ಪ್ರಿಯಾಂಕ್ ಖರ್ಗೆ 
ರಾಜ್ಯ

ರಾಜ್ಯದ ಆರು ಗ್ರಾಮ ಪಂಚಾಯತಿಗಳಿಗೆ ಕೇಂದ್ರದ ನಗದು ಪುರಸ್ಕಾರ: ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದನೆ!

ರಾಷ್ಟ್ರದ 42 ಗ್ರಾಮ ಪಂಚಾಯತಿಗಳು ಪ್ರಶಸ್ತಿಗೆ ಭಾಜನವಾಗಿದ್ದು, ಅವುಗಳಲ್ಲಿ ಕರ್ನಾಟಕದ 6 ಪಂಚಾಯತಿಗಳು ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿವೆ ಎಂದು ಸಚಿವರು ಸಂತಸ ಹಂಚಿಕೊಂಡಿದ್ದಾರೆ

ಬೆಂಗಳೂರು: 2025ರ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳು ಪ್ರಕಟಗೊಂಡಿದ್ದು ನಗದು ಪುರಸ್ಕಾರ ಪಡೆದುಕೊಂಡಿರುವ ಕರ್ನಾಟಕದ ಆರು ಗ್ರಾಮ ಪಂಚಾಯತಿಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ.

ರಾಷ್ಟ್ರದ 42 ಗ್ರಾಮ ಪಂಚಾಯತಿಗಳು ಪ್ರಶಸ್ತಿಗೆ ಭಾಜನವಾಗಿದ್ದು, ಅವುಗಳಲ್ಲಿ ಕರ್ನಾಟಕದ 6 ಪಂಚಾಯತಿಗಳು ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿವೆ ಎಂದು ಸಚಿವರು ಸಂತಸ ಹಂಚಿಕೊಂಡಿದ್ದಾರೆ. ಬಡತನ ಮುಕ್ತ ಮತ್ತು ಸುಧಾರಿತ ಜೀವನೋಪಾಯ ವಿಭಾಗದ ಪ್ರಥಮ ಪ್ರಶಸ್ತಿಯು ಹೆಬ್ರಿಯ ಮುದ್ರಾಡಿ ಗ್ರಾಮ ಪಂಚಾಯಿತಿಗೆ ಸಂದಿದ್ದು ಒಂದು ಕೋಟಿ ರೂಪಾಯಿ ನಗದು ಬಹುಮಾನ ಪಡೆದುಕೊಂಡಿದೆ.

ಉಡುಪಿ ಜಿಲ್ಲೆಯ ಕುಂದಾಪುರದ ವಂಡ್ಸೆ ಗ್ರಾಮ ಪಂಚಾಯತಿ ಆರೋಗ್ಯಕರ ಪಂಚಾಯತ್ ವಿಭಾಗದಲ್ಲಿ ದ್ವಿತೀಯ ಪ್ರಶಸ್ತಿಗೆ ಪಾತ್ರವಾಗಿದ್ದು 75 ಲಕ್ಷ ರೂ ನಗದು ಬಹುಮಾನಕ್ಕೆ ಪಾತ್ರವಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಹಾಲನಾಯಕನಹಳ್ಳಿ ಗ್ರಾಮ ಪಂಚಾಯಿತಿಗೆ ಮಕ್ಕಳ ಸ್ನೇಹಿ ಪಂಚಾಯತ್ ವಿಭಾಗದಲ್ಲಿ ದ್ವಿತೀಯ ಪ್ರಶಸ್ತಿ ದೊರಕಿದ್ದು 75 ಲಕ್ಷ ರೂಪಾಯಿ ಬಹುಮಾನವನ್ನು ಪಡೆದುಕೊಂಡಿದೆ. ಉಡುಪಿ ಜಿಲ್ಲೆಯ ಹೆಬ್ರಿಯ ವಿಭಾಗದಲ್ಲಿ ಮಡಮಕ್ಕಿ ಗ್ರಾಮ ಪಂಚಾಯಿತಿಗೆ ನೀರು ಸಮೃದ್ಧ ಪಂಚಾಯತ್ ವಿಭಾಗದಲ್ಲಿ ಎರಡನೇ ಪ್ರಶಸ್ತಿ ದೊರೆತಿದ್ದು 75 ಲಕ್ಷ ರೂಪಾಯಿಗಳ ಪುರಸ್ಕಾರಕ್ಕೆ ಪಾತ್ರವಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳದ ಸಾನೂರು ಗ್ರಾಮ ಪಂಚಾಯತಿಗೆ ಮೂಲ ಸೌಕರ್ಯದಲ್ಲಿ ಸ್ವಾವಲಂಬಿ ಪಂಚಾಯತ್ ವಿಭಾಗದಲ್ಲಿ ತೃತೀಯ ಪ್ರಶಸ್ತಿ ಲಭಿಸಿದ್ದು 25 ಲಕ್ಷ ರೂ ನಗದು ಬಹುಮಾನವನ್ನು ಪಡೆದುಕೊಂಡಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಹಕ್ಲಾಡಿ ಗ್ರಾಮ ಪಂಚಾಯತಿಗೆ ಸಾಮಾಜಿಕವಾಗಿ ನ್ಯಾಯಯುತ ಮತ್ತು ಸುರಕ್ಷಿತ ವಿಭಾಗದಲ್ಲಿ ತೃತೀಯ ಪ್ರಶಸ್ತಿ ಲಭಿಸಿದ್ದು 25 ಲಕ್ಷ ರೂ ನಗದು ಬಹುಮಾನವನ್ನು ಪಡೆದಿದೆ.

ಆರು ಪ್ರಶಸ್ತಿಗಳಲ್ಲಿ ಉಡುಪಿ ಜಿಲ್ಲೆ 5 ಪ್ರಶಸ್ತಿಗಳನ್ನು ಪಡೆದಿದೆ, ಈ ಗೌರವಕ್ಕೆಕಾರಣರಾದ ಆರೂ ಪಂಚಾಯತಿಗಳ ಜನ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ನೌಕರ ವರ್ಗವನ್ನು ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

LOP ಅಂದ್ರೆ 'ರಬ್ಬರ್ ಸ್ಟ್ಯಾಂಪ್' ಅಲ್ಲ: CBI ನಿರ್ದೇಶಕರ ಆಯ್ಕೆ ಪ್ರಕ್ರಿಯೆ ವಿರುದ್ಧ ತಿರುಗಿಬಿದ್ದ ರಾಹುಲ್!

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ; ಜುಲೈ 1 ರಿಂದ ಜಾರಿ

IPL 2026: 82 ರನ್‌ಗಳಿಂದ SRH ಮಣಿಸಿದ Gujarat Titans; RCB ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಗಿಲ್ ಪಡೆ!

ಬಂಗಾಳದಲ್ಲಿ ಶುದ್ಧೀಕರಣ ಶುರು ಮಾಡಿದ ಸಿಎಂ ಸುವೇಂದು: TMC ನೇಮಕ ಮಾಡಿದ್ದ ಗ್ರೂಪ್ ಎ ಶ್ರೇಣಿಯ 232 ಅಧಿಕಾರಿಗಳ ವಜಾ!

ಒಂದೇ ಒಂದು ದಾಳಿ ನಡೆದರೂ ಯುರೇನಿಯಂ ದಾಸ್ತಾನು ಶಸ್ತ್ರಾಸ್ತ್ರ ದರ್ಜೆಗೆ ಸಂವರ್ಧನೆ- ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ!

SCROLL FOR NEXT