ಶರಣ್ ಪ್ರಕಾಶ್ ಪಾಟೀಲ್ 
ರಾಜ್ಯ

NEET ಪ್ರಶ್ನೆಪತ್ರಿಕೆ ಸೋರಿಕೆ ತನಿಖೆ ನ್ಯಾಯಾಲಯ ಮೇಲ್ವಿಚಾರಣೆಯಲ್ಲಿ ನಡೆಸಬೇಕು: ಸಚಿವ ಶರಣ್ ಪ್ರಕಾಶ್ ಪಾಟೀಲ್; Video

ನಿನ್ನೆ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರಣ್ ಪ್ರಕಾಶ್ ಪಾಟೀಲ್, ಕರ್ನಾಟಕದ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಮಾದರಿ NEETಗಿಂತ ಬಹಳ ಉತ್ತಮವಾಗಿದ್ದು, ಅದನ್ನು ರಾಷ್ಟ್ರ ಮಟ್ಟದಲ್ಲಿ ಅಳವಡಿಸಬೇಕು ಎಂದು ಅಭಿಪ್ರಾಯಪಟ್ಟರು.

ನೀಟ್ -ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆಯನ್ನು ತೀವ್ರವಾಗಿ ಖಂಡಿಸಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ವಿದ್ಯಾರ್ಥಿ ಸಮುದಾಯಗಳಿಗೆ ಗಂಭೀರ ಅನ್ಯಾಯ ಎಂದು ಬಣ್ಣಿಸಿದ್ದಾರೆ. ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯವನ್ನು ಕೇಂದ್ರ ಸರ್ಕಾರ ಹಾಳು ಮಾಡುತ್ತಿದೆ ಎಂದು ಆರೋಪಿಸಿದ ಅವರು, ಸಂಬಂಧಿತ ಕೇಂದ್ರ ಸಚಿವರು ರಾಜೀನಾಮೆ ನೀಡಬೇಕು ಹಾಗೂ ತನಿಖೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಯಬೇಕು ಎಂದು ಆಗ್ರಹಿಸಿದರು.

ನಿನ್ನೆ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರಣ್ ಪ್ರಕಾಶ್ ಪಾಟೀಲ್, ಕರ್ನಾಟಕದ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಮಾದರಿ NEETಗಿಂತ ಬಹಳ ಉತ್ತಮವಾಗಿದ್ದು, ಅದನ್ನು ರಾಷ್ಟ್ರ ಮಟ್ಟದಲ್ಲಿ ಅಳವಡಿಸಬೇಕು ಎಂದು ಅಭಿಪ್ರಾಯಪಟ್ಟರು.

ಈ ಬಗ್ಗೆ ರಾಜ್ಯ ಸರ್ಕಾರ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಆದರೆ ನಮ್ಮ ಮನವಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ NEET ಪರೀಕ್ಷೆಯನ್ನು ಅವ್ಯವಸ್ಥಿತವಾಗಿ ನಡೆಸಿರುವುದರಿಂದ ಸಾರ್ವಜನಿಕರ ವಿಶ್ವಾಸ ಸಂಪೂರ್ಣ ಕುಸಿದಿದೆ ಎಂದು ಅವರು ಆರೋಪಿಸಿದರು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಮೇಲೆಯೂ ಅವಿಶ್ವಾಸ ವ್ಯಕ್ತಪಡಿಸಿದ ಅವರು, ಅದರ ಮೇಲ್ವಿಚಾರಣೆಯಲ್ಲಿ ಪಾರದರ್ಶಕ ತನಿಖೆ ಸಾಧ್ಯವಿಲ್ಲ ಎಂದು ಹೇಳಿದರು.

ಈ ಹಗರಣವು ಎಂಬಿಬಿಎಸ್ ಸೀಟುಗಳ ಮಾರಾಟಕ್ಕೆ ಅನುಕೂಲವಾಗುವಂತೆ ರೂಪಿಸಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿದ ಪಾಟೀಲ್, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿರಬಹುದು ಎಂದು ಶಂಕೆ ವ್ಯಕ್ತಪಡಿಸಿದರು. NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಸಮರ್ಥಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧವೂ ಅವರು ವಾಗ್ದಾಳಿ ನಡೆಸಿದರು.

ಇದರಿಂದ ಅವರಿಗೆ ಲಜ್ಜೆ ಅಥವಾ ನೈತಿಕತೆ ಎಂಬುದೇ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಪಿಎಸ್ ಐ ನೇಮಕಾತಿ ಹಗರಣವನ್ನು ಉಲ್ಲೇಖಿಸಿದ ಅವರು, ಯುವಕರನ್ನು ದಾರಿ ತಪ್ಪಿಸಿ ದುರುಪಯೋಗಪಡಿಸಿಕೊಳ್ಳುವುದು ಬಿಜೆಪಿಯ ಪ್ರಮುಖ ಗುರಿಯಂತಾಗಿದೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!