ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜ್ಯ

Siddaramaiah ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿಗೆ ಬದಲು ಜೈಪುರದಲ್ಲಿ ಲ್ಯಾಂಡಿಂಗ್! ಆಗಿದ್ದೇನು?

ಸಿದ್ದರಾಮಯ್ಯ ಹಾಗೂ ರಾಜ್ಯದ ಹಲವು ಹಿರಿಯ ನಾಯಕರನ್ನು ದೆಹಲಿಗೆ ಕರೆದೊಯ್ಯುತ್ತಿದ್ದ ಚಾರ್ಟರ್ಡ್ ವಿಮಾನವು ಗುರುವಾರ ಅಚ್ಚರಿಯ ರೀತಿಯಲ್ಲಿ ಮಾರ್ಗ ಬದಲಿಸಿ ಜೈಪುರದಲ್ಲಿ ಇಳಿದ ಘಟನೆ ನಡೆದಿದೆ.

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ದೆಹಲಿ ಪ್ರಯಾಣಿಸುತ್ತಿದ್ದ ವಿಶೇಷ ಚಾರ್ಟರ್ಡ್ ವಿಮಾನದ ಮಾರ್ಗ ಬದಲಾವಣೆಯಾಗಿದ್ದು, ಜೈಪುರದಲ್ಲಿ ಲ್ಯಾಂಡಿಂಗ್ ಆಗಿದೆ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯದ ಹಲವು ಹಿರಿಯ ನಾಯಕರನ್ನು ದೆಹಲಿಗೆ ಕರೆದೊಯ್ಯುತ್ತಿದ್ದ ಚಾರ್ಟರ್ಡ್ ವಿಮಾನವು ಗುರುವಾರ ಅಚ್ಚರಿಯ ರೀತಿಯಲ್ಲಿ ಮಾರ್ಗ ಬದಲಿಸಿ ಜೈಪುರದಲ್ಲಿ ಇಳಿದ ಘಟನೆ ರಾಜಕೀಯ ವಲಯದಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತ್ತು.

ಮೂಲಗಳ ಪ್ರಕಾರ, ಬೆಂಗಳೂರಿನಿಂದ ಹೊರಟಿದ್ದ ಈ ವಿಮಾನದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳುತ್ತಿದ್ದರು. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳಲ್ಲಿ ಭಾಗವಹಿಸಲು ತೆರಳಿದ್ದರು.

ಆದರೆ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸುತ್ತಮುತ್ತ ಉಂಟಾದ ಕೆಟ್ಟ ಹವಾಮಾನ ಮತ್ತು ಭಾರೀ ವಿಮಾನ ಸಂಚಾರ ದಟ್ಟಣೆಯಿಂದಾಗಿ ವಿಮಾನವನ್ನು ಈ ವಿಶೇಷ ವಿಮಾನವನ್ನು ರಾಜಸ್ತಾನದ ಜೈಪುರಕ್ಕೆ ತಿರುಗಿಸಲು ವಿಮಾನಯಾನ ಅಧಿಕಾರಿಗಳು ಸೂಚಿಸಿದ್ದಾರೆ ಎನ್ನಲಾಗಿದೆ.

ವದಂತಿಗಳ ಸುರಿಮಳೆ

ವಿಮಾನ ದಿಢೀರ್ ಮಾರ್ಗ ಬದಲಿಸಿದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವದಂತಿಗಳು ಹರಡಿದವು. ತಾಂತ್ರಿಕ ದೋಷ ಹಾಗೂ ತುರ್ತು ಪರಿಸ್ಥಿತಿ ಕುರಿತು ಅನೇಕ ಪರಿಶೀಲಿಸದ ಮಾಹಿತಿಗಳು ವೈರಲ್ ಆದವು. ಬಳಿಕ ಅಧಿಕಾರಿಗಳು ಸ್ಪಷ್ಟನೆ ನೀಡಿ, ಈ ಮಾರ್ಗ ಬದಲಾವಣೆ ಮುನ್ನೆಚ್ಚರಿಕೆಯ ಕ್ರಮವಾಗಿದ್ದು, ದೆಹಲಿ ವಿಮಾನ ನಿಲ್ದಾಣದ ಕಾರ್ಯಾಚರಣಾ ಪರಿಸ್ಥಿತಿಗಳ ಕಾರಣದಿಂದ ಮಾತ್ರ ನಡೆದಿದೆ ಎಂದು ತಿಳಿಸಿದ್ದಾರೆ.

ವಿಮಾನ ನಿಲ್ದಾಣ ಹಾಗೂ ವಿಮಾನಯಾನ ಮೂಲಗಳ ಪ್ರಕಾರ, ದೆಹಲಿಯಲ್ಲಿ ಮಧ್ಯಾಹ್ನದ ವೇಳೆ ಕಡಿಮೆ ಗೋಚರತೆ, ಮಧ್ಯಂತರ ಗುಡುಗು ಸಹಿತ ಮಳೆ ಮತ್ತು ಭಾರೀ ವಿಮಾನ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸಿದ್ದರಾಮಯ್ಯ ಮತ್ತು ಅವರ ನಿಯೋಗವನ್ನು ಹೊತ್ತೊಯ್ಯುತ್ತಿದ್ದ ಚಾರ್ಟರ್ಡ್ ವಿಮಾನವನ್ನು ಜೈಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿದೆ ಎಂದು ಹೇಳಲಾಗಿದೆ.

