ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆಯಲ್ಲಿ ಭಾರೀ ಮಳೆ: ಕೊಯ್ಲಿಗೆ ಬಂದಿದ್ದ ಭತ್ತದ ಬೆಳೆ ನಾಶ, ಲಕ್ಷಾಂತರ ರೂ ನಷ್ಟ

ಹರಿಹರ ತಾಲೂಕಿನ 79 ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಸಂಪೂರ್ಣ ಹಾನಿಗೊಳಗಾಗಿದೆ. ಕೊಯ್ಲಿಗೆ ಸಿದ್ಧವಾಗಿದ್ದ ಬೆಳೆ ನಾಶವಾಗಿದ್ದರಿಂದ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ.

ಬೆಂಗಳೂರು: ದಾವಣಗೆರೆ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊಯ್ಲಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗಳಿಗೆ ಭಾರೀ ಹಾನಿಯಾಗಿದ್ದು, ಹಲವು ಮನೆಗಳಿಗೂ ಹಾನಿ ಉಂಟಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಮಾಹಿತಿ ನೀಡಿದ್ದು, ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಹೆಚ್ಚು ಇರದಿದ್ದರೂ ಹಾನಿಯ ಪ್ರಮಾಣ ಮಾತ್ರ ಗಂಭೀರವಾಗಿದೆ. ಜಿಲ್ಲೆಯಲ್ಲಿ ಸಾಮಾನ್ಯವಾಗಿ 2.6 ಮಿಮೀ ಮಳೆಯಾಗಬೇಕಿತ್ತು. ಆದರೆ, ಈ ಬಾರಿ 6.8 ಮಿಮೀ ಮಳೆಯಾಗಿದೆ ಎಂದು ಹೇಳಿದ್ದಾರೆ.

ಚನ್ನಗಿರಿ – 3.7 ಮಿಮೀ ಬದಲು 6.1 ಮಿಮೀ, ದಾವಣಗೆರೆ – 1.9 ಮಿಮೀ ಬದಲು 7.1 ಮಿಮೀ, ಹರಿಹರ – 1.0 ಮಿಮೀ ಬದಲು 12.3 ಮಿಮೀ, ಹೊನ್ನಾಳಿ – 3.3 ಮಿಮೀ ಬದಲು 9.5 ಮಿಮೀ, ಜಗಳೂರು – 1.4 ಮಿಮೀ ಬದಲು 3.9 ಮಿಮೀ, ನ್ಯಾಮತಿ – 3.0 ಮಿಮೀ ಬದಲು 5.0 ಮಿಮೀ ಮಳೆಯಾಗಿದೆ ಎಂದು ತಿಳಿಸಿದ್ದಾರೆ.

ಹರಿಹರ ತಾಲೂಕಿನ 79 ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಸಂಪೂರ್ಣ ಹಾನಿಗೊಳಗಾಗಿದೆ. ಕೊಯ್ಲಿಗೆ ಸಿದ್ಧವಾಗಿದ್ದ ಬೆಳೆ ನಾಶವಾಗಿದ್ದರಿಂದ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ.

ಇದೇ ವೇಳೆ ಚನ್ನಗಿರಿ ತಾಲೂಕಿನಲ್ಲಿ 7 ಮನೆಗಳಿಗೆ ಹಾನಿಯಾಗಿದ್ದು, ಹರಿಹರದಲ್ಲಿ ಒಂದು ಮನೆ ಹಾಗೂ ಮೂರು ಮನೆಗಳು ಮಳೆಯಿಂದ ಹಾನಿಗೊಳಗಾಗಿವೆ.

ಪ್ರಾಥಮಿಕ ಅಂದಾಜಿನ ಪ್ರಕಾರ ಒಟ್ಟು ರೂ.16.80 ಲಕ್ಷ ನಷ್ಟ ದಾಖಲಾಗಿದ್ದು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ಹವಾಮಾನ ಇಲಾಖೆ ವರದಿ ಪ್ರಕಾರ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದ್ದು, ಇದರಿಂದ ರೈತರು ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