ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವು

ಕಾರಿನ ಟೈರ್ ಸ್ಫೋಟಗೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರುಲಹಳ್ಳಿ ಗೇಟ್ ಬಳಿ ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.

ಇಂದು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನ ಟೈರ್ ಸ್ಫೋಟಗೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಮೃತರೆಲ್ಲರೂ ಚಳ್ಳಕೆರೆ ಪಟ್ಟಣದ ನಿವಾಸಿಗಳಾಗಿದ್ದು, ಅವರನ್ನು ಪ್ರಮೋದ್, ರಾಘವೇಂದ್ರ, ಮಲ್ಲಿಕಾರ್ಜುನ್, ಸೋಮ ಮತ್ತು ರುದ್ರೇಶ್ ಎಂದು ಗುರುತಿಸಲಾಗಿದೆ.

ಬಳ್ಳಾರಿಯಿಂದ ಚಳ್ಳಕೆರೆಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಅಪಘಾತ ಸ್ಥಳವನ್ನು ಪರಿಶೀಲಿಸಿದರು ಮತ್ತು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಈ ಸಂಬಂಧ ಮೊಳಕಾಲ್ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

3rd T20I: ಜಿಂಬಾಬ್ವೆ ವಿರುದ್ಧ 35 ರನ್ ಗಳ ಗೆಲುವು, 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ಬಿಹಾರ: ಹಿಂಸಾಚಾರಕ್ಕೆ ತಿರುಗಿದ Gen-Z NEET ಪ್ರತಿಭಟನೆ; ಕಲ್ಲು ತೂರಾಟ, BDO Ritesh ತಲೆಬುರುಡೆಗೆ ತೀವ್ರ ಗಾಯ!

'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ

ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಸೂಚನೆ