ಸಾಂದರ್ಭಿಕ ಚಿತ್ರ  
ರಾಜ್ಯ

AIB ಆಧಾರಿತ ಅಬಕಾರಿ ಸುಂಕ ವ್ಯವಸ್ಥೆ ಜಾರಿ: ಮದ್ಯ ದರ ಪರಿಷ್ಕರಣೆ

ಮದ್ಯದ ಬೆಲೆಗಳನ್ನು ಸಮತೋಲನಗೊಳಿಸುವುದು, ಕರ್ನಾಟಕದ ಗ್ರಾಹಕರಿಗೆ ಕಡಿಮೆ ದರದಲ್ಲಿ ಮದ್ಯ ಲಭ್ಯವಾಗುವಂತೆ ಮಾಡುವುದು ಹಾಗೂ ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಕೇರಳ ಸೇರಿದಂತೆ ನೆರೆಯ ರಾಜ್ಯಗಳ ದರಗಳಿಗೆ ಹೊಂದಾಣಿಕೆ ಮಾಡುವುದು ಈ ನೀತಿಯ ಉದ್ದೇಶವಾಗಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದಲ್ಲಿ ಆಲ್ಕೊಹಾಲ್-ಇನ್-ಬೇವರೇಜ್ (AIB) ಆಧಾರಿತ ಅಬಕಾರಿ ಸುಂಕ ವ್ಯವಸ್ಥೆಯನ್ನು ಜಾರಿಗೆ ತಂದು ಮದ್ಯದ ದರಗಳನ್ನು ಪರಿಷ್ಕರಿಸಿದೆ. ಇಂದು ಭಾನುವಾರ ಪ್ರಕಟಿಸಿದ ಪತ್ರಿಕಾ ಪ್ರಕಟಣೆಯಲ್ಲಿ ರಾಜ್ಯ ಅಬಕಾರಿ ಇಲಾಖೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2026-27ರ ಬಜೆಟ್ ಘೋಷಣೆಯಂತೆ ಭಾರತದಲ್ಲೇ ಮೊದಲ ಬಾರಿಗೆ ಈ ಹೊಸ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತಂದಿರುವುದಾಗಿ ತಿಳಿಸಿದೆ.

ಮದ್ಯದ ಬೆಲೆಗಳನ್ನು ಸಮತೋಲನಗೊಳಿಸುವುದು, ಕರ್ನಾಟಕದ ಗ್ರಾಹಕರಿಗೆ ಕಡಿಮೆ ದರದಲ್ಲಿ ಮದ್ಯ ಲಭ್ಯವಾಗುವಂತೆ ಮಾಡುವುದು ಹಾಗೂ ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಕೇರಳ ಸೇರಿದಂತೆ ನೆರೆಯ ರಾಜ್ಯಗಳ ದರಗಳಿಗೆ ಹೊಂದಾಣಿಕೆ ಮಾಡುವುದು ಈ ನೀತಿಯ ಉದ್ದೇಶವಾಗಿದೆ ಎಂದು ಇಲಾಖೆ ತಿಳಿಸಿದೆ.

ಭಾರತದಲ್ಲೇ ಮೊದಲ ಬಾರಿಗೆ 2026ರ ಮೇ 11ರಿಂದ ಕರ್ನಾಟಕದಲ್ಲಿ AIB ಆಧಾರಿತ ಅಬಕಾರಿ ಸುಂಕ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದು ಜಾಗತಿಕ ಮಟ್ಟದಲ್ಲಿ ಮದ್ಯ ತೆರಿಗೆ ವ್ಯವಸ್ಥೆಯ ‘ಗೋಲ್ಡ್ ಸ್ಟ್ಯಾಂಡರ್ಡ್’ ಎಂದು ಪರಿಗಣಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಹೊಸ ನೀತಿಯಡಿ ಸರ್ಕಾರದ ನೇರ ಬೆಲೆ ನಿಗದಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ. ಮಾರುಕಟ್ಟೆಯ ಪರಿಸ್ಥಿತಿಯನ್ನು ಆಧರಿಸಿ ಉತ್ಪನ್ನಗಳನ್ನು ಯಾವ ದರದ ವಿಭಾಗದಲ್ಲಿ ಇರಿಸಬೇಕು ಎಂಬುದನ್ನು ಉತ್ಪಾದಕರಿಗೆ ಬಿಡಲಾಗಿದೆ ಎಂದು ತಿಳಿಸಲಾಗಿದೆ.

2026ರ ಮೇ 8ರಂದು ಹೊರಡಿಸಿದ ಸರ್ಕಾರಿ ಅಧಿಸೂಚನೆಯ ಪ್ರಕಾರ, ಇಂಡಿಯನ್ ಮೇಡ್ ಲಿಕರ್ (IML) ವಿಭಾಗಗಳನ್ನು ಹಿಂದಿನ 16 ಹಂತಗಳಿಂದ ಎಂಟು ಹಂತಗಳಿಗೆ ಇಳಿಸಿ ಸರಳೀಕರಿಸಲಾಗಿದೆ.

ಅಬಕಾರಿ ಇಲಾಖೆ ಪ್ರಕಾರ, ಗ್ರಾಹಕರಿಗೆ ಕಡಿಮೆ ದರದಲ್ಲಿ ಮದ್ಯ ಲಭ್ಯವಾಗುವಂತೆ ಹಾಗೂ ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಕೇರಳದ ದರಗಳಿಗೆ ಸಮಾನ ಅಥವಾ ಕಡಿಮೆ ಮಟ್ಟದಲ್ಲಿ ಇರಿಸಲು ಈ ಮರುಸಂರಚನೆ ಮಾಡಲಾಗಿದೆ.

ಪರಿಷ್ಕೃತ ದರಗಳಲ್ಲಿ ಜನಪ್ರಿಯ ಇಂಡಿಯನ್ ಮೇಡ್ ಲಿಕರ್ (IML) ಬ್ರ್ಯಾಂಡ್‌ಗಳು ಮತ್ತು ಬಿಯರ್ ಬ್ರ್ಯಾಂಡ್‌ಗಳ ದರಗಳನ್ನು ಒಳಗೊಂಡಿದ್ದು, ಅವುಗಳ ಪ್ಯಾಕ್ ಗಾತ್ರ, ಮದ್ಯಾಂಶದ ಪ್ರಮಾಣ ಮತ್ತು ಸ್ಲ್ಯಾಬ್ ವ್ಯವಸ್ಥೆಯ ಆಧಾರದ ಮೇಲೆ ದರಗಳು ಬದಲಾಗಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ

ಬೆಂಗಳೂರು: ಪೊಲೀಸರ ಭದ್ರತೆ ನಡುವೆ ನಿರಾಶ್ರಿತ ಕೇಂದ್ರದಿಂದ ನಾಲ್ವರು ವಿದೇಶಿ ಅಕ್ರಮ ಮಹಿಳಾ ವಲಸಿಗರು ಪರಾರಿ!

'ರಾಹುಲ್, ಪ್ರಿಯಾಂಕಾ ವಯನಾಡನ್ನು ಮರೆತುಬಿಡಿ': ಗಾಂಧಿಗಳಿಗೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳ ವಿರುದ್ಧ ಕೇಸ್!

ನಿರ್ಗತಿಕರಿಗೆ ಬಡವರಿಂದ ಸಹಾಯಹಸ್ತ: 3 ಮಕ್ಕಳ ವಿಧವೆಗೆ ಮನೆ ನಿರ್ಮಿಸಿಕೊಟ್ಟ ವಿಜಯಪುರದ ದಿನಗೂಲಿ ಕಾರ್ಮಿಕರು

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: 48 ಗಂಟೆಯಲ್ಲಿ 2ನೇ ಬಾರಿ CNG ದರ ಏರಿಕೆ, ಕೆಜಿಗೆ 1 ರೂ. ಹೆಚ್ಚಳ..!

SCROLL FOR NEXT