭಕೋರಿರುವ ಸಿದ್ದರಾಮಯ್ಯ ಅವರು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಆಳವಾದ ನಾಗರಿಕ ಸಂಬಂಧಗಳು ಹಾಗೂ ಸಾಂಸ್ಕೃತಿಕ ಸಾಮ್ಯತೆಯನ್ನು ಹಂಚಿಕೊಂಡಿವೆ. ಎರಡು ರಾಜ್ಯಗಳು ಸಾಮಾಜಿಕ ನ್ಯಾಯ, ಒಳಗೊಳ್ಳುವ ಬೆಳವಣಿಗೆ ಮತ್ತು ಒಕ್ಕೂಟ ಸಹಕಾರಕ್ಕಾಗಿ ಸಮಾನ ಆಕಾಂಕ್ಷೆಗಳನ್ನು ಹೊಂದಿವೆ. ಉಭಯ ರಾಜ್ಯಗಳ ನಡುವಿನ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಪಾರಂಪರಿಕ ಮೌಲ್ಯಗಳನ್ನು ಎತ್ತಿಹಿಡಿಯಲು ವಿಜಯ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.

ಜಾತ್ಯತೀತತೆ, ಸಾಂವಿಧಾನಿಕ ಮೌಲ್ಯಗಳನ್ನು ಮುನ್ನಡೆಸಲು ಹಾಗೂ ವಿಭಜಕ ಮತ್ತು ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧದ ಸಾಮೂಹಿಕ ಹೋರಾಟಕ್ಕಾಗಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ತಮಿಳುನಾಡಿನ ಜನರ ಸೇವೆಯಲ್ಲಿ ವಿಜಯ್ ಅವರ ಅಧಿಕಾರಾವಧಿಯು ಯಶಸ್ವಿ ಮತ್ತು ಪರಿವರ್ತನೆಯ ಹಾದಿಯಾಗಲಿ ಎಂದು ಶುಭ ಹಾರೈಸಿದ್ದಾರೆ.

ಈ ಸಂದೇಶದ ಮೂಲಕ ಸಿದ್ದರಾಮಯ್ಯ ಅವರು ನೆರೆಯ ರಾಜ್ಯದ ನೂತನ ನಾಯಕನೊಂದಿಗೆ ಸೌಹಾರ್ದಯುತ ಸಂಬಂಧವನ್ನು ವೃದ್ಧಿಸುವ ಮತ್ತು ಪ್ರಾದೇಶಿಕ ಹಿತಾಸಕ್ತಿಗಳಿಗಾಗಿ ಒಂದಾಗಿ ಶ್ರಮಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!