ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಲ್ಲಿ ಅತಿದೊಡ್ಡ ಹಗಲು ದರೋಡೆ: ಹೋಲ್‌ಸೇಲ್ ಖರೀದಿ ನೆಪದಲ್ಲಿ 3 ಕೋಟಿ ರೂ ಚಿನ್ನಾಭರಣ ಕದ್ದು ಪರಾರಿ!

ಚಿನ್ನಾಭರಣ ಕಂಪನಿಗೆ ವಂಚಿಸಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಆಭರಣಗಳೊಂದಿಗೆ ಪರಾರಿಯಾದ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಅತಿದೊಡ್ಡ ಲೂಟಿ ನಡೆದಿದ್ದು, ಹೋಲ್‌ಸೇಲ್ ಚಿನ್ನ ಖರೀದಿಸುವುದಾಗಿ ನಂಬಿಸಿ 3 ಕೋಟಿ ರೂ. ಮೌಲ್ಯದ 1 ಕೆಜಿ 850 ಗ್ರಾಂ ಚಿನ್ನಾಭರಣ ಕಳವು ಮಾಡಿ ಪರಾರಿಯಾದ ಘಟನೆ ಮಲ್ಲೇಶ್ವರದಲ್ಲಿ ನಡೆದಿದೆ.

ಚಿನ್ನಾಭರಣ ಕಂಪನಿಗೆ ವಂಚಿಸಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಆಭರಣಗಳೊಂದಿಗೆ ಪರಾರಿಯಾದ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮೇ 16 ರಂದು ಮಲ್ಲೇಶ್ವರಂನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಮತ್ತು ಆರೋಪಿಗಳನ್ನು ಪರೇಶ್ ಸೋನಿ, ಶ್ಯಾಮ್ ಹಾಗೂ ಚಂದ್ರಶೇಖರ್ ರಾವ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೆಹ್ತಾ ಗೋಲ್ಡ್ ಪ್ರೈವೇಟ್ ಲಿಮಿಟೆಡ್‌ನ ಮಾರಾಟ ವ್ಯವಸ್ಥಾಪಕರು ನೀಡಿದ ದೂರಿನ ಆಧಾರದ ಮೇಲೆ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರೇಶ್ ಸೋನಿ ಎಂಬಾತ ತಾನು ಹೋಲ್‌ಸೇಲ್ ಚಿನ್ನದ ವ್ಯಾಪಾರಿ ಎಂದು ಪರಿಚಯಿಸಿಕೊಂಡು, 3 ಕೆಜಿ ಚಿನ್ನದ ಆಭರಣಗಳು ಬೇಕೆಂದು ಅಂಗಡಿಗೆ ಕರೆ ಮಾಡಿದ್ದ. ಬಳಿಕ ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿರುವ ತನ್ನ ಕಚೇರಿಗೆ ಆಭರಣಗಳ ಸ್ಯಾಂಪಲ್ ತೆಗೆದುಕೊಂಡು ಬರುವಂತೆ ಸೂಚಿಸಿದ್ದ. ಅದರಂತೆ ಮಹೇಂದ್ರ ಕುಮಾರ್ ಜೈನ್ ಹಾಗೂ ಮತ್ತೊಬ್ಬ ಸಿಬ್ಬಂದಿ 3 ಕೆಜಿ ವಿವಿಧ ವಿನ್ಯಾಸದ ಚಿನ್ನಾಭರಣಗಳನ್ನು ತೆಗೆದುಕೊಂಡು ಆರೋಪಿಯ ಕಚೇರಿಗೆ ತೆರಳಿದ್ದರು.

ಸೋನಿ ತಾನು ಇಷ್ಟಪಟ್ಟ ಆಭರಣಗಳನ್ನು ಆಯ್ಕೆ ಮಾಡಿ, ಅವುಗಳನ್ನು ಯಂತ್ರವನ್ನು ಬಳಸಿ ಪರಿಶೀಲಿಸುವುದಕ್ಕೆ ಪಕ್ಕದ ಕ್ಯಾಬಿನ್‌ನಲ್ಲಿದ್ದ ರಾವ್ ಗೆ ನೀಡಿದ್ದಾರೆ. ರಾವ್, ಸುಮಾರು 1 ಕೆಜಿ, 850 ಗ್ರಾಂ ಆಭರಣಗಳನ್ನು ತೆಗೆದುಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ.

ನಂತರ ರಾವ್ ನನ್ನು ಹುಡುಕೋದಾಗಿ ಹೇಳಿ ಜೊತೆಗಿದ್ದ ಇನ್ನಿಬ್ಬರು ಆರೋಪಿಗಳು ಕೂಡ ಎಸ್ಕೇಪ್ ಆಗಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಕಳವಾಗಿರುವ ಚಿನ್ನಾಭರಣಗಳ ಮೌಲ್ಯ ಅಂದಾಜು 3 ಕೋಟಿ ರೂ. ಎಂದು ಹೇಳಲಾಗಿದೆ. ಆರೋಪಿಗಳು ಪೂರ್ವಯೋಜಿತವಾಗಿ ಮೋಸ ಮಾಡಿ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಡದಿ ಟೌನ್​​ಶಿಪ್​​ಗೆ ರೈತರ ಒಪ್ಪಿಗೆ; HDK ವಿರೋಧದ ನಡುವೆ ಜೂನ್ 1 ರಿಂದಲೇ ಹಣ ಬಿಡುಗಡೆ: ಡಿಕೆಶಿ ಮಹತ್ವದ ಘೋಷಣೆ

ಆರ್ಥಿಕತೆ ಎಕ್ಕುಟ್ಟಿ ಹೋಗಲಿ, ಆದ್ರೆ ಮೆಲೋನಿಗೆ 'ಮೆಲೋಡಿ' ಕೊಡುವುದು ತಡವಾಗ್ಬಾರ್ದು: ಖರ್ಗೆ ಕಿಡಿ

'My magical May, one more win': ‘ವಿಜಯ’ದ ಸಂಭ್ರಮ ಹಂಚಿಕೊಂಡ ತ್ರಿಶಾ

ಬಂಗಾಳದಲ್ಲಿ ಕೇವಲ ಹಿಂದೂ ಮತಗಳಿಂದ ಮಾತ್ರ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ: ಖ್ಯಾತ ಸಮೀಕ್ಷೆದಾರ ಪ್ರದೀಪ್ ಗುಪ್ತಾ ಹೇಳಿದ್ದೇನು?

ಮೆಲೊನಿಗೆ ಪ್ರಧಾನಿ ಮೋದಿ Melody ಚಾಕ್ಲೆಟ್ ಗಿಫ್ಟ್: Parle Industries ಷೇರು ಮೌಲ್ಯ ಹೆಚ್ಚಳ; Confuse ಮಾಡ್ಕೊಂಡ್ರಾ ಹೂಡಿಕೆದಾರರು! ಧನ್ಯವಾದ ಹೇಳಿದ ಸಂಸ್ಥೆ!

SCROLL FOR NEXT