ಸಂಗ್ರಹ ಚಿತ್ರ 
ರಾಜ್ಯ

No-parkingನಲ್ಲಿ ಲಾರಿ ಪಾರ್ಕ್ ಮಾಡಿದ ಚಾಲಕರಿಗೆ ಶಾಕ್: ವಾಹನ ವಶಕ್ಕೆ ಪಡೆದು, FIR ದಾಖಲಿಸಿದ ಪೊಲೀಸರು..!

ಕರ್ನಾಟಕ ನೋಂದಣಿ ಹೊಂದಿದ್ದ ಕಂಟೈನರ್ ವಾಹನದ ಚಾಲಕ ಡಿ. ಶಿವಕುಮಾರ್ (35) ಹಾಗೂ ತಮಿಳುನಾಡು ನೋಂದಣಿ ಹೊಂದಿದ್ದ ಮತ್ತೊಂದು ಕಂಟೈನರ್ ವಾಹನದ ಚಾಲಕ ಎನ್. ಹರ್ಮನ್ (21) ವಿರುದ್ಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ನೋ-ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದ್ದಕ್ಕಾಗಿ ಸಾಮಾನ್ಯವಾಗಿ ದಂಡ ವಿಧಿಸುವ ಅಥವಾ ವಾಹನವನ್ನು ಟೋಯಿಂಗ್ ಮಾಡುವ ಪೊಲೀಸ್ ಇಲಾಖೆ, ಇದೀಗ ಮೊದಲ ಬಾರಿಗೆ ಕಠಿಣ ಕ್ರಮವಾಗಿ ಇಬ್ಬರು ಲಾರಿ ಚಾಲಕರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಅಪರೂಪದ ಘಟನೆ ರಾಮನಗರ ಜಿಲ್ಲೆಯ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ನಾಟಕ ನೋಂದಣಿ ಹೊಂದಿದ್ದ ಕಂಟೈನರ್ ವಾಹನದ ಚಾಲಕ ಡಿ. ಶಿವಕುಮಾರ್ (35) ಹಾಗೂ ತಮಿಳುನಾಡು ನೋಂದಣಿ ಹೊಂದಿದ್ದ ಮತ್ತೊಂದು ಕಂಟೈನರ್ ವಾಹನದ ಚಾಲಕ ಎನ್. ಹರ್ಮನ್ (21) ವಿರುದ್ಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಾರ್ವಜನಿಕ ರಸ್ತೆಯಲ್ಲಿ ಅಪಾಯ ಅಥವಾ ಅಡ್ಡಿ ಉಂಟುಮಾಡಿದ ಆರೋಪದಡಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 285 ಅಡಿಯಲ್ಲಿ ಇಬ್ಬರ ಮೇಲೂ ಎಫ್‌ಐಆರ್ ದಾಖಲಿಸಿದ್ದಾರೆ.

ಸಾಮಾನ್ಯವಾಗಿ ನೋ-ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದರೆ ಪೊಲೀಸರು ಸ್ಥಳದಲ್ಲೇ ದಂಡ ವಸೂಲಿ ಮಾಡುತ್ತಾರೆ ಅಥವಾ ವಾಹನಗಳನ್ನು ಟೋಯಿಂಗ್ ಮಾಡಿ ಠಾಣೆಗೆ ಸಾಗಿಸುತ್ತಾರೆ.

ಕೆಲ ಸಂದರ್ಭಗಳಲ್ಲಿ ಚಾಲಕರು ಸ್ಥಳದಲ್ಲೇ ದಂಡ ಪಾವತಿಸಲು ನಿರಾಕರಿಸಿದರೆ, ನ್ಯಾಯಾಲಯದ ದಂಡ ಪಾವತಿಸಿ ರಸೀದಿ ತೋರಿಸಿದ ಬಳಿಕ ವಾಹನ ಬಿಡುಗಡೆ ಮಾಡಲಾಗುತ್ತದೆ.

ಆದರೆ, ಬಿಡದಿ ಪೊಲೀಸರು ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಎಫ್‌ಐಆರ್ ದಾಖಲಿಸುವ ಮೂಲಕ ಕಠಿಣ ಸಂದೇಶ ರವಾನಿಸಿದ್ದಾರೆ.

ಈ ಕುರಿತು ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, “ನೋ-ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಬಾರದು ಎಂದು ಹಲವು ಬಾರಿ ಜಾಗೃತಿ ಅಭಿಯಾನ ನಡೆಸಿದ್ದೇವೆ. ನಿಯಮ ಉಲ್ಲಂಘಿಸಿದವರಿಂದ ನಿರಂತರವಾಗಿ ದಂಡವೂ ವಸೂಲಿ ಮಾಡಲಾಗುತ್ತಿತ್ತು. ಆದರೂ ಚಾಲಕರು ಇದನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಹೀಗಾಗಿ ಕಠಿಣ ಕ್ರಮ ಕೈಗೊಳ್ಳಬೇಕಾಯಿತು” ಎಂದು ಹೇಳಿದ್ದಾರೆ.

ಇದಲ್ಲದೆ, ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, ಇದೀಗ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕವೇ ನ್ಯಾಯಾಲಯದ ಆದೇಶದ ಮೇರೆಗೆ ವಾಹನ ಬಿಡುಗಡೆ ಸಾಧ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT