ರಾಜ್ಯ

Bengaluru Rain-ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಜಿಟಿಜಿಟಿ ಮಳೆ: ತಂಪೆರೆದ ವರುಣ

ಕಳೆದ ಕೆಲವು ದಿನಗಳಿಂದ ಸಾಧಾರಣ ಬಿಸಿಲಿನಿಂದ ಕೂಡಿದ್ದ ರಾಜಧಾನಿಯಲ್ಲಿ, ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ವಾರಾಂತ್ಯ ಬೆಳಗ್ಗೆಯಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದೆ. ನಗರದ ಹಲವು ಭಾಗಗಳಲ್ಲಿ ಬೆಳಗ್ಗೆಯಿಂದ ಮಳೆಯಾಗುತ್ತಿದ್ದು, ವಾರಾಂತ್ಯ ರಜೆ ಹೊರಹೋಗುವ ಪ್ಲಾನ್ ಹಾಕಿಕೊಂಡಿದ್ದವರ ಮೂಡ್ ಹಾಳಾಗಿದೆ.

ಆದರೆ ಹಲವು ದಿನಗಳಿಂದ ಬಿಸಿಲು, ಸೆಖೆಯಿಂದ ಬಳಲುತ್ತಿದ್ದವರಿಗೆ ತಂಪಾದ ವಾತಾವರಣದ ಅನುಭವ ನೀಡಿದೆ. ಕಳೆದ ಕೆಲವು ದಿನಗಳಿಂದ ಸಾಧಾರಣ ಬಿಸಿಲಿನಿಂದ ಕೂಡಿದ್ದ ರಾಜಧಾನಿಯಲ್ಲಿ, ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದೆ. ವಿದ್ಯಾರಣ್ಯಪುರ, ಕೆಂಗೇರಿ ಶಾಂತಿನಗರ, ರಿಚ್ಮಂಡ್ ಟೌನ್, ಮೆಜೆಸ್ಟಿಕ್, ಕಾರ್ಪೊರೇಷನ್ ಮತ್ತು ಸುತ್ತಮುತ್ತಲಿನ ಹತ್ತಿರದ ಜಾಗಗಳಲ್ಲಿ ಮಳೆಯ ಸಿಂಚನವಾಗುತ್ತಿದೆ. ನೆಟ್ಟಿಗರು ತಮ್ಮ ಪ್ರದೇಶಗಳ ಸುತ್ತಮುತ್ತ ಮಳೆಯಾಗುತ್ತಿರುವ ಸ್ಟೇಟಸ್ ಗಳನ್ನು ಹಾಕುತ್ತಿರುತ್ತಾರೆ.

ವಾಹನ ಸವಾರರ ಪರದಾಟ,ಸಂಚಾರ ಸಮಸ್ಯೆ

ವಾರಾಂತ್ಯ ಆರಂಭದ ದಿನವಾದ ಇಂದು ಮುಂಜಾನೆಯೇ ಮಳೆ ಶುರುವಾಗಿರುವುದರಿಂದ ಕಚೇರಿಗೆ ಹೋಗುವವರು ಮತ್ತು ಅಗತ್ಯ ಕೆಲಸಗಳಿಗಾಗಿ ಹೊರಟಿದ್ದ ವಾಹನ ಸವಾರರು ಕೊಂಚ ಪರದಾಡುವಂತಾಯಿತು. ಆದರೆ, ಸುಡುವ ಬಿಸಿಲಿಗೆ ಬಸವಳಿದಿದ್ದ ಜನರಿಗೆ ಈ ಜಿಟಿ ಜಿಟಿ ಮಳೆ ಸದ್ಯ ನೆಮ್ಮದಿ ತಂದಿದ್ದು, ನಗರದಾದ್ಯಂತ ಹಿತಕರ ಹಾಗೂ ತಂಪಾದ ಹವಾಮಾನ ನಿರ್ಮಾಣವಾಗಿದೆ.

ಮುಂದಿನ ಕೆಲವು ಗಂಟೆಗಳ ಕಾಲ ನಗರದ ಹಲವೆಡೆ ಇದೇ ರೀತಿಯ ಸಾಧಾರಣ ಅಥವಾ ಜಿಟಿ ಜಿಟಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್