ಎಂಎಲ್ಸಿ ಹೆಚ್ ವಿಶ್ವನಾಥ್  
ರಾಜ್ಯ

ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ: ಎಂಎಲ್ಸಿ ವಿಶ್ವನಾಥ್ ವಿರುದ್ದ FIR

ಜಲದರ್ಶಿನಿಯಲ್ಲಿ ವಿಶ್ವನಾಥ್ ರವರು ಇರುವಾಗ ಹಣ ಕೇಳಲು ಹೋದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರೆಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ಆರೋಪಿಸಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಿದ್ದಾರೆ.

ಮೈಸೂರು: ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಎಂಎಲ್ಸಿ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಲದರ್ಶಿನಿಯಲ್ಲಿ ವಿಶ್ವನಾಥ್ ರವರು ಇರುವಾಗ ಹಣ ಕೇಳಲು ಹೋದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರೆಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ಆರೋಪಿಸಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಿದ್ದಾರೆ.

2013 ರಲ್ಲಿ ವಿಶ್ವನಾಥ್ ರವರು ಸಂಸದರಾಗಿದ್ದಾಗ ಕೋಟೆಹುಂಡಿ ಮಹದೇವು ರವರು ಎಂಟಿಬಿ ನಾಗರಾಜ್ ಮುಖಾಂತರ ವಿಶ್ವನಾಥ್ ಹಾಗೂ ಅವರ ಮಗ ಅಮಿತ್ ದೇವರಹಟ್ಟಿ ರವರಿಗೆ 55 ಲಕ್ಷ ನೀಡಿದ್ದಾರೆ. ಹಣ ಹಿಂದಿರುಗಿಸುವುದಾಗಿ ಸಾಲ ಪಡೆದ ವಿಶ್ವನಾಥ್ ಸತಾಯಿಸಿದ್ದಾರೆ.

ಈ ಬಗ್ಗೆ ಕಳೆದ ಫೆಬ್ರವರಿಯಲ್ಲಿ ವಿಶ್ವನಾಥ್ ರವರು ಜಲದರ್ಶಿನಿಯಲ್ಲಿ ಇರುವಾಗ ಕೋಟೆಹುಂಡಿ ಮಹದೇವು ರವರು ಹಣ ಕೇಳಲು ಹೋದಾಗ ಅವಾಚ್ಯ ಪದಗಳಿಂದ ನಿಂದಿಸಿ ಕೈಯಲ್ಲಿ ತಲೆಗೆ ಹೊಡೆದಿದ್ದಾರೆ. ಈ ಬಗ್ಗೆ ಕೋಟೆಹುಂಡಿ ಮಹದೇವುರವರು ದೇವರಾಜ ಪೊಲೀಸ್ ಠಾಣೆಯಲ್ಲಿ ಎನ್ ಸಿ ಆರ್ ದಾಖಲಿಸಿದರು. ನಂತರ ನ್ಯಾಯಾಲಯದ ಮೊರೆಹೋಗಿ ಪ್ರಕರಣ ದಾಖಲಿಸುವಂತೆ ಆದೇಶ ತಂದಿದ್ದಾರೆ.ವಿಶ್ವನಾಥ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಎಫ್ ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಇಟಲಿಯಲ್ಲಿ ಪ್ರಧಾನಿ ಮೋದಿ: “ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್” ಎಂದು ಆತ್ಮೀಯ ಸ್ವಾಗತ ಕೋರಿದ ಜಾರ್ಜಿಯಾ ಮೆಲೋನಿ..!

Operation Epic Fury: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಾಗೆ ಮಹಾಘಾತಕ: F-35 ಸೇರಿ 42 ಯುದ್ಧ ವಿಮಾನ, ಡ್ರೋನ್‌ಗಳಿಗೆ ಹಾನಿ..!

ಪ್ರಧಾನಿ ಮೋದಿಯನ್ನು 'ಹಾವಾಡಿಗ'ನಂತೆ ಬಿಂಬಿಸಿ ವಿಕೃತಿ: ಭಾರತವನ್ನು ಹೀಯಾಳಿಸಿದ ನಾರ್ವೆ ಪತ್ರಿಕೆ; ನೆಟ್ಟಿಗರು ತೀವ್ರ ಕಿಡಿ

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

SCROLL FOR NEXT