ಸಾಂದರ್ಭಿಕ ಚಿತ್ರ 
ರಾಜ್ಯ

ಮಾಲೀಕನ ಮನೆಗೇ ಕನ್ನ: 27 ಲಕ್ಷ ರೂ ದೋಚಿ ಸಹಾಯಕ ಪರಾರಿ..!

ನವರತ್ನ ಕುಮಾರ್ ಅವರು ಅಂಗಡಿಯಿಂದ ತಂದಿದ್ದ ಹಣವನ್ನು ಬ್ಯಾಂಕ್‌ಗೆ ಜಮಾ ಮಾಡಲು ಮನೆಯಲ್ಲಿ ಇಟ್ಟಿದ್ದರು. ಬುಧವಾರ ರಾತ್ರಿ ಪತ್ನಿ ಜೊತೆ ಸಮೀಪದ ಔಷಧ ಅಂಗಡಿಗೆ ತೆರಳಿದ್ದರು.

ಬೆಂಗಳೂರು: ಯಶವಂತಪುರ ಪೊಲೀಸ್ ವ್ಯಾಪ್ತಿಯಲ್ಲಿರುವ ಆಭರಣ ವ್ಯಾಪಾರಿಯೊಬ್ಬರ ಮನೆಯಿಂದ ಸಹಾಯಕನೇ 27 ಲಕ್ಷ ರೂ. ನಗದು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.

63 ವರ್ಷದ ಜ್ಯುವೆಲರಿ ಅಂಗಡಿ ಮಾಲೀಕ ಎನ್. ನವರತ್ನ ಕುಮಾರ್ ಅವರ ಮನೆಯಲ್ಲಿ ಬಾಬು ಸಿಂಗ್ ಎಂಬಾತ ಕಳೆದ 18 ತಿಂಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.

ನವರತ್ನ ಕುಮಾರ್ ಅವರು ಅಂಗಡಿಯಿಂದ ತಂದಿದ್ದ ಹಣವನ್ನು ಬ್ಯಾಂಕ್‌ಗೆ ಜಮಾ ಮಾಡಲು ಮನೆಯಲ್ಲಿ ಇಟ್ಟಿದ್ದರು. ಬುಧವಾರ ರಾತ್ರಿ ಪತ್ನಿ ಜೊತೆ ಸಮೀಪದ ಔಷಧ ಅಂಗಡಿಗೆ ತೆರಳಿದ್ದರು.

ಈ ವೇಳೆ ಮನೆಯಲ್ಲಿ ಯಾರು ಇಲ್ಲದಿದ್ದ ಅವಕಾಶವನ್ನು ಬಳಸಿಕೊಂಡ ಆರೋಪಿ ಬಾಬು ಸಿಂಗ್, ಮನೆಯಲ್ಲಿದ್ದ 27 ಲಕ್ಷ ರೂ. ನಗದು ತೆಗೆದುಕೊಂಡು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದಂಪತಿ ಮನೆಗೆ ಮರಳಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿರುವುದು ತಿಳಿದುಬಂದಿದೆ. ಬಳಿಕ ಸ್ಪೇರ್ ಕೀ ಬಳಸಿ ಒಳಗೆ ಪ್ರವೇಶಿಸಿದಾಗ ಆರೋಪಿ ನಾಪತ್ತೆಯಾಗಿರುವುದು, ಹಣವೂ ಇಲ್ಲದಿರುವುದು ತಿಳಿದುಬಂದಿದೆ. ಫೋನ್‌ಗೆ ಕರೆ ಮಾಡಿದರೂ ಸಂಪರ್ಕಕ್ಕೆ ಸಿಕ್ಕಿಲ್ಲ. ಫೋನ್ ಸ್ವಿಚ್ ಆಫ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ BNS ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ರಾಜಸ್ಥಾನಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಭಾರೀ ದುರಂತ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು

ಚಿಕ್ಕಬಳ್ಳಾಪುರ: ಚುಡಾಯಿಸಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿನಿ ಮನೆಗೆ ನುಗ್ಗಿ ಕತ್ತು ಕೊಯ್ಯಲು ಯತ್ನ, ಪುಂಡರಿಂದ ಕಲ್ಲು ತೂರಾಟ!

ಜೈಲು ಪಾಲಾದ್ರೆ CM, PM ಕುರ್ಚಿ ಖಾಲಿ: ಕೇಂದ್ರದ 130ನೇ ಸಂವಿಧಾನ ತಿದ್ದುಪಡಿ ಬಿಲ್'ಗೆ ವಿಪಕ್ಷಗಳ ವಿರೋಧ; ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಹೈಡ್ರಾಮಾ ಫಿಕ್ಸ್..!

ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಐತಿಹಾಸಿಕ ಗುರುದ್ವಾರ ಧ್ವಂಸ; ಭಾರತ ಖಂಡನೆ, ತೀವ್ರ ಪ್ರತಿಭಟನೆ

''ಲೋ-ವೇಜ್ ಫಾರಿನರ್ಸ್ ಬೇಡ'' ಎಂದ ಜೆಡಿ ವ್ಯಾನ್ಸ್: 'ನಿಮ್ಮ ಹಿಂದೂ ಪತ್ನಿಯೂ ವಿದೇಶಿಯಲ್ಲವೇ?' ಉಷಾ ವ್ಯಾನ್ಸ್ ಹಿನ್ನೆಲೆ ಹಿಡಿದು ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್..!