ಕರ್ನಾಟಕ ಲೋಕಾಯುಕ್ತ 
ರಾಜ್ಯ

ಬೋಗಸ್ ದಾಖಲೆ ಸೃಷ್ಟಿಸಿ 23 ಕೋಟಿ ರೂ ಲೂಟಿ; ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!

ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಇಂದು ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. 600 ಮನೆಗಳ ನಿರ್ಮಾಣಕ್ಕೆಂದು 33 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು.

ಬೆಳಗಾವಿ: ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಇಂದು ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. 600 ಮನೆಗಳ ನಿರ್ಮಾಣಕ್ಕೆಂದು 33 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು. ಮನೆಗಳನ್ನು ನಿರ್ಮಿಸದೇ ಅನುದಾನದಲ್ಲಿ 23 ಕೋಟಿ ರೂಪಾಯಿ ಗುಳುಂ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ದೂರಿನ ಅನ್ವಯ ಬೆಳಗಾವಿ ಲೋಕಾಯುಕ್ತ ಎಸ್ಪಿ ಪ್ರಶನ್ ದೇಸಾಯಿ ನೇತೃತ್ವದಲ್ಲಿ ಬೆಂಗಳೂರು ನಗರ, ಧಾರವಾಡ, ರಾಮದುರ್ಗ, ವಿಜಯಪುರ, ಹುಬ್ಬಳ್ಳಿ ಸೇರಿದಂತೆ ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗಳಿಗೆ ಸೇರಿದ 8 ಕಡೆಗಳಲ್ಲಿ ದಾಳಿ ಮಾಡಿದ್ದರು.

ದಾಳಿ ವೇಳೆ ಕೋಟ್ಯಂತರ ರೂ. ಮೌಲ್ಯದ ಬಿಲ್​​​ಗಳು ಸೇರಿ ಮಹತ್ವದ ದಾಖಲೆಗಳನ್ನ ಜಪ್ತಿ ಮಾಡಿದ್ದಾರೆ. ಕೊಳಚೆ ನಿರ್ಮೂಲನಾ ಅಭಿವೃದ್ಧಿ ಇಲಾಖೆ ನಿವೃತ್ತ ಎಇಇ ಶಂಭುಲಿಂಗಪ್ಪ, ಎಕ್ಸಿಕ್ಯೂಟಿವ್ ಇಂಜಿನಿಯರ್ ಲಮಾಣಿ, NTCC ಮ್ಯಾನೇಜರ್ ಎನ್.ಪ್ರಸಾದ್, ವಿಜಯಪುರ ಗುತ್ತಿಗೆದಾರ ಗಿರಮಲಪ್ಪ ಜೋಗೂರ ವಿರುದ್ಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

ಮಾನವೀಯತೆ ಮರೆತ ಜನ: ಜನನಿಬಿಡ ರಸ್ತೆಯಲ್ಲೇ ಯುವ ದಂಪತಿ ಮೇಲೆ ಭೀಕರ ಹಲ್ಲೆ; Video Viral ಆದ ನಂತರ ಆಕ್ರೋಶ!

ಹೈಕೋರ್ಟ್ ನಲ್ಲೂ Umar Khalid ಗೆ ಹಿನ್ನಡೆ: ಅನಾರೋಗ್ಯ ಪೀಡಿತ ತಾಯಿ ಆರೈಕೆ ಜಾಮೀನು ಅರ್ಜಿ ವಜಾ!

Sex Video ಪ್ರಕರಣ: ಸ್ವಯಂ ಘೋಷಿತ ದೇವಮಾನವ ಖರತ್‌ ಈಗ ED ವಶಕ್ಕೆ; 70 ಕೋಟಿ ರೂ ಅಕ್ರಮ ಹಣ ವರ್ಗಾವಣೆ ಆರೋಪ!

SCROLL FOR NEXT