ಸುರಕ್ಷಿತ ಲ್ಯಾಂಡಿಂಗ್

ಅಂತೆಯೇ ವಿಮಾನ ಸುರಕ್ಷಿತವಾಗಿ ಜೈಪುರದಲ್ಲಿ ಇಳಿದಿದೆ. ಯಾವುದೇ ತಾಂತ್ರಿಕ ದೋಷ ಅಥವಾ ಭದ್ರತಾ ಸಮಸ್ಯೆ ಇರಲಿಲ್ಲ. ಇದು ಸಂಪೂರ್ಣವಾಗಿ ಹವಾಮಾನ ಮತ್ತು ಕಾರ್ಯಾಚರಣಾ ಕಾರಣಗಳಿಂದ ನಡೆದ ಮಾರ್ಗ ಬದಲಾವಣೆ ಕ್ರಮವಾಗಿದೆ ಎಂದು ಘಟನೆಯ ಬಗ್ಗೆ ಮಾಹಿತಿ ಹೊಂದಿದ್ದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಮಾನ ಸುರಕ್ಷಿತವಾಗಿ ಇಳಿದಿದ್ದು, ಎಲ್ಲಾ ಪ್ರಯಾಣಿಕರೂ ಕ್ಷೇಮವಾಗಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ನಂತರ ಮತ್ತು ವಿಮಾನ ಸಂಚಾರ ನಿಯಂತ್ರಣ ವಿಭಾಗದಿಂದ ಅನುಮತಿ ಸಿಕ್ಕ ಬಳಿಕ, ನಿಯೋಗದ ದೆಹಲಿ ಪ್ರಯಾಣಕ್ಕಾಗಿ ಮುಂದಿನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ಮುಖ್ಯಮಂತ್ರಿಯವರ ಆಗಮನದ ಹಿನ್ನೆಲೆಯಲ್ಲಿ ಜೈಪುರ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ತಾತ್ಕಾಲಿಕವಾಗಿ ಹೆಚ್ಚಿಸಲಾಗಿತ್ತು. ಸಿದ್ದರಾಮಯ್ಯ ಅವರ ಆಗಮನದ ಸುದ್ದಿ ತಿಳಿದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರೂ ವಿಮಾನ ನಿಲ್ದಾಣದ ಬಳಿ ಜಮಾಯಿಸಿದ್ದರು ಎಂದು ಹೇಳಲಾಗಿದೆ.

ಸಂಜೆಯ ವೇಳೆಗೆ ಮುಖ್ಯಮಂತ್ರಿ ಅವರ ಪ್ರಯಾಣ ವೇಳಾಪಟ್ಟಿಯನ್ನು ಮರುಹೊಂದಿಸಲಾಗಿದ್ದು, ಸಣ್ಣ ಬದಲಾವಣೆಗಳೊಂದಿಗೆ ದೆಹಲಿಯ ಸಭೆಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಭೇಟಿಯ ರಾಜಕೀಯ ಮಹತ್ವ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಸಮನ್ವಯ, ಸಂಘಟನಾ ನೇಮಕಾತಿಗಳು ಮತ್ತು ಮುಂಬರುವ ಚುನಾವಣಾ ತಂತ್ರಗಳ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಈಗಾಗಲೇ ರಾಜಕೀಯ ಗಮನ ಸೆಳೆದಿತ್ತು.

ಮೂಲಗಳ ಪ್ರಕಾರ, ಆಡಳಿತಾತ್ಮಕ ವಿಚಾರಗಳು, ಪಕ್ಷದ ತಂತ್ರಗಳು ಮತ್ತು ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಬೇಕಾಗಿತ್ತು. ಹಲವು ಸಚಿವರು ಮತ್ತು ರಾಜಕೀಯ ಸಹಾಯಕರೂ ಇದೇ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಹೀಗಾಗಿ, ವಿಮಾನ ಜೈಪುರದಲ್ಲಿ ಇಳಿದ ವಿಚಾರ ಕರ್ನಾಟಕ ರಾಜಕೀಯ ವಲಯದಲ್ಲಿ ತಕ್ಷಣವೇ ಚರ್ಚೆಯ ವಿಷಯವಾಯಿತು. ಮಾರ್ಗ ಬದಲಾವಣೆಯಿಂದ ತಾತ್ಕಾಲಿಕ ವ್ಯತ್ಯಯ ಉಂಟಾದರೂ, ಪ್ರಯಾಣಿಕರ ಸುರಕ್ಷತೆಯೇ ಮೊದಲ ಆದ್ಯತೆ ಎಂದು ಅಧಿಕಾರಿಗಳು ಒತ್ತಿಹೇಳಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಹವಾಮಾನ ಬದಲಾವಣೆ ಮತ್ತು ಹೆಚ್ಚಿನ ವಿಮಾನ ದಟ್ಟಣೆಯಿಂದ ಇಂತಹ ಪರಿಸ್ಥಿತಿಗಳು ಆಗಾಗ ಉಂಟಾಗುತ್ತವೆ. ಜೈಪುರದಂತಹ ಸಮೀಪದ ವಿಮಾನ ನಿಲ್ದಾಣಗಳಿಗೆ ವಿಮಾನಗಳನ್ನು ತಿರುಗಿಸುವುದು ಸಾಮಾನ್ಯ ಕ್ರಮ ಎಂದು ವಿಮಾನಯಾನ ವಿಶ್ಲೇಷಕರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

SCROLL FOR NEXT