ರಾಜ್ಯ

Cockroach Janta Party Karnataka: ಬೆಂಗಳೂರಿನಲ್ಲಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

ಈ ಪೋಸ್ಟ್ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ಪೊಲೀಸರು, ಟೌನ್ ಹಾಲ್ ಬಳಿ ಕಾರ್ಯಕ್ರಮ ಆಯೋಜನೆಗೆ ಯಾವುದೇ ವ್ಯಕ್ತಿ, ಸಂಘಟನೆ, ಪಕ್ಷದಿಂದ ಅನುಮತಿ ಕೋರಿರುವ ಯಾವುದೇ ಅರ್ಜಿಯನ್ನು ಸ್ವೀಕರಿಸಿಲ್ಲ. ಈ ಸಂಬಂಧ ಯಾವುದೇ ಅಧಿಕೃತ ಅನುಮತಿ ನೀಡಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ಬೆಂಗಳೂರು: ದೇಶಾದ್ಯಂತ ಕಾಕ್ರೋಜ್ ಜನತಾ ಪಾರ್ಟಿ ಸದ್ದು ಮಾಡುತ್ತಿರುವಂತೆಯೇ ಕಾಕ್ರೋಜ್ ಕರ್ನಾಟಕ ಪಾರ್ಟಿ ಕರ್ನಾಟಕದಿಂದ ಇದೇ 24 ರಂದು ಬೆಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ಶಾಂತಿಯುತ ಮಾನವ ಸರಪಳಿ ನಿರ್ಮಾಣ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹರಿದಾಡುತ್ತಿದೆ.

ಯುವಕರಿಗೆ ಭವಿಷ್ಯವಿಲ್ಲ. ಬೆಲೆ ಏರಿಕೆಯಿಂದ ಬದುಕಿಲ್ಲ. ವಿದ್ಯಾರ್ಥಿಗಳಿಗೆ ನೀಟು ಪರೀಕ್ಷೆಇಲ್ಲ. ನಮ್ಮ ಮತ ಕದಿಯುತ್ತದ್ದಾರೆ. ಬನ್ನಿ ಕಾಕ್ರೋಜ್ ಗಳ ಸಂದೇಶ ನೀಡೋಣ. ಇಲ್ಲಿ ನಾಯಕರಿಲ್ಲ. ನಮಗೆ ನಾವೇ ನಾಯಕರು. ಇಲ್ಲಿ ಸಂಘಟನೆ ಇಲ್ಲ. ಪ್ರಜೆಗಳು ಕೈ ಜೋಡಿಸುವುದೇ ಸಂಘಟನೆ . ಬನ್ನಿ ಶಕ್ತಿ ಪ್ರದರ್ಶಿಸೋಣ. ಆತ್ಮ ವಂಚಕ ಆಡಳಿತಕ್ಕೆ ಸಂದೇಶ ರವಾನಿಸೋಣ ಎಂದು ಕರೆ ನೀಡಲಾಗಿತ್ತು.

ಈ ಪೋಸ್ಟ್ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ಪೊಲೀಸರು, ಟೌನ್ ಹಾಲ್ ಬಳಿ ಕಾರ್ಯಕ್ರಮ ಆಯೋಜನೆಗೆ ಯಾವುದೇ ವ್ಯಕ್ತಿ, ಸಂಘಟನೆ, ಪಕ್ಷದಿಂದ ಅನುಮತಿ ಕೋರಿರುವ ಯಾವುದೇ ಅರ್ಜಿಯನ್ನು ಸ್ವೀಕರಿಸಿಲ್ಲ. ಈ ಸಂಬಂಧ ಯಾವುದೇ ಅಧಿಕೃತ ಅನುಮತಿ ನೀಡಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ಫ್ರೀಡಂ ಪಾರ್ಕ್ ಹೊರತುಪಡಿಸಿ, ಬೇರೆ ಯಾವುದೇ ಸ್ಥಳಗಳಲ್ಲಿ ಧರಣಿ, ಪ್ರತಿಭಟನಾ Rally ನಡೆಸಲು ಅವಕಾಶ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಇದನ್ನು ಉಲ್ಲಂಘಿಸಿ ಟೌನ್ ಹಾಲ್ ಮುಂಭಾಗ ಜನರು ಬಂದು ಸೇರುವುದು ನ್ಯಾಯಾಲಯ ಆದೇಶದ ಸ್ಪಷ್ಪ ಉಲ್ಲಂಘನೆಯಾಗಿರುತ್ತದೆ. ಹೀಗಾಗಿ ಜನರು ಟೌನ್ ಹಾಲ್ ಬಳಿ ಆಗಮಿಸಿ ಗುಂಪು ಸೇರದಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Twisha Sharma ಸಾವು ಪ್ರಕರಣ: ನಾಪತ್ತೆಯಾಗಿದ್ದ ಪತಿ ಜಬಲ್ಪುರ ನ್ಯಾಯಾಲಯಕ್ಕೆ ಶರಣು; ಅತ್ತೆಗೆ ಹೈಕೋರ್ಟ್ ನೋಟಿಸ್; Video

ಕ್ಯಾಬಿನೆಟ್ ಸೆಕ್ರೆಟರಿಯೇಟ್‌ನಲ್ಲಿ ಮಣಿಪುರ ಡಿಜಿಪಿ ರಾಜೀವ್ ಸಿಂಗ್‌ಗೆ ಉನ್ನತ ಹುದ್ದೆಗೆ ಕೇಂದ್ರದಿಂದ ಬಡ್ತಿ!

'ಶೇ.100ರಷ್ಟು ದೋಷರಹಿತ ಮರು ಪರೀಕ್ಷೆ': NEET UG ಪ್ರಶ್ನೆಪತ್ರಿಕೆ ಸೋರಿಕೆ ಬಳಿಕ ಕಠಿಣ ನಿರ್ಧಾರ ಎಂದ Dharmendra Pradhan

ಮೃತ ನಟಿ ತ್ವಿಶಾ ಶರ್ಮಾ ಎರಡನೇ ಮರಣೋತ್ತರ ಪರೀಕ್ಷೆಗೆ ಹೈಕೋರ್ಟ್ ಅನುಮತಿ; ಜಾಮೀನು ಅರ್ಜಿ ಹಿಂಪಡೆದ ಪತಿ!

IPL 2026: ಕೊಹ್ಲಿ ಜತೆ ಬ್ಯಾಟಿಂಗ್ ನನ್ನ ಬೆಳವಣಿಗೆಗೆ ಕಾರಣ ಎಂದ ಪಡಿಕಲ್; ಸೂರ್ಯವಂಶಿ ಬಗ್ಗೆ ಹೇಳಿದ್ದೇನು?

SCROLL FOR NEXT