ಸಾಂದರ್ಭಿಕ ಚಿತ್ರ 
ರಾಜ್ಯ

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರ ವ್ಯತ್ಯಯ!

ಮರದ ಕೊಂಬೆ ಬಿದ್ದು ಐಟಿಪಿಎಲ್–ಸತ್ಯಸಾಯಿ ಆಸ್ಪತ್ರೆ ಮಾರ್ಗದ ನಮ್ಮ ಮೆಟ್ರೋ ಸಂಚಾರ ಕೆಲಕಾಲ ಸ್ಥಗಿತವಾಗಿತ್ತು.

ಬೆಂಗಳೂರು: ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಹಲವು ಕಡೆ ಮಂಗಳವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ವೈಟ್ ಫೀಲ್ಡ್, ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

ಭಾರೀ ಮಳೆಯಿಂದ ಹಲವು ಕಡೆ ಅವಾಂತರಗಳು ಸೃಷ್ಟಿಯಾಗಿದ್ದು, ಅದರಲ್ಲೂ ಮರದ ಕೊಂಬೆ ಬಿದ್ದು ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ ನಮ್ಮ ಮೆಟ್ರೋ ಸಂಚಾರ ಕೆಲಕಾಲ ಸ್ಥಗಿತವಾಗಿತ್ತು. ಇದರಿಂದ ಮೆಟ್ರೋ ಸ್ಟೇಷನ್​​ಗಳಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದು, ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಮನೆಗೆ ಹೋಗಲಾಗದೇ ಮೆಟ್ರೋ ನಿಲ್ದಾಣಗಳಲ್ಲೇ ಪರದಾಡುತ್ತಿದ್ದಾರೆ.

ಐಟಿಪಿಎಲ್ ಮತ್ತು ಸತ್ಯಸಾಯಿ ಆಸ್ಪತ್ರೆ ನಡುವೆ ಹಳಿಯ ಮೇಲೆ ಮರದ ಕೊಂಬೆ ಬಿದ್ದ ಕಾರಣ ವೈಟ್‌ಫೀಲ್ಡ್ ಮತ್ತು ಗರುಡಾಚಾರ್ ಪಾಳ್ಯ ನಡುವೆ ರೈಲು ಸಂಚಾರವನ್ನು ಸಂಜೆ 06:00 ಗಂಟೆಯಿಂದ 06:35 ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಈಗ ಎಂದಿನಂತೆ ವೈಟ್‌ಫೀಲ್ಡ್ ನಿಂದ ಚಲ್ಲಘಟ್ಟ ನಡುವೆ ರೈಲುಗಳು ಲಭ್ಯವಿದೆ. ಉಂಟಾದ ಅನಾನುಕೂಲತೆಗೆ ಬಿಎಂಆರ್‌ಸಿಎಲ್ ವಿಷಾದ ವ್ಯಕ್ತಪಡಿಸುತ್ತದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್

ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆ ಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್ ಮಾಡಲಾಗಿದೆ. ಸಣ್ಣ ಮಳೆಗೂ ಕೆ ಆರ್ ಸರ್ಕಲ್ ಅಂಡರ್ ಪಾಸ್ ಜಲಾವೃತವಾಗುತ್ತೆ. ಹೀಗಾಗಿ ಪೊಲೀಸರು ಬ್ಯಾರಿಕೇಡ್ ಹಾಕಿ ಅಂಡರ್ ಪಾಸ್ ಬಂದ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಕರ್ನಾಟಕ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 18 ರಂದು ಮತದಾನ

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ತಿರಸ್ಕಾರ: 'ಸುಪ್ರೀಂ' ತೀರ್ಪು ಸ್ವಾಗತಿಸಿದ ಡಿಕೆ ಶಿವಕುಮಾರ್

ಮೂಲಭೂತವಾದಿಗಳ ಒತ್ತಡಕ್ಕೆ ಮಣಿದ ಪಾಕ್ ಸರ್ಕಾರ; ಹಿಂದೂ ಹೆಸರುಗಳ ಮರು ನಾಮಕರಣ ಮುಂದೂಡಿಕೆ!

SCROLL FOR NEXT