ಎಂಎಲ್ಸಿ ಹೆಚ್ ವಿಶ್ವನಾಥ್  
ರಾಜ್ಯ

ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ: MLC ವಿಶ್ವನಾಥ್ ವಿರುದ್ದ FIR

ಜಲದರ್ಶಿನಿಯಲ್ಲಿ ವಿಶ್ವನಾಥ್ ರವರು ಇರುವಾಗ ಹಣ ಕೇಳಲು ಹೋದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರೆಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ಆರೋಪಿಸಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಿದ್ದಾರೆ.

ಮೈಸೂರು: ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಎಂಎಲ್ಸಿ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಲದರ್ಶಿನಿಯಲ್ಲಿ ವಿಶ್ವನಾಥ್ ರವರು ಇರುವಾಗ ಹಣ ಕೇಳಲು ಹೋದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರೆಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ಆರೋಪಿಸಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಿದ್ದಾರೆ.

2013 ರಲ್ಲಿ ವಿಶ್ವನಾಥ್ ರವರು ಸಂಸದರಾಗಿದ್ದಾಗ ಕೋಟೆಹುಂಡಿ ಮಹದೇವು ರವರು ಎಂಟಿಬಿ ನಾಗರಾಜ್ ಮುಖಾಂತರ ವಿಶ್ವನಾಥ್ ಹಾಗೂ ಅವರ ಮಗ ಅಮಿತ್ ದೇವರಹಟ್ಟಿ ರವರಿಗೆ 55 ಲಕ್ಷ ನೀಡಿದ್ದಾರೆ. ಹಣ ಹಿಂದಿರುಗಿಸುವುದಾಗಿ ಸಾಲ ಪಡೆದ ವಿಶ್ವನಾಥ್ ಸತಾಯಿಸಿದ್ದಾರೆ.

ಈ ಬಗ್ಗೆ ಕಳೆದ ಫೆಬ್ರವರಿಯಲ್ಲಿ ವಿಶ್ವನಾಥ್ ರವರು ಜಲದರ್ಶಿನಿಯಲ್ಲಿ ಇರುವಾಗ ಕೋಟೆಹುಂಡಿ ಮಹದೇವು ರವರು ಹಣ ಕೇಳಲು ಹೋದಾಗ ಅವಾಚ್ಯ ಪದಗಳಿಂದ ನಿಂದಿಸಿ ಕೈಯಲ್ಲಿ ತಲೆಗೆ ಹೊಡೆದಿದ್ದಾರೆ. ಈ ಬಗ್ಗೆ ಕೋಟೆಹುಂಡಿ ಮಹದೇವುರವರು ದೇವರಾಜ ಪೊಲೀಸ್ ಠಾಣೆಯಲ್ಲಿ ಎನ್ ಸಿ ಆರ್ ದಾಖಲಿಸಿದರು. ನಂತರ ನ್ಯಾಯಾಲಯದ ಮೊರೆಹೋಗಿ ಪ್ರಕರಣ ದಾಖಲಿಸುವಂತೆ ಆದೇಶ ತಂದಿದ್ದಾರೆ.ವಿಶ್ವನಾಥ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಎಫ್ ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್