ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 
ರಾಜ್ಯ

Gruha Lakshmi: ಬಾಕಿ ಕಂತು ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಏಪ್ರಿಲ್ ತಿಂಗಳ ಕಂತು ಕೂಡ ಇನ್ನು ಹತ್ತು ದಿನಗಳೊಳಗೆ ಫಲಾನುಭವಿಗಳಿಗೆ ತಲುಪಲಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿ: ಗೃಹ ಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಬಾಕಿ ಉಳಿದಿರುವ ಕಂತು ಇನ್ನು ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಏಪ್ರಿಲ್ ತಿಂಗಳ ಕಂತು ಕೂಡ ಇನ್ನು ಹತ್ತು ದಿನಗಳೊಳಗೆ ಫಲಾನುಭವಿಗಳಿಗೆ ತಲುಪಲಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಕನೂರ ಗ್ರಾಮದಲ್ಲಿ ನಡೆದ ಶ್ರೀ ಮಹಾಲಕ್ಷ್ಮೀ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಯಾರ ಹೆಸರನ್ನೂ ಉಲ್ಲೇಖಿಸದೆ, ಕ್ಷೇತ್ರದ ಹಿಂದಿನ ಪ್ರತಿನಿಧಿಗಳ ವಿರುದ್ಧ ಸಚಿವೆ ಟೀಕಿಸಿ, ಅವರು ಅಭಿವೃದ್ಧಿ ಕೆಲಸಗಳನ್ನು ಮಾಡದೇ ಕೇವಲ “ಹಿಂದುತ್ವ ರಾಜಕಾರಣ”ಕ್ಕೆ ಮಾತ್ರ ಒತ್ತು ನೀಡಿದರು ಎಂದು ಆರೋಪಿಸಿದರು.

ಎಲ್ಲಾ ಕ್ಷೇತ್ರಗಳಲ್ಲೂ ಉನ್ನತ ಮಟ್ಟದ ಅಭಿವೃದ್ಧಿ ಸಾಧಿಸುವ ಮೂಲಕ ಈ ಕ್ಷೇತ್ರವನ್ನು ಬಾರಾಮತಿ ಮಾದರಿಯಲ್ಲಿ ಮಾದರಿ ಕ್ಷೇತ್ರವನ್ನಾಗಿ ರೂಪಿಸುವ ಕನಸು ಹೊಂದಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಬಿಜೆಪಿಯ ಹೊಸ ತಂಡದಿಂದ ಹೊರಗುಳಿದ ಅಮಿತ್ ಮಾಳವಿಯಾ, ಮೊದಲ ರಿಯಾಕ್ಷನ್!

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?