ಸಾಂದರ್ಭಿಕ ಚಿತ್ರ 
ರಾಜ್ಯ

ಚನ್ನಗಿರಿಯಲ್ಲಿ ದುರಂತ: ಈಜಲು ತೆರಳಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು..!

BIET ಕಾಲೇಜಿನ 10 ವಿದ್ಯಾರ್ಥಿಗಳ ಗುಂಪು ಬಸವಪಟ್ಟಣದ ದೇವಸ್ಥಾನ ಪ್ರವಾಸಕ್ಕೆ ತೆರಳಿತ್ತು. ಬಳಿಕ ಭದ್ರಾ ಬಲದಂಡೆ ಕಾಲುವೆಯಲ್ಲಿ ನೀರು ಹರಿಯುತ್ತಿರುವುದನ್ನು ಗಮನಿಸಿದ ಕೆಲ ವಿದ್ಯಾರ್ಥಿಗಳು ಈಜಲು ಇಳಿದಿದ್ದಾರೆ.

ಚನ್ನಗಿರಿ (ದಾವಣಗೆರೆ): ಈಜಲು ಭದ್ರಾ ಕಾಲುವೆಗೆ ಇಳಿದಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ಚನ್ನಗಿರಿ ತಾಲ್ಲೂಕಿನ ಮರಬನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ವಿವೇಕ್ ಮತ್ತು ಮಾನಸಿ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಸಿಬ್ಬಂದಿ ವಿವೇಕ್ ಅವರ ಶವವನ್ನು ಪತ್ತೆಹಚ್ಚಿದ್ದು, ಮಾನಸಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಪೊಲೀಸ್ ಮಾಹಿತಿಯ ಪ್ರಕಾರ, BIET ಕಾಲೇಜಿನ 10 ವಿದ್ಯಾರ್ಥಿಗಳ ಗುಂಪು ಬಸವಪಟ್ಟಣದ ದೇವಸ್ಥಾನ ಪ್ರವಾಸಕ್ಕೆ ತೆರಳಿತ್ತು. ಬಳಿಕ ಭದ್ರಾ ಬಲದಂಡೆ ಕಾಲುವೆಯಲ್ಲಿ ನೀರು ಹರಿಯುತ್ತಿರುವುದನ್ನು ಗಮನಿಸಿದ ಕೆಲ ವಿದ್ಯಾರ್ಥಿಗಳು ಈಜಲು ಇಳಿದಿದ್ದಾರೆ.

ಈ ವೇಳೆ ಮಾನಸಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದು, ಆಕೆಯನ್ನು ರಕ್ಷಿಸಲು ಇತರ ವಿದ್ಯಾರ್ಥಿಗಳು ಮಾನವ ಸರಪಳಿ ರೂಪಿಸಿ ಪ್ರಯತ್ನಿಸಿದ್ದಾರೆ. ಆದರೆ, ಸರಪಳಿಯ ಕೊನೆಯಲ್ಲಿ ಇದ್ದ ವಿವೇಕ್ ಕೂಡ ಸಮತೋಲನ ಕಳೆದುಕೊಂಡು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಬಸವಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ಇಮ್ತಿಯಾಜ್ ಮಾಹಿತಿ ನೀಡಿದ್ದು, ವಿವೇಕ್ ಅವರ ಶವವನ್ನು ಪತ್ತೆಹಚ್ಚಲಾಗಿದೆ ಮತ್ತು ಮಾನಸಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್