ಎನ್ಎಸ್ಯುಐ ಸದಸ್ಯರು ಪ್ರತಿಭಟನೆ ನಡೆಸುತ್ತಿರುವುದು. 
ರಾಜ್ಯ

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಮೇ 21ಕ್ಕೆ ರಾಜಭವನ ಚಲೋ; ಯುವ ಕಾಂಗ್ರೆಸ್ ಕರೆ, ಡಿಕೆಶಿ-ಸುರ್ಜೇವಾಲಾ ಭಾಗಿ!

ಕೇಂದ್ರ ಸರ್ಕಾರ ವಿದ್ಯಾರ್ಥಿಗಳನ್ನು ಅಗ್ನಿಕುಂಡಕ್ಕೆ ತಳ್ಳಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೇ ನಡೆದಿವೆ.

ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಹಾಗೂ ಇಡೀ ದೇಶದಲ್ಲಿ ಪರೀಕ್ಷೆ ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಮೇ 21 ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ರಾಜಭವನ ಚಲೋ ನಡೆಸಲಾಗುವುದು ಎಂದು ಭಾರತೀಯ ಯುವ ಕಾಂಗ್ರೆಸ್ ಘೋಷಿಸಿದೆ.

ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿಯವರು, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿಯಲ್ಲಿ 89 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ ನಡೆದಿದ್ದು, ಇದರಿಂದ ವಿದ್ಯಾರ್ಥಿಗಳ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳನ್ನು ಅಗ್ನಿಕುಂಡಕ್ಕೆ ತಳ್ಳಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೇ ನಡೆದಿವೆ ಎಂದು ದೂರಿದರು.

ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಮಾತನಾಡಿ, ಈ ಪ್ರತಿಭಟನೆ ದೊಡ್ಡ ಮಟ್ಟದಲ್ಲಿ ನಡೆಯಲಿದ್ದು, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಕೇಂದ್ರ ಸರ್ಕಾರವನ್ನು ಟೀಕಿಸಿದ ಅವರು, “ಐಪಿಎಲ್ ಬಳಿಕ ಇದೀಗ ‘ಇಂಡಿಯನ್ ಪೇಪರ್ ಲೀಕ್’ ದೇಶದಲ್ಲಿ ನಡೆಯುತ್ತಿದೆ” ಎಂದು ವ್ಯಂಗ್ಯವಾಡಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಟೀಕಿಸಿದ ಮಂಜುನಾಥ್ ಗೌಡ, “ಜನಿವಾರ ವಿಚಾರದಲ್ಲಿ ಬೀದಿಗಿಳಿದವರು ಈಗ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ಮೌನವಾಗಿದ್ದಾರೆ” ಎಂದು ಆರೋಪಿಸಿದರು.

ರಾಜಸ್ಥಾನದ ಶಿಕ್ಷಣ ಸಚಿವರ ಆಪ್ತರೇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ಇದ್ದಾರೆ ಎಂದೂ ಕೂಡ ಅವರು ಗಂಭೀರ ಆರೋಪ ಮಾಡಿದರು.

ಇದಲ್ಲದೆ, ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಸೇರಿದಂತೆ ಹಲವು ವಿಷಯಗಳಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್