ಹಾವೇರಿ ದರೋಡೆ ಪ್ರಕರಣ (ಸಂಗ್ರಹ ಚಿತ್ರ) 
ರಾಜ್ಯ

ಆಭರಣ ಅಂಗಡಿಯಲ್ಲಿ ದರೋಡೆ; 6 ದುಷ್ಕರ್ಮಿಗಳಿಂದ ದಾಳಿ, 40 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕನಶಿ ಹೊಸೂರು ಗ್ರಾಮದ ಆಭರಣ ಅಂಗಡಿಯಲ್ಲಿ ಶನಿವಾರ ಮುಂಜಾನೆ 1.45ರಿಂದ 2.30ರ ನಡುವಿನ ಅವಧಿಯಲ್ಲಿ ಈ ಘಟನೆ ನಡೆದಿದೆ.

ಹಾವೇರಿ: ಆರು ಮಂದಿ ದುಷ್ಕರ್ಮಿಗಳ ತಂಡವೊಂದು ಆಭರಣ ಅಂಗಡಿಗೆ ನುಗ್ಗಿ ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ-ಬೆಳ್ಳಿ ದೋಚಿ ಪರಾರಿಯಾಗಿರುವ ಘಟನೆ ಹಾವೇರಿಯಲ್ಲಿ ವರದಿಯಾಗಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕನಶಿ ಹೊಸೂರು ಗ್ರಾಮದ ಆಭರಣ ಅಂಗಡಿಯಲ್ಲಿ ಶನಿವಾರ ಮುಂಜಾನೆ 1.45ರಿಂದ 2.30ರ ನಡುವಿನ ಅವಧಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ ಮುಚ್ಚಿಕೊಂಡು ಕೈಗವಸು ಧರಿಸಿದ್ದ ಆರು ಮಂದಿ ದುಷ್ಕರ್ಮಿಗಳು ಮಧ್ಯರಾತ್ರಿ ಬಳಿಕ ಅಂಗಡಿಯ ಎರಡೂ ಶಟರ್‌ಗಳನ್ನು ಕತ್ತರಿಸಿ ಒಳನುಗ್ಗಿದ್ದಾರೆ. ಅಂಗಡಿಗೆ ಪ್ರವೇಶಿಸಿದ ಬಳಿಕ ಒಳಗೆ ಅಳವಡಿಸಿದ್ದ ನಾಲ್ಕು ಸಿಸಿಟಿವಿ ಕ್ಯಾಮೆರಾಗಳಲ್ಲಿ ಮೂರನ್ನು ಮುಚ್ಚಿಹಾಕಿ, ಲಾಕರ್‌ ಸಮೇತ ಪರಾರಿಯಾಗಿದ್ದಾರೆ. ಆದರೆ ಮುಚ್ಚದೇ ಉಳಿದಿದ್ದ ಒಂದು ಸಿಸಿಟಿವಿ ಕ್ಯಾಮೆರಾದಲ್ಲಿ ಅವರ ಕೃತ್ಯ ಸಂಪೂರ್ಣವಾಗಿ ದಾಖಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ₹21 ಲಕ್ಷ ಮೌಲ್ಯದ 19 ಕೆಜಿ ಬೆಳ್ಳಿ ವಸ್ತುಗಳು ಹಾಗೂ ₹22 ಲಕ್ಷ ಮೌಲ್ಯದ 219 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಸಂಬಂಧ ಕಳ್ಳತನ ಪ್ರಕರಣ ದಾಖಲಾಗಿದೆ. ಕದ್ದೊಯ್ದ ಆಭರಣಗಳನ್ನು ಸಾಗಿಸಲು ಬಳಸಿದ ವಾಹನದ ಬಗ್ಗೆ ಕೆಲವು ಸುಳಿವುಗಳು ಲಭ್ಯವಾಗಿವೆ. ವಾಹನವನ್ನು ಪತ್ತೆಹಚ್ಚಿ ಕಳ್ಳತನದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET paper leak: ಯುವಕರ ಭವಿಷ್ಯದ ಜೊತೆ ಆಟ, ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ರಾಹುಲ್ ಗಾಂಧಿ ಆಗ್ರಹ

ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು?, ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ: ಆರ್ತಿ ತಾಯಿ ಸುಜಾತ

IPL 2026: 2 ಓವರ್ ನಲ್ಲಿ ಪಂದ್ಯ ಕಳೆದುಕೊಂಡ GT, KKRಗೆ 29 ರನ್ ಗಳ ಭರ್ಜರಿ ಜಯ

IPL 2026: ಗಾಯದ ನಡುವೆಯೂ ಭರ್ಜರಿ ಬ್ಯಾಟಿಂಗ್, Sai Sudharsan ದಾಖಲೆ

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

SCROLL FOR NEXT