ಸಚಿವ ಸತೀಶ್ ಜಾರಕಿಹೊಳಿ 
ರಾಜ್ಯ

ಮುಂದಿನ KPCC ಅಧ್ಯಕ್ಷ: ವದಂತಿ ತಳ್ಳಿಹಾಕಿದ ಸಚಿವ ಸತೀಶ್ ಜಾರಕಿಹೊಳಿ! ಹೇಳಿದ್ದೇನು? Video

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಪಕ್ಷದ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮುಂದಿನ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಇಂತಹ ಊಹಾಪೋಹಗಳನ್ನು ಅವರು ತಳ್ಳಿಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಿ, ದೆಹಲಿಯಿಂದ ಹಿಂದಿರುಗಿದ ನಂತರವೇ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ಅವರು ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಪಕ್ಷದ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ದೆಹಲಿಗೆ ಹೋಗಿದ್ದಾರೆ. ಅವರು ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ. ಅವರು ಏನೇ ನಿರ್ಧಾರ ತೆಗೆದುಕೊಂಡರೂ ನಾವು ಸ್ವೀಕರಿಸುತ್ತೇವೆ. ಸಿದ್ದರಾಮ್ಯ ದೆಹಲಿಯಿಂದ ವಾಪಾಸ್ಸಾದ ನಂತರ ಸೋನಿಯಾ ಮತ್ತು ರಾಹುಲ್ ಗಾಂಧಿ ಜೊತೆಗಿನ ಮಾತುಕತೆಯ ಸಮಯದಲ್ಲಿ ಏನಾಯಿತು ಎಂಬುದರ ಕುರಿತು ನಾವು ಚರ್ಚಿಸುತ್ತೇವೆ ಮತ್ತು ನಂತರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ" ಎಂದು ಜಾರಕಿಹೊಳಿ ಹೇಳಿದರು.

ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸಂಪುಟ ರಚನೆಯ ಕುರಿತು ಚರ್ಚೆಗಳು ಇನ್ನೂ ಆರಂಭವಾಗಿಲ್ಲ ಎಂದು ಹೇಳಿದರು. ನಾನು ಸ್ವತಃ ಆಕಾಂಕ್ಷಿಯಲ್ಲ. ಚರ್ಚೆಗಳು ಇನ್ನೂ ಆರಂಭವಾಗಿಲ್ಲ. ಚರ್ಚೆಗಳು ನಡೆದಾಗ, ಈ ವಿಷಯದ ಬಗ್ಗೆ ನಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು. ಹೊಸ ಸರ್ಕಾರದ ಸಂಭಾವ್ಯ ಸಂಪುಟ ರಚನೆ, ಉಪಮುಖ್ಯಮಂತ್ರಿಗಳ ಸಂಖ್ಯೆಯ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಶನಿವಾರ ಸಂಜೆಯ ವೇಳೆಗೆ ಚಿತ್ರಣ ಸ್ಪಷ್ಟವಾಗುತ್ತದೆ ಎಂದು ಜಾರಕಿಹೊಳಿ ಹೇಳಿದರು.

ಎಷ್ಟು ಡಿಸಿಎಂ ನೇಮಿಸಲಾಗುತ್ತದೆಯೋ ಇಲ್ಲವೋ ಎಂಬುದು ನನಗೆ ತಿಳಿದಿಲ್ಲ. ನಾಳೆ ಸಂಜೆಯ ವೇಳೆಗೆ ಎಲ್ಲವೂ ಸಂಪೂರ್ಣವಾಗಿ ಸ್ಪಷ್ಟವಾಗುತ್ತದೆ. ಸಿದ್ಧತೆಗಳು ಸರಳವಾಗಿರುತ್ತವೆ, ಅದರಲ್ಲಿ ಪ್ರಮುಖವಾದದ್ದೇನೂ ಇಲ್ಲ. ಸೋಮವಾರದೊಳಗೆ ಅದು ಪೂರ್ಣಗೊಳ್ಳುವ ಸಾಧ್ಯತೆಯಿದೆ. ಸೋಮವಾರ ಅಥವಾ ಮಂಗಳವಾರದೊಳಗೆ ಅದನ್ನು ಅಂತಿಮಗೊಳಿಸಲಾಗುವುದು ಎಂದು ನಾವು ಕೇಳಿದ್ದೇವೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಲಾರಕ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರ: ಜೋರ್ಡಾನ್‌ನ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ!

ನಾಗೇಂದ್ರ ರಾಜೀನಾಮೆಗೆ ರಾಜ್ಯಪಾಲರ ಅಂಗೀಕಾರ: ಸಂಪುಟದ ಎರಡು ಖಾಲಿ ಸ್ಥಾನ ಭರ್ತಿಗೆ ದೆಹಲಿಗೆ ತೆರಳಿದ ಸಿಎಂ ಡಿಕೆಶಿ!

ಮಧ್ಯಪ್ರದೇಶ: ಚಿತ್ರಕೂಟದಲ್ಲಿ 2 ದಶಕಗಳಲ್ಲೇ ಅತ್ಯಂತ ಭೀಕರ ಪ್ರವಾಹ, ಉಕ್ಕಿ ಹರಿದ ಮಂದಾಕಿನಿ ನದಿ; 1,000 ಜನರ ರಕ್ಷಣೆ

ಕೃಷ್ಣ ಜನ್ಮಾಷ್ಟಮಿಗೂ ಮುನ್ನ ಮಥುರಾದಲ್ಲಿ ಬಿಗಿ ಭದ್ರತೆ

ಉದ್ಯಾನವನದ 5% ಭೂಮಿ ಪರಭಾರೆಗೆ ವಿರೋಧ; ಲಾಲ್‌ಬಾಗ್ ನಲ್ಲಿ ಜನಾಂದೋಲನ; ಉದ್ಯಾನ ರಕ್ಷಣೆ ಅಪರಾಧವಾದರೆ ಪ್ರತಿದಿನ ಅಪರಾಧ ಮಾಡ್ತೇನೆ- ತೇಜಸ್ವಿ ಸೂರ್ಯ