ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಭೇಟಿ ಮಾಡಿದ ರೈತರು 
ರಾಜ್ಯ

ಬಿಡದಿ ಟೌನ್‌ಶಿಪ್ ಯೋಜನೆಗೆ ಆಕ್ರೋಶ: ಡಿಕೆ.ಶಿವಕುಮಾರ್ ಭೇಟಿಯಾದ ರೈತರು, ಯೋಜನೆ ಮರುಪರಿಶೀಲನೆಗೆ ಆಗ್ರಹ

ರೈತರ ಅಹವಾಲುಗಳನ್ನು ಆಲಿಸಿದ ಡಿಕೆ ಶಿವಕುಮಾರ್, “ಕಾನೂನು ಚೌಕಟ್ಟಿನೊಳಗೆ ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಬೆಂಗಳೂರು: ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (GBIT) ಯೋಜನೆ ವಿರುದ್ಧ ಆಕ್ರೋಶ ತೀವ್ರವಾಗುತ್ತಿರುವ ನಡುವೆ, ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ನಿಯೋಗವು ಭಾನುವಾರ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಯೋಜನೆ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿತು.

'ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯತ್‌ಗಳ ರೈತ ಭೂ ಹಿತರಕ್ಷಣಾ ಸಮಿತಿ'ಯ ಭಾಗವಾಗಿರುವ ರೈತರು, ಬೆಂಗಳೂರಿನಲ್ಲಿ ಡಿಸಿಎಂ ಅವರನ್ನು ಭೇಟಿ ಮಾಡಿ ಜಿಬಿಐಟಿ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದರು. ರೈತರ ಹಕ್ಕುಗಳನ್ನು ರಕ್ಷಿಸಲು ಮನವಿಯನ್ನು ಸಲ್ಲಿಸಿದರು.

ರೈತರ ಅಹವಾಲುಗಳನ್ನು ಆಲಿಸಿದ ಡಿಕೆ ಶಿವಕುಮಾರ್, “ಕಾನೂನು ಚೌಕಟ್ಟಿನೊಳಗೆ ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಇದಕ್ಕೂ ಮೊದಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು, ಬಿಡದಿಯ GBIT ಯೋಜನೆ ವಿರುದ್ಧ ಹೋರಾಟ ಮಾಡುವುದಾಗಿ ಘೋಷಿಸಿದ್ದರು.

“ರೈತರ ಜಮೀನು ಕಸಿದುಕೊಳ್ಳಲಾಗುತ್ತಿದೆ. ಇದು ಸರ್ಕಾರ ಪ್ರಾಯೋಜಿತ ಹಗರಣ” ಎಂದು ತೀವ್ರ ವಾಗ್ದಾಳಿ ನಡೆಸಿದ್ದರು.

ರಾಜ್ಯ ಸಚಿವ ಸಂಪುಟವು ಏಪ್ರಿಲ್‌ನಲ್ಲಿ ಸುಮಾರು 7,481 ಎಕರೆ ಪ್ರದೇಶದಲ್ಲಿ ರೂ.18,133 ಕೋಟಿ ವೆಚ್ಚದಲ್ಲಿ ಟೌನ್‌ಶಿಪ್ ಅಭಿವೃದ್ಧಿಗೆ ಪ್ರಸ್ತಾವನೆ ಅಂಗೀಕರಿಸಿತ್ತು. ಆದರೆ, ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ರೈತರು, ಕಳೆದ ಒಂದು ವರ್ಷಕ್ಕಿಂತ ಹೆಚ್ಚು ಕಾಲದಿಂದ ಬೈರಮಂಗಲ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.

ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿರುವ ರೈತರು, ಯೋಜನೆ ಮರುಪರಿಶೀಲನೆ ಮಾಡುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ ಕಂಟಕ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ, ಹೆಚ್ಚಿದ ಆತಂಕ..!

ಅಧಿಕಾರ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಕೆಶಿ ಟೆಂಪಲ್ ರನ್: CM ಗಾದಿ ಕನಸು ಜೀವಂತ..!

94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ: ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಕೇವಲ 1 ರೂ.ಗೆ ಭೋಜನ ವ್ಯವಸ್ಥೆ..!

IPL 2026 ಪಂದ್ಯದಲ್ಲೂ ವಿಜಯ್ ಫೀವರ್! ಫಿಫ್ಟಿ ಬಳಿಕ ವೆಂಕಟೇಶ್ ಅಯ್ಯರ್ ಸೆಲೆಬ್ರೇಶನ್ ಹೇಗಿತ್ತು ಗೊತ್ತಾ? Video

IPL 2026: ಡೆಲ್ಲಿ ವಿರುದ್ಧ ಮುಗ್ಗರಿಸಿದ ರಾಜಸ್ಥಾನ, ಕಳಪೆ ಬೌಲಿಂಗ್‌, ಫೀಲ್ಡಿಂಗ್‌ ಸೋಲಿಗೆ ಕಾರಣ- ರಿಯಾನ್ ಪರಾಗ್ ಕಿಡಿ!

SCROLL FOR NEXT