ಸಾಂದರ್ಭಿಕ ಚಿತ್ರ  
ರಾಜ್ಯ

Karnataka Rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಆಲಿಕಲ್ಲು ಮಳೆ ಬೀಳುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ಒಳನಾಡಿನಲ್ಲಿ ನಾಳೆ ಮತ್ತು ಮೇ.15 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ದಕ್ಷಿಣ ಒಳನಾಡಿನಲ್ಲೂ ಕೂಡ ಮೇ 15 ರಂದು ಮಳೆಯಾಗುವ ನಿರೀಕ್ಷೆಯಿದೆ.

ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಮೇ 14 ರಿಂದ 16 ರವರೆಗೆ ರಾಜ್ಯದ ಹಲವೆಡೆ ಆಲಿಕಲ್ಲು ಮಳೆ ಸಾಧ್ಯತೆಯಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನಾಳೆ ದಾವಣಗೆರೆ, ವಿಜಯನಗರ, ಶಿವಮೊಗ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಂಜಿನ ಕಲ್ಲುಗಳು ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಈ ವಾರಾಂತ್ಯಕ್ಕೆ ಅಂಡಮಾನ್ ಪ್ರವೇಶಿಸಲಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamil Nadu Assembly: ವಿಜಯ್ ವಿಶ್ವಾಸಮತ ಯಾಚನೆ, ಕಾಂಗ್ರೆಸ್, ಸಿಪಿಎಂ, ವಿಸಿಕೆ ಬೆಂಬಲ ಘೋಷಣೆ!

ಮಿತವ್ಯಯಕ್ಕೆ ಪ್ರಧಾನಿ ಮೋದಿ ಹೆಜ್ಜೆ: ಎಸ್‌ಪಿಜಿ ಭದ್ರತಾ ಪಡೆ ವಾಹನಗಳ ಸಂಖ್ಯೆ ಶೇ.50ರಷ್ಟು ಕಡಿತ,ಬಿಜೆಪಿ ಸಿಎಂಗಳಿಗೂ ಸೂಚನೆ, EV ಗೆ ಆದ್ಯತೆ

ಬೆಂಗಳೂರು: ಪ್ರಧಾನಿ ಮೋದಿ ಸಾಗುತ್ತಿದ್ದ ಮಾರ್ಗದಲ್ಲಿ ಟೈಮರ್ ಪತ್ತೆ! ದೊಡ್ಡ ಸಂಚಿನ ಶಂಕೆ

Gold Tariffs- ಚಿನ್ನ ಖರೀದಿಸಬೇಡಿ ಎಂದು ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಕೇಂದ್ರ ಕ್ರಮ: ಚಿನ್ನ-ಬೆಳ್ಳಿ ಆಮದು ಸುಂಕ ಶೇ.15ಕ್ಕೆ ಏರಿಕೆ

LOP ಅಂದ್ರೆ 'ರಬ್ಬರ್ ಸ್ಟ್ಯಾಂಪ್' ಅಲ್ಲ: CBI ನಿರ್ದೇಶಕರ ಆಯ್ಕೆ ಪ್ರಕ್ರಿಯೆ ವಿರುದ್ಧ ತಿರುಗಿಬಿದ್ದ ರಾಹುಲ್!

SCROLL FOR NEXT