ಬೆಂಗಳೂರು: ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು (Tax Reduction) ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರು ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಏನಾದ್ರು ಸಹಾಯ ಮಾಡುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿ, ಕೇಂದ್ರದವರು ಬೆಲೆ ಜಾಸ್ತಿ ಮಾಡಿದರೆ ನಮಗೆ ತೆರಿಗೆ ಕಡಿಮೆ ಮಾಡಿ ಅಂತ ಯಾಕೆ ಪ್ರಶ್ನೆ ಕೇಳ್ತೀರಾ? ನೀವೆಲ್ಲ ಕೇಂದ್ರ ಸರ್ಕಾರದ ಪರ. ನೀವು ಪ್ರಶ್ನೆ ಕೇಳೋದ್ರಲ್ಲೇ ಗೊತ್ತಾಗುತ್ತದೆ ಎಂದು ಮಾಧ್ಯಮಗಳ ಮೇಲೆ ಗರಂ ಆದರು.
ಮೋದಿ ಅಧಿಕಾರಕ್ಕೆ ಬಂದಾಗ ಎಷ್ಟು ಇತ್ತು? ಮನಮೋಹನ್ ಸಿಂಗ್ ಇದ್ದಾಗ ಪೆಟ್ರೋಲ್ 70 ರೂ. ಡಿಸೇಲ್ 48 ರೂ. ಇತ್ತು. ಗ್ಯಾಸ್ ಬೆಲೆ 414 ರೂ. ಇತ್ತು. ಈಗ ಎಷ್ಟು ಆಗಿದೆ? ಯಾರು ಜಾಸ್ತಿ ಮಾಡಿದ್ದು ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.