ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಕೈಗಾರಿಕೆಗಳಿಗೆ ಕಾವೇರಿ ನೀರಿನ ಭದ್ರತೆ; ಕೊಳ್ಳೇಗಾಲ ಕೆರೆಗಳ ಅಭಿವೃದ್ಧಿಗೆ ಸರ್ಕಾರ ಮೆಗಾ ಪ್ಲ್ಯಾನ್: ಎಂ.ಬಿ ಪಾಟೀಲ್

ಈ ಯೋಜನೆ ಕುರಿತು ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರೊಂದಿಗೆ ಖನಿಜ ಭವನದಲ್ಲಿ ಸಭೆ ನಡೆಸಿದ ಸಚಿವರು, ಸ್ಥಳೀಯ ರೈತರು ವ್ಯಕ್ತಪಡಿಸಿದ್ದ ಆತಂಕಗಳನ್ನು ನಿವಾರಿಸುವ ಪ್ರಯತ್ನ ನಡೆಸಿದರು. ರೈತರ ಜೊತೆ ಶೀಘ್ರದಲ್ಲೇ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ಕೂಡ ನೀಡಿದರು.

ಬೆಂಗಳೂರು: ಬೆಂಗಳೂರಿನ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಕಾವೇರಿ ನೀರು ಪೂರೈಕೆ ಮಾಡಲು ರಾಜ್ಯ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಅಗರ ಮತ್ತು ಮದ್ದೂರು ಕೆರೆಗಳ ಸಂಗ್ರಹ ಸಾಮರ್ಥ್ಯ ಹೆಚ್ಚಿಸಿ, ಮಳೆಗಾಲದಲ್ಲಿ ಕಾವೇರಿ ನೀರನ್ನು ಸಂಗ್ರಹಿಸಿ ಬಳಿಕ ಕೈಗಾರಿಕೆಗಳಿಗೆ ಪೂರೈಸುವ ಯೋಜನೆ ಸಿದ್ಧವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ತಿಳಿಸಿದ್ದಾರೆ.

ಈ ಯೋಜನೆ ಕುರಿತು ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರೊಂದಿಗೆ ಖನಿಜ ಭವನದಲ್ಲಿ ಸಭೆ ನಡೆಸಿದ ಸಚಿವರು, ಸ್ಥಳೀಯ ರೈತರು ವ್ಯಕ್ತಪಡಿಸಿದ್ದ ಆತಂಕಗಳನ್ನು ನಿವಾರಿಸುವ ಪ್ರಯತ್ನ ನಡೆಸಿದರು. ರೈತರ ಜೊತೆ ಶೀಘ್ರದಲ್ಲೇ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ಕೂಡ ನೀಡಿದರು.

ಯೋಜನೆಯಿಂದ ರೈತರಿಗೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಕಾವೇರಿ ನ್ಯಾಯಮಂಡಳಿ ಕೈಗಾರಿಕೆಗಳ ಬಳಕೆಗೆ ಮೀಸಲಿಟ್ಟಿರುವ ನೀರನ್ನೇ ಬಳಸಲಾಗುತ್ತದೆ, ಕೃಷಿಗೆ ಮೀಸಲಾದ ನೀರನ್ನು ಬಳಸುವುದಿಲ್ಲ ಎಂದು ಹೇಳಿದರು.

ಕೈಗಾರಿಕೆಗಳಿಗೆ ಒಟ್ಟು 4 ಟಿಎಂಸಿ ಅಡಿ ನೀರು ಮೀಸಲಾಗಿದ್ದು, ಅದರಲ್ಲಿ ಈಗಾಗಲೇ 1.37 ಟಿಎಂಸಿ ಬಳಕೆಯಲ್ಲಿದೆ. ಉಳಿದ ನೀರಿನಲ್ಲಿ ಸುಮಾರು 2.5 ಟಿಎಂಸಿ ನೀರನ್ನು ಈ ಯೋಜನೆಗೆ ಬಳಸುವ ಪ್ರಸ್ತಾವನೆ ಇದೆ ಎಂದು ವಿವರಿಸಿದರು.

ಮಳೆಗಾಲದಲ್ಲಿ ನೇರವಾಗಿ ಕಾವೇರಿ ನದಿಯಿಂದ ನೀರನ್ನು ಎತ್ತಿ ಅಗರ ಮತ್ತು ಮದ್ದೂರು ಕೆರೆಗಳಲ್ಲಿ ಸಂಗ್ರಹಿಸಲಾಗುತ್ತದೆ. ನಂತರ ವರ್ಷಪೂರ್ತಿ ಕೈಗಾರಿಕೆಗಳಿಗೆ ಆ ನೀರನ್ನು ಪೂರೈಸಲಾಗುತ್ತದೆ. ಇದಕ್ಕಾಗಿ ಕೆರೆಗಳನ್ನು ಆಳಗೊಳಿಸುವ ಮೂಲಕ ಸಂಗ್ರಹ ಸಾಮರ್ಥ್ಯ ಹೆಚ್ಚಿಸಲಾಗುತ್ತದೆ. ಯಾವುದೇ ಹೆಚ್ಚುವರಿ ಭೂಸ್ವಾಧೀನ ಮಾಡುವ ಅಗತ್ಯವಿಲ್ಲ ಎಂದು ಸಚಿವರು ಹೇಳಿದರು.

ಇದೇ ವೇಳೆ ಅಗರ ಮತ್ತು ಮದ್ದೂರು ಕೆರೆಗಳ ಕೆಳಭಾಗದಲ್ಲಿರುವ ಚಿಕ್ಕಹೊಳೆ ಹಾಗೂ ಸುವರ್ಣಮುಖಿ ಕೆರೆಗಳನ್ನೂ ಅಭಿವೃದ್ಧಿಪಡಿಸಲಾಗುತ್ತದೆ. ಈ ಕೆರೆಗಳಲ್ಲಿನ ನೀರು ಕೂಡ ರೈತರಿಗೆ ವರ್ಷಪೂರ್ತಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಈ ಯೋಜನೆಯಿಂದ ಕೈಗಾರಿಕೆಗಳಿಗೆ ನೀರಿನ ಭದ್ರತೆ ಒದಗಿಸುವುದರ ಜೊತೆಗೆ, ರೈತರಿಗೆ ವರ್ಷಕ್ಕೆ ಒಂದು ಬೆಳೆ ಬದಲು ಎರಡು ಬೆಳೆ ಬೆಳೆಸುವ ಅವಕಾಶವೂ ಸಿಗಲಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!