ಸಿಎಂ ಸಿದ್ದರಾಮಯ್ಯ 
ರಾಜ್ಯ

'ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿದರೆ ನೀವು ಮೋದಿಯವರನ್ನು ಪ್ರಶ್ನೆ ಮಾಡೋದಿಲ್ಲ, ನಮ್ಮನ್ನು ಕೇಳ್ತೀರಾ': ಸಿಎಂ ಸಿದ್ದರಾಮಯ್ಯ; Video

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗ 2014ರಲ್ಲಿ ಡೀಸೆಲ್ ಬೆಲೆ 48 ರೂಪಾಯಿ, ಪೆಟ್ರೋಲ್ ಬೆಲೆ 70 ರೂಪಾಯಿ ಇತ್ತು, ಗ್ಯಾಸ್ ಸಿಲಿಂಡರ್ ಬೆಲೆ 414 ರೂಪಾಯಿ ಇತ್ತು, ಇಂದು ಇಷ್ಟು ಬೆಲೆ ಏರಿಕೆ ಮಾಡಿದ್ದು ಯಾರು ಎಂದು ಕೇಳಿದರು.

ಬೆಂಗಳೂರು: ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದಾಗ ನೀವು ಮಾತನಾಡುವುದಿಲ್ಲ, ಮೌನವಾಗಿರುತ್ತೀರಿ, ಅವರನ್ನು ಏನೂ ಪ್ರಶ್ನಿಸುವುದಿಲ್ಲ, ಈಗ ನಮ್ಮನ್ನು ದರ ಇಳಿಸುತ್ತೀರಾ ಎಂದು ಪ್ರಶ್ನೆ ಮಾಡುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗ 2014ರಲ್ಲಿ ಡೀಸೆಲ್ ಬೆಲೆ 48 ರೂಪಾಯಿ, ಪೆಟ್ರೋಲ್ ಬೆಲೆ 70 ರೂಪಾಯಿ ಇತ್ತು, ಗ್ಯಾಸ್ ಸಿಲಿಂಡರ್ ಬೆಲೆ 414 ರೂಪಾಯಿ ಇತ್ತು, ಇಂದು ಇಷ್ಟು ಬೆಲೆ ಏರಿಕೆ ಮಾಡಿದ್ದು ಯಾರು ಎಂದು ಕೇಳಿದರು.

ರಾಜ್ಯದಿಂದ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಕಡಿಮೆ ಮಾಡುತ್ತೀರಾ ಎಂದು ಕೇಳಿದ್ದಕ್ಕೆ ಪ್ರತಿಕ್ರಿಯೆ ನೀಡದೆ ಹೋದರು. ನಂತರ ಯುನ ಕಾಂಗ್ರೆಸ್ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ನೀಟ್ ಪರೀಕ್ಷೆ ಅಕ್ರಮದ ಹಿನ್ನೆಯಲ್ಲಿ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ರಾಜೀನಾಮೆ ನೀಡಬೇಕು, ಅವರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸಬೇಕು, ಬಿಜೆಪಿಯವರು ಭಂಡರು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ, ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿ ಕ್ಷಮೆ ಯಾಚಿಸಲು ವಿಜಯೇಂದ್ರ ಆಗ್ರಹ!

ಪ್ರಮಾಣ ವಚನ ಸ್ವೀಕಾರದ ವೇಳೆ ಕಾಂಗ್ರೆಸ್ ನಾಯಕನಿಗೆ ತಿದ್ದಿ, ಬುದ್ಧಿ ಹೇಳಿದ ಗವರ್ನರ್; ನೂತನ ಸಚಿವ ಮಾಡಿದ ತಪ್ಪೇನು?

ವಿಜಯ್ ಸಂಪುಟ ವಿಸ್ತರಣೆ: 21 ಟಿವಿಕೆ, ಇಬ್ಬರು ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ; AIADMK ಹೊರಗಿಟ್ಟ ದಳಪತಿ

ಬೆಂಗಳೂರಿನಲ್ಲಿ ಮುಸ್ಲಿಂ ಪ್ರೇಮಿಯೊಂದಿಗೆ ವಾಸ: ಯುವತಿಯ ಮಾನಸಿಕ ಪರೀಕ್ಷೆ ಕೋರಿ ತಾಯಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬಿಜೆಪಿಯನ್ನೇ ಹಿಂದಿಕ್ಕಿದ ‘Cockroach Janta Party’; ಐದೇ ದಿನದಲ್ಲಿ 10 ಮಿಲಿಯನ್ ಫಾಲೋವರ್ಸ್!

SCROLL FOR NEXT