ಹೈಕೋರ್ಟ್  
ರಾಜ್ಯ

ಅಪರೂಪದ ನಿದರ್ಶನ: ಚಾಲಕನಿಗೆ 1 ವರ್ಷದ ಜೈಲು ಶಿಕ್ಷೆಯನ್ನು ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್!

ದಂಡದ ಮೊತ್ತವನ್ನು 5,000 ರೂ.ಗಳಿಂದ 1 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ. ಇದನ್ನು ಮೃತರ ಅವಲಂಬಿತರಿಗೆ ಪಾವತಿಸಬೇಕು ಎಂದು ಸೂಚಿಸಿದೆ.

ಬೆಂಗಳೂರು: ಅಪರೂಪದ ನಿದರ್ಶನವೊಂದರಲ್ಲಿ ಅಪಘಾತದ ನಂತರ ಗಾಯಗೊಂಡವರನ್ನು ತನ್ನ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ತೋರಿದ ಆರೋಪಿಗೆ ಸೆಷನ್ಸ್ ನ್ಯಾಯಾಲಯ ನೀಡಿದ್ದ ಒಂದು ವರ್ಷದ ಸರಳ ಜೈಲು ಶಿಕ್ಷೆಯನ್ನು ಹೈಕೋರ್ಟ್ ಒಂದೇ ದಿನಕ್ಕೆ ಇಳಿಸಿದೆ.

ಆದಾಗ್ಯೂ,ದಂಡದ ಮೊತ್ತವನ್ನು 5,000 ರೂ.ಗಳಿಂದ 1 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ. ಇದನ್ನು ಮೃತರ ಅವಲಂಬಿತರಿಗೆ ಪಾವತಿಸಬೇಕು ಎಂದು ಸೂಚಿಸಿದೆ. ಶಿಕ್ಷೆಯನ್ನು ಕಡಿಮೆ ಮಾಡುವಾಗ, ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿಯಿಂದ ಅವಲಂಬಿತರು ಪಡೆದ ಪರಿಹಾರದ ಜೊತೆಗೆ ಹೆಚ್ಚಿದ ದಂಡದ ಮೊತ್ತವನ್ನು ಪಾವತಿಸಲು ಆರೋಪಿಯ ಇಚ್ಛೆಯನ್ನು ನ್ಯಾಯಾಲಯ ಪರಿಗಣಿಸಿತು.

ನ್ಯಾಯಮೂರ್ತಿ ವಿ. ಶ್ರೀಶಾನಂದ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಆರೋಪಿ ರಿಯಾಜ್ ಅಹ್ಮದ್ (53) ಸಲ್ಲಿಸಿದ್ದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಭಾಗಶಃ ಅನುಮತಿಸಿದ್ದಾರೆ. ಮಂಗಳೂರಿನ ಪಕ್ಷಿಕೆರೆಯ ಚಾಲಕ ಆರೋಪಿಯು ಮಂಗಳೂರಿನಲ್ಲಿ ದುಡುಕಿನ ಮತ್ತು ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವಾಗ ಆನಂದ್ ಶೆಟ್ಟಿ ಎಂಬುವವರ ಮೇಲೆ ಡಿಕ್ಕಿ ಹೊಡೆಸಿದ್ದರಿಂದ ಅವರು ಸಾವನ್ನಪ್ಪಿದ್ದರು.

2018 ರಲ್ಲಿ ಸೆಷನ್ಸ್ ನ್ಯಾಯಾಲಯ ಅದೇ ವರ್ಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಿಧಿಸಿದ ಶಿಕ್ಷೆಯನ್ನು ದೃಢಪಡಿಸಿತು. ನ್ಯಾಯಾಲಯದ ಆದೇಶದ ಪ್ರಕಾರ, ಅಹ್ಮದ್ ಒಂದು ವರ್ಷದ ಸರಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗಿತ್ತು ಮತ್ತು 5,000 ರೂ. ದಂಡವನ್ನು ಪಾವತಿಸಬೇಕಾಗಿತ್ತು.

ಅಪಘಾತದ ನಂತರ ಆರೋಪಿಯು ಸ್ಥಳದಿಂದ ಓಡಿಹೋಗಲಿಲ್ಲ ಬದಲಿಗೆ ಗಾಯಾಳುಗಳನ್ನು ತನ್ನ ಸ್ವಂತ ಕಾರಿನಲ್ಲಿ ಸ್ಥಳಾಂತರಿಸಿದ್ದಾನೆ ಎಂದು ಅರ್ಜಿದಾರರ ವಕೀಲರು ವಾದಿಸಿದರು. ಇದಕ್ಕಾಗಿ ಶಿಕ್ಷೆಯನ್ನು ರದ್ದುಗೊಳಿಸುವ ಮೂಲಕ ಮತ್ತು ದಂಡದ ಮೊತ್ತವನ್ನು ಹೆಚ್ಚಿಸುವ ಮೂಲಕ ನ್ಯಾಯಾಲಯ ದಯೆ ತೋರಿಸಬೇಕು ಮತ್ತು ಅದನ್ನು ಪರಿಹಾರವಾಗಿ ಪಾವತಿಸಬಹುದು ಎಂದು ಅವರು ವಾದಿಸಿದರು.

ಅಪಘಾತಕ್ಕೀಡಾದ ಮತ್ತು ಬಲಗಾಲಿಗೆ ರಾಡ್ ಅಳವಡಿಸಿಕೊಂಡಿರುವ ಅರ್ಜಿದಾರರ ಆರೋಗ್ಯವನ್ನು ಪರಿಗಣಿಸುವಂತೆ ವಕೀಲರು ನ್ಯಾಯಾಲಯವನ್ನು ಕೋರಿದರು. ಇದರಿಂದಾಗಿ ಅವರು ಚಾಲಕ ಹುದ್ದೆಯನ್ನು ಕಳೆದುಕೊಂಡು ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ ಎಂದು ಹೇಳಿದರು. ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಅಪರಾಧಕ್ಕಾಗಿ ಮ್ಯಾಜಿಸ್ಟ್ರೇಟ್ ವಿಧಿಸಿದ್ದ ಶಿಕ್ಷೆಯನ್ನು ಹೈಕೋರ್ಟ್ ಮಾರ್ಪಡಿಸಿದೆ.

ನ್ಯಾಯಾಲಯದ ಆದೇಶದವರೆಗೆ ಅರ್ಜಿದಾರರಿಗೆ ಒಂದು ದಿನದವರೆಗೂ ಜೈಲು ಶಿಕ್ಷೆ ವಿಧಿಸಲು ಸೂಚಿಸಿದೆ ಮತ್ತು ದಂಡದ ಮೊತ್ತವನ್ನು 1 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ. ದಂಡದ ಮೊತ್ತದಲ್ಲಿ ಮೃತರ ಪತ್ನಿ ಸುಮತಿ ಮತ್ತು ಅವರ ಮಗ ಸಂತೋಷ್ ಕುಮಾರ್ ಅವರಿಗೆ 50,000 ರೂ.ಗಳನ್ನು ಪಾವತಿಸಬೇಕು. ಇದರಿಂದ ನ್ಯಾಯ ಸಿಗಲಿದೆ ಎಂದು ಕೋರ್ಟ್ ಹೇಳಿದೆ.

ಜುಲೈ 15, 2015 ರಂದು ಸಂಜೆ 6.30 ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಆನಂದ್ ಶೆಟ್ಟಿ ಸಾವನ್ನಪ್ಪಿದ್ದರು. ಅಪಘಾತದ ನಂತರ, ಅಹ್ಮದ್ ಕಾರನ್ನು ನಿಲ್ಲಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದರು. ಆದಾಗ್ಯೂ ಶೆಟ್ಟಿ ಬದುಕುಳಿಯಲಿಲ್ಲ ಮತ್ತು ಪೊಲೀಸರು ಅರ್ಜಿದಾರರ ವಿರುದ್ಧ ಸೆಕ್ಷನ್ 279 ಮತ್ತು 304ಎ ಅಡಿಯಲ್ಲಿ ಅಪರಾಧಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

10 ದಿನಗಳಲ್ಲಿ ಇಂಧನ ದರ 5 ರೂಪಾಯಿ ಏರಿಕೆ: 'ಕಂತುಗಳಲ್ಲಿ ಸಾರ್ವಜನಿಕರ ಹಣ ಲೂಟಿ': ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

‘Rozgar Mela’: 51 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಾಕ್ಸಿಂಗ್ ಕೋಚ್ ವಿರುದ್ಧ ಪೋಕ್ಸೋ ಕೇಸ್ ದಾಖಲು

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ: 10 ದಿನಗಳಲ್ಲಿ 3ನೇ ಬಾರಿ ತೈಲ ದರ ಏರಿಕೆ, ಗ್ರಾಹಕರಿಗೆ ಮತ್ತೆ ಇಂಧನ ಕಂಪನಿಗಳ ಶಾಕ್..!

ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ; 82 ಕಾರ್ಮಿಕರ ದುರ್ಮರಣ, 9 ಮಂದಿ ನಾಪತ್ತೆ..!

SCROLL FOR NEXT